AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Price Hike in Karnataka: ಇಂದಿನಿಂದ ದುಬಾರಿ ದುನಿಯಾ, ಯಾವೆಲ್ಲ ವಸ್ತುಗಳ ಬೆಲೆ ಏರಿಕೆ? ಇಲ್ಲಿದೆ ಪಟ್ಟಿ

ಹಾಲು, ಮೊಸರು, ವಿದ್ಯುತ್, ಟೋಲ್ ಸೇರಿದಂತೆ ಅನೇಕ ವಸ್ತು ಹಾಗೂ ಸೇವೆಗಳ ದರ ಇಂದಿನಿಂದ (ಏಪ್ರಿಲ್ 1) ಏರಿಕೆಯಾಗಿದೆ. ಏಕಾಏಕಿ ಹಲವಾರು ವಸ್ತುಗಳ ದರ ಏರಿಕೆ ಜನರನ್ನು ಕಂಗಾಲಾಗಿಸುವುದಂತೂ ನಿಜ. ಹಾಗಾದರೆ, ಯಾವೆಲ್ಲ ವಸ್ತು / ಸೇವೆಗಳ ದರ ಎಷ್ಟು ಹೆಚ್ಚಾಗಿದೆ? ಇಲ್ಲಿದೆ ವಿವರ.

Price Hike in Karnataka: ಇಂದಿನಿಂದ ದುಬಾರಿ ದುನಿಯಾ, ಯಾವೆಲ್ಲ ವಸ್ತುಗಳ ಬೆಲೆ ಏರಿಕೆ? ಇಲ್ಲಿದೆ ಪಟ್ಟಿ
ಸಾಂದರ್ಭಿಕ ಚಿತ್ರ
Follow us
ಶಾಂತಮೂರ್ತಿ
| Updated By: Ganapathi Sharma

Updated on:Apr 01, 2025 | 8:06 AM

ಬೆಂಗಳೂರು, ಏಪ್ರಿಲ್ 1: ದುಬಾರಿ ದುನಿಯಾ… ಇಂದಿನಿಂದಲೇ ಕರ್ನಾಟಕ (Karnataka) ಜನರಿಗೆ ಬೆಲೆ ಏರಿಕೆಯ (Price Hike) ಬರೆ ಬೀಳುತ್ತಿದೆ. ಸಾಲು ಸಾಲು ಬೆಲೆ ಏರಿಕೆಯ ಬೆಂಕಿ ಸಾಮಾನ್ಯ ಜನರ ಮತ್ತು ಬಡವರ ಜೇಬು ಸುಡಲಿವೆ. ಹಾಲು, ಮೊಸರು, ವಿದ್ಯುತ್, ಟೋಲ್, ಮುದ್ರಾಂಕ ಶುಲ್ಕ ಸೇರಿ ಅನೇಕ ವಸ್ತುಗಳು ಅಥವಾ ಸೇವೆಗಳ ದರ ಏರಿಕೆ ಜಾರಿಗೆ ಬಂದಿದೆ. ಮತ್ತೊಂದೆಡೆ, ಕಸ ಸಂಗ್ರಹ ಸೆಸ್ ಕೂಡ ಜಾರಿಯಾಗುತ್ತಿದೆ. ಇಂದಿನಿಂದ ಯಾವೆಲ್ಲ ವಸ್ತು, ಸೇವೆಗಳ ದರ ಎಷ್ಟು ಹೆಚ್ಚಳವಾಗಿದೆ ಎಂಬ ಮಾಹಿತಿ ಇಲ್ಲಿದೆ.

ಹಾಲು, ಮೊಸರಿನ ದರ ₹4 ಏರಿಕೆ

ಇಂದಿನಿಂದ ನಂದಿನಿ ಹಾಲಿನ ಎಲ್ಲಾ ಮಾದರಿಯ ಪ್ಯಾಕೆಟ್​ ದರ ಪ್ರತಿ ಲೀಟರ್​ಗೆ 4 ರೂಪಾಯಿ ಏರಿಕೆಯಾಗಿದೆ. ಜೊತೆಗೆ ಮೊಸರಿನ ದರವೂ ಪ್ರತಿ ಲೀಟರ್​​ಗೆ 4 ರೂಪಾಯಿ ಏರಿಕೆಯಾಗಿದೆ.

ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ

ಇಂದಿನಿಂದ ಪ್ರತಿಯೂನಿಟ್​ಗೆ 36 ಪೈಸೆ ವಿದ್ಯುತ್ ದರ ಏರಿಕೆಯಾಗಿದೆ. ಇದರ ಜೊತೆಗೆ ಮಾಸಿಕ ಶುಲ್ಕವೂ 20 ರೂಪಾಯಿ ಹೆಚ್ಚಳವಾಗುತ್ತಿದೆ. ಇದರಿಂದ 120 ರೂಪಾಯಿ ಇದ್ದ ನಿಗದಿತ ಶುಲ್ಕ, 140 ರೂಪಾಯಿಗೆ ಏರಿಕೆಯಾಗಲಿದೆ. ಗೃಹಜ್ಯೋತಿ ಬಳಕೆದಾರರು 200 ಯೂನಿಟ್ ದಾಟಿದರೆ, ಬೆಲೆ ಏರಿಕೆ ಬಿಸಿ ತಟ್ಟಲಿದೆ.

ಇದನ್ನೂ ಓದಿ
Image
ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಇಳಿಕೆ
Image
ದುಪ್ಪಟ್ಟಾಗಲಿದೆ ಲಿಫ್ಟ್, ಜನರೇಟರ್ ತಪಾಸಣೆ ಹಾಗೂ ರಿನೀವಲ್ ಶುಲ್ಕ
Image
ಮತ್ತೆ ಬೆಲೆ ಏರಿಕೆ ಬರೆ:ನಂದಿನಿ ಹಾಲಿನ ದರ ಏರಿಕೆಗೆ ಸಂಪುಟ ಗ್ರೀನ್ ಸಿಗ್ನಲ್
Image
ಹಾಲಿನ ದರ ಹೆಚ್ಚಳ: ಹೋಟೆಲ್​​ಗಳಲ್ಲಿ ಏರಿಕೆಯಾಗುತ್ತಾ ಚಹಾ, ಕಾಫಿ ದರ?

ಬಿಬಿಎಂಪಿ ಕಸ ಸಂಗ್ರಹದ ಮಾಸಿಕ ಸೆಸ್​ ಹೆಚ್ಚಳ

ಹಾಲು, ವಿದ್ಯುತ್ ಜೊತೆ ರಾಜಧಾನಿ ಬೆಂಗಳೂರಿನ ಜನರಿಗೆ ಕಸದ ಸಂಗ್ರಹದ ಸೆಸ್​ ಹೆಚ್ಚಳ ಮಾಡಿರುವುದು ಶಾಕ್ ಕೊಡಲಿದೆ. ವಸತಿ ಕಟ್ಟಡಗಳಿಗೆ 600 ಚದರಡಿವರೆಗೆ 10 ರೂಪಾಯಿ ಸೆಸ್ ಇರಲಿದ್ದು, 601 ರಿಂದ ಸಾವಿರ ಚದರಡಿವರೆಗೆ 50 ರೂಪಾಯಿ ಇರಲಿದೆ. ಇನ್ನು 1001 ರಿಂದ 2 ಸಾವಿರ ಚದರಡಿವರೆಗೂ 100 ರೂಪಾಯಿ, 2001 ರಿಂದ 3000 ಚದರಡಿವರೆಗೂ 150 ರೂಪಾಯಿ, 3001-4000 ಚದರಡಿ 200 ರೂಪಾಯಿ ಇರಲಿದೆ. ಇನ್ನು 4000 ಚದರಡಿ ಮೇಲ್ಪಟ್ಟು ಇದ್ರೆ, 400 ರೂಪಾಯಿ ಕಸದ ಸೆಸ್ ಕೊಡಬೇಕಾಗುತ್ತದೆ.

ವಸತಿ ಕಟ್ಟಡದ ದರ ಒಂದು ರೀತಿಯಾಗಿದ್ರೆ,ವಾಣಿಜ್ಯ ಕಟ್ಟಡಗಳ ಕಸದ ಸಂಗ್ರಹ ಸೆಸ್​ ಕೆಜಿ ರೂಪದಲ್ಲಿ ಇರಲಿದೆ. ಯಾವುದೇ ಒಂದು ವಾಣಿಜ್ಯ ಕಟ್ಟಡದಲ್ಲಿ ನಿತ್ಯ 5 ಕೆಜಿ ಕಸ ಸಂಗ್ರಹ ಮಾಡಿದರೆ ಅದಕ್ಕೆ 500 ರೂಪಾಯಿ ಕೊಡಬೇಕಾಗುತ್ತದೆ. ಇನ್ನು 10 ಕೆಜಿ ಕಸಕ್ಕೆ 1,400ರೂಪಾಯಿ ಇರಲಿದೆ. 25 ಕೆಜಿ ಕಸಕ್ಕೆ 3 ಸಾವಿರ 500 ರೂಪಾಯಿ ಆದ್ರೆ, ನಿತ್ಯ 50 ಕೆಜಿ ಕಸ ಇದ್ರೆ 7,000ರೂಪಾಯಿ ಇರಲಿದೆ. ಇನ್ನು 100 ಕೆಜಿ ಕಸಕ್ಕೆ ಭರ್ತಿ 14 ಸಾವಿರ ರೂಪಾಯಿ ಇರಲಿದೆ.

ಹೊಸ ವಾಹನ ಖರೀದಿಗೆ ಹೆಚ್ಚುವರಿ ಸೆಸ್

ಇಂದಿನಿಂದ ಉಕ್ಕು, ವಾಹನಗಳ ಬಿಡಿಭಾಗಳ ಆಮದು, ಉಕ್ಕುಗಳ ಆಮದು ದರ ಹೆಚ್ಚಾಗುತ್ತಿದೆ. ಇದರ ಪರಿಣಾಮ ಇಂದಿನಿಂದ ಹೊಸ ವಾಹನ ಖರೀದಿಸಿದರೆ ಬೆಲೆ ಹೆಚ್ಚು ತೆರಬೇಕಾಗುತ್ತದೆ.

ಮುದ್ರಾಂಕ ಶುಲ್ಕ, ಅಪಿಡವಿಟ್ ಶುಲ್ಕ ಏರಿಕೆ!

ಮುದ್ರಾಂಕ ಶುಲ್ಕ 50 ರೂಪಾಯಿಯಿಂದ 500 ರೂಪಾಯಿಗೆ ಏರಿಕೆ ಆಗಲಿದ್ದು, ಅಫಿಡವಿಟ್ ಶುಲ್ಕ 20 ರೂಪಾಯಿಯಿಂದ 100 ರೂಪಾಯಿಗೆ ಏರಿಕೆ ಆಗುತ್ತಿದೆ.

ಟೋಲ್​ ದರವೂ ಶೇ 3 ರಿಂದ ಶೇ 5 ರಷ್ಟು ಹೆಚ್ಚಳ

ಇನ್ನು ಹೆದ್ದಾರಿ ಪ್ರಾಧಿಕಾರ ಕೂಡ ಟೋಲ್ ದರವನ್ನು ಶೇಕಡಾ 3 ರಿಂದ 5 ರಷ್ಟು ಹೆಚ್ಚಳ ಮಾಡುತ್ತಿದ್ದು, ಇಂದಿನಿಂದಲೇ ಜಾರಿಗೆ ಬರುತ್ತಿದೆ. ರಾಜ್ಯದ ಒಟ್ಟು 66 ಟೋಲ್​ ಪ್ಲಾಜಾಗಳಲ್ಲಿನ ದರ ಏರಿಕೆ ವಾಹನ ಸವಾರರಿಗೆ ಬಿಸಿ ತಟ್ಟಲಿದೆ.

ಲಿಫ್ಟ್​, ಟ್ರಾನ್ಸ್​ಫಾರ್ಮರ್ ರಿನಿವಲ್ ಶುಲ್ಕ ಏರಿಕೆ

ಈ ಮಧ್ಯೆ ಇಂಧನ ಇಲಾಖೆಯ ಡಿಪಾರ್ಟ್​ಮೆಂಟ್ ಆಫ್ ಎಲೆಕ್ಟ್ರಿಲ್ ಇನ್ಸ್​ಪೆಕ್ಟೋರೇಟ್ ಸಹ, ಮನೆಯ ಲಿಫ್ಟ್​ ಪರಿಶೀಲನೆ ಮತ್ತು ರಿನಿವಲ್ ಹಾಗೂ ಟ್ರಾನ್ಸ್​ಫಾರ್ಮರ್ ಪರಿಶೀಲನೆ ಮತ್ತು ರಿನಿವಲ್ ಮಾಡುವ ಶುಲ್ಕವನ್ನು  ದುಪಟ್ಟು ಹೆಚ್ಚಿಸಿದೆ.

ಇದನ್ನೂ ಓದಿ: ಹಾಲಿನ ದರ ಹೆಚ್ಚಳ ಪರಿಣಾಮ: ಕರ್ನಾಟಕದ ಹೋಟೆಲ್​​ಗಳಲ್ಲಿ ಏರಿಕೆಯಾಗುತ್ತಾ ಚಹಾ, ಕಾಫಿ ದರ?

ಮನೆ 3 ಫ್ಲೋರ್ ಇದ್ದು ಲಿಫ್ಟ್ ಬಳಸುತ್ತಿದ್ದರೆ, ಅದರ ಪರಿಶೀಲನೆ ಮತ್ತು ರಿನಿವಲ್​ಗೆ ಈವರೆಗೆ 800 ರೂಪಾಯಿಯಿಂದ 1 ಸಾವಿರ ರೂಪಾಯಿ ಇತ್ತು. ಅದು ಈಗ 5 ಸಾವಿರ ರೂಪಾಯಿಯಿಂದ 8 ಸಾವಿರ ರೂಪಾಯಿಗೆ ಏರಿಕೆಯಾಗಲಿದೆ. ಫ್ಲೋರ್​ಗಳು ಏರಿಕೆಯಾದಂತೆ ದರವೂ ಹೆಚ್ಚಾಗಲಿದೆ.

25 ಕೆವಿಎ ಟ್ರಾನ್ಸ್​ಫಾರ್ಮರ್ ರಿನಿವಲ್

ಇನ್ನು ಮನೆ, ಕಚೇರಿ ಹಾಗೂ ಫ್ಯಾಕ್ಟರಿಗಳ 25 ಕೆವಿಎ ಟ್ರಾನ್ಸ್​ಫಾರ್ಮರ್​ ಪರಿಶೀಲನೆ ಮತ್ತು ರಿನಿವಲ್​ಗೆ ಸದ್ಯ 1,300 ರೂಪಾಯಿಂದ 1500 ರೂಪಾಯಿ ಇದೆ. ಇದು ಇಂದಿನಿಂದ 3 ಸಾವಿರ ರೂಪಾಯಿಯಿಂದ 5 ಸಾವಿರ ರೂಪಾಯಿಗೆ ಏರಿಕೆಯಾಗಲಿದೆ. ಈ ಬೆಲೆ ಏರಿಕೆಗೆ FKCCI ಅಧ್ಯಕ್ಷರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಲೆ ಏರಿಕೆ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಲೆ ಏರಿಕೆ ವಿರುದ್ಧ ಬಿಜೆಪಿ ಕಿಡಿಕಾರಿದೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬುಧವಾರ ಮತ್ತು ಏಪ್ರಿಲ್‌ 5ಕ್ಕೆ ರಾಜ್ಯದ ಎಲ್ಲಾ, ಜಿಲ್ಲೆ, ತಾಲೂಕುಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: ದುಪ್ಪಟ್ಟಾಗಲಿದೆ ಲಿಫ್ಟ್, ಜನರೇಟರ್ ತಪಾಸಣೆ ಹಾಗೂ ರಿನೀವಲ್ ಶುಲ್ಕ: ಮತ್ತೊಂದು ಬೆಲೆ ಏರಿಕೆಗೆ ಮುಂದಾದ ಇಂಧನ ಇಲಾಖೆ

ಒಟ್ಟಿನಲ್ಲಿ ಮೊದಲೇ ಬೆಲೆ ಏರಿಕೆಯಿಂದ ಬಸವಳಿದ ಜನರಿಗೆ ಇಂದಿನಿಂದ ಜಗತ್ತು ಮತ್ತಷ್ಟು ದುಬಾರಿಯಾಗುವುದು ನಿಶ್ಚಿತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 am, Tue, 1 April 25

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ