AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ರ್ಯಾಂಕಿಂಗ್​ ವಿಚಾರದಲ್ಲಿ ಕೆಇಎ ತೀರ್ಮಾನ ಸರಿಯಾಗಿದೆ: ಸಚಿವ ಅಶ್ವತ್​ ನಾರಾಯಣ

ಸಿಇಟಿ ಪರೀಕ್ಷೆಯಲ್ಲಿ ಮೊದಲಿನಿಂದಲೂ ಸಿಇಟಿ ಮತ್ತು ಪಿಯುಸಿ ಪರೀಕ್ಷೆ ಅಂಕ ಶೇ. 50ರಷ್ಟು ಪರಿಗಣಿಸಿ ರ್ಯಾಂಕ್ ನೀಡಲಾಗುತ್ತಿದ್ದು, ಕೆಇಎ ಉತ್ತಮವಾಗಿ ಕಾರ್ಯ ನಿರ್ವಹಿಸಿಕೊಂಡು ಬಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ.

ಸಿಇಟಿ ರ್ಯಾಂಕಿಂಗ್​ ವಿಚಾರದಲ್ಲಿ ಕೆಇಎ ತೀರ್ಮಾನ ಸರಿಯಾಗಿದೆ: ಸಚಿವ ಅಶ್ವತ್​ ನಾರಾಯಣ
ಡಾ ಸಿ ಎನ್ ಅಶ್ವಥ್ ನಾರಾಯಣ
TV9 Web
| Edited By: |

Updated on:Aug 02, 2022 | 5:47 PM

Share

ಬೆಂಗಳೂರು: ಸಿಇಟಿ (CET) ಪರೀಕ್ಷೆಯಲ್ಲಿ ಮೊದಲಿನಿಂದಲೂ ಸಿಇಟಿ ಮತ್ತು ಪಿಯುಸಿ ಪರೀಕ್ಷೆ ಅಂಕ ಶೇ. 50ರಷ್ಟು ಪರಿಗಣಿಸಿ ರ್ಯಾಂಕ್ ನೀಡಲಾಗುತ್ತಿದ್ದು, ಕೆಇಎ (KEA) ಉತ್ತಮವಾಗಿ ಕಾರ್ಯ ನಿರ್ವಹಿಸಿಕೊಂಡು ಬಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ (Ashwath Narayan) ಹೇಳಿದ್ದಾರೆ. ಸಿಇಟಿ ರ್ಯಾಂಕಿಗ್​​ ಪಟ್ಟಿಯಲ್ಲಿ ಗೊಂದಲ ಹಿನ್ನೆಲೆ ವಿಕಾಸಸೌಧದಲ್ಲಿ ಸಭೆ ನಡೆಸಿ ಮಾತನಾಡಿದ ಅವರು ಕೊರಾನಾ ಬಂದ ಹಿನ್ನೆಲೆಯಲ್ಲಿ 2020-21 ರಲ್ಲಿ ಕ್ವಾಲಿಫೈ ಮಾಡಿ ಪಿಯುಸಿ ಅಂಕ ಪರಿಗಣಿಸಿರಲಿಲ್ಲ. ಸಿಇಟಿ ಪರೀಕ್ಷೆ ಮಾಡಿ ಅದರ ಅಂಕ ಮಾತ್ರ ನೀಡಲಾಗಿತ್ತು ಎಂದು ತಿಳಿಸಿದರು.

2022ರ ವಿದ್ಯಾರ್ಥಿಗಳಿಗೆ ಎರಡೂ ಪರೀಕ್ಷೆ ಅಂಕ ಪರಿಗಣಿಸಿ ನೀಡಲಾಗಿದೆ. ಎಸ್ ಎಸ್ ಎಲ್ ಸಿ 40 ಪ್ರತಿಶತ, ಪ್ರಥಮ ಪಿಯುಸಿ 40 ಪ್ರತಿಶತ, ಗುಡ್ ಬಿಹೇವಿಯರ್ 10 ಪ್ರತಿಶತ ಮತ್ತು ಇಂಟರ್ನಲ್ ಅಸೆಸ್ಮೆಂಟ್ 10 ಪ್ರತಿಶತ ಅಂತ ಗುರುತಿಸಿ ಅಂಕ ನೀಡಲಾಗಿತ್ತು ಎಂದರು.

ಈ ಬಾರಿ ಕಳೆದ ಬಾರಿಗಿಂತ ಹೆಚ್ಚು ಮಾನದಂಡದಿಂದ ಪಾಸ್ ಆಗಿದ್ದಾರೆ. ಹೀಗಾಗಿ ಈ ಬಾರಿ ಕೆಇಎ ಮಾಡಿರುವ ನಿರ್ಧಾರ ಸರಿ ಇದೆ. 2021ರ ಬ್ಯಾಚ್‌ನವರಿಗೆ ಕಳೆದ ಬಾರಿಯೇ ಅವಕಾಶ ಸಿಕ್ಕಿತ್ತು. ಹಾಗಾಗಿ ಈ ವರ್ಷ ತೆಗೆದುಕೊಂಡ ನಿರ್ಣಯ ಸರಿ ಇದೆ ಎಂದು ತಿಳಿಸಿದ್ದಾರೆ.

ಐಸಿಎಸ್​ಸಿ, ಸಿಬಿಎಸ್​ಇ ಕೆಲವರಿಗೆ ನೀಡಲಾಗಿದೆ ಅಂತ ಆರೋಪ ಇದೆ. ಅವುಗಳನ್ನು ಹುಡುಕಿ ಅದನ್ನೂ ತೆಗೆದು ಹಾಕಲಾಗಿದೆ. ಐಸಿಎಸ್​ಇ, ಸಿಬಿಎಸ್​ಇ ವಿದ್ಯಾರ್ಥಿಗಳಿಗೂ ವಿತ್ ಡ್ರಾ ಮಾಡಿದ್ದೇವೆ ಎಂದು ಮಾತನಾಡಿದ್ದಾರೆ.

Published On - 5:46 pm, Tue, 2 August 22

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​