AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಗನಾಥಸ್ವಾಮಿ ದೇಗುಲಕ್ಕೆ ಸಚಿವ ರಾಮುಲು ಭೇಟಿ, ಕಾಯಕಲ್ಪದ ಭರವಸೆ

ಚಿತ್ರದುರ್ಗ: ಹೊಳಲ್ಕೆರೆ, ಹೊಸದುರ್ಗ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ಶ್ರೀರಾಮುಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಇತ್ತೀಚೆಗೆ ಹಾನಿಗೊಳಗಾಗಿದ್ದ ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲಕ್ಕೂ ಶ್ರೀರಾಮುಲು ಭೇಟಿ ನೀಡಿದ್ದಾರೆ. ಹೊಳಲ್ಕೆರೆ ತಾಲೂಕಿನ ಲೋಕದೊಳಲು ಗ್ರಾಮದಲ್ಲಿ ಭಾರೀ ಮಳೆಯಿಂದ ಗುಡ್ಡ ಕುಸಿದು ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲ ಹಾನಿಯಾಗಿತ್ತು. ಹೀಗಾಗಿ ದೇವಾಲಯಕ್ಕೆ ಭೇಟಿ ನೀಡಿದ ಸಚಿವರು ದೇವಾಲಯದ ಕಾಯಕಲ್ಪಕ್ಕೆ ಭರವಸೆ ನೀಡಿದ್ದಾರೆ. ಇನ್ನು ಇದೇ ವೇಳೆ ಕೆರೆ ಏರಿ ಹೊಡೆದ ನೀರಗುಂದ ಕೆರೆ, ಬೆಳೆನಾಶ ಸ್ಥಳಕ್ಕೆ ಭೇಟಿ […]

ರಂಗನಾಥಸ್ವಾಮಿ ದೇಗುಲಕ್ಕೆ ಸಚಿವ ರಾಮುಲು ಭೇಟಿ, ಕಾಯಕಲ್ಪದ ಭರವಸೆ
ಸಾಧು ಶ್ರೀನಾಥ್​
|

Updated on:Oct 24, 2019 | 5:20 PM

Share

ಚಿತ್ರದುರ್ಗ: ಹೊಳಲ್ಕೆರೆ, ಹೊಸದುರ್ಗ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ಶ್ರೀರಾಮುಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಇತ್ತೀಚೆಗೆ ಹಾನಿಗೊಳಗಾಗಿದ್ದ ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲಕ್ಕೂ ಶ್ರೀರಾಮುಲು ಭೇಟಿ ನೀಡಿದ್ದಾರೆ.

ಹೊಳಲ್ಕೆರೆ ತಾಲೂಕಿನ ಲೋಕದೊಳಲು ಗ್ರಾಮದಲ್ಲಿ ಭಾರೀ ಮಳೆಯಿಂದ ಗುಡ್ಡ ಕುಸಿದು ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲ ಹಾನಿಯಾಗಿತ್ತು. ಹೀಗಾಗಿ ದೇವಾಲಯಕ್ಕೆ ಭೇಟಿ ನೀಡಿದ ಸಚಿವರು ದೇವಾಲಯದ ಕಾಯಕಲ್ಪಕ್ಕೆ ಭರವಸೆ ನೀಡಿದ್ದಾರೆ. ಇನ್ನು ಇದೇ ವೇಳೆ ಕೆರೆ ಏರಿ ಹೊಡೆದ ನೀರಗುಂದ ಕೆರೆ, ಬೆಳೆನಾಶ ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಪರಿಹಾರದ ಭರವಸೆ ನೀಡಿದ್ದಾರೆ. ಇದೇ ವೇಳೆ, ಸಾಣೇಹಳ್ಳಿ ಮಠಕ್ಕೆ ಭೇಟಿ‌ ನೀಡಿದ ಸಚಿವ ಶ್ರೀರಾಮುಲು, ಡಾ. ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಅವರನ್ನ ಭೇಟಿ‌‌ ಮಾಡಿದರು.

ಘಟನೆ ಹಿನ್ನೆಲೆ: ಬರದನಾಡು ಚಿತ್ರದುರ್ಗದಲ್ಲಿ ಒಂದೇ ಸಮನೆ ಮಳೆಯಾದ ಕಾರಣ ಬೃಹತ್ ಬೆಟ್ಟವೇ ಕುಸಿದಿತ್ತು. ಜೊತೆಗೆ ಬೆಟ್ಟದಲ್ಲಿದ್ದ ಪುರಾತನ ದೇಗುಲ ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲಕ್ಕೆ ಹಾನಿಯಾಗಿತ್ತು. ಬೆಟ್ಟದ ಕೆಳಭಾಗದಲ್ಲಿನ ಹನುಮಪ್ಪ ದೇಗುಲಕ್ಕೂ ಹಾನಿಯಾಗಿತ್ತು. ಆದರೆ ಬೆಟ್ಟ ಕುಸಿತದ ನಡುವೆ ಅಚ್ಚರಿ ರೀತಿಯಲ್ಲಿ ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲದ ಗರ್ಭಗುಡಿಯಲ್ಲಿದ್ದ ರಂಗನಾಥಸ್ವಾಮಿ ವಿಗ್ರಹ ಮಾತ್ರ ಉಳಿದುಕೊಂಡಿತ್ತು. ಇದು ಸುತ್ತಮುತ್ತಲಿನ ಜನಕ್ಕೆ ಭಾರಿ ಕುತೂಹಲ ಉಂಟುಮಾಡಿತ್ತು.

Published On - 5:09 pm, Thu, 24 October 19

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?