AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳ ಮರು ಆರಂಭದ ಕುರಿತು ಸಚಿವ ಬಿಸಿ ನಾಗೇಶ್ ಮಹತ್ವದ ಹೇಳಿಕೆ; ಇಲ್ಲಿದೆ ಪೂರ್ಣ ಮಾಹಿತಿ

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕೊರೊನಾ ನಿಯಮಾವಳಿಗಳ ಕುರಿತು ಚರ್ಚೆ ನಡೆಯಲಿದೆ. ರಾಜ್ಯದಲ್ಲಿ ಶಾಲೆಗಳನ್ನು ಮರುಆರಂಭಿಸುವ ಕುರಿತು ಸಚಿವ ಬಿಸಿ ನಾಗೇಶ್ ಮಾಹಿತಿ ನೀಡಿದ್ದಾರೆ.

ಶಾಲೆಗಳ ಮರು ಆರಂಭದ ಕುರಿತು ಸಚಿವ ಬಿಸಿ ನಾಗೇಶ್ ಮಹತ್ವದ ಹೇಳಿಕೆ; ಇಲ್ಲಿದೆ ಪೂರ್ಣ ಮಾಹಿತಿ
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
TV9 Web
| Updated By: shivaprasad.hs|

Updated on:Jan 21, 2022 | 9:31 AM

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಇಂದಿನ ಸಭೆಯಲ್ಲಿ ಶಾಲೆ ಆರಂಭಿಸಲು ಅನುಮತಿ ಸಿಕ್ಕಿದರೆ ತಕ್ಷಣವೇ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ & ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಟಿವಿ9ಗೆ ಮಾಹಿತಿ ನೀಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಕೊರೊನಾ ಏರಿಕೆಯ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ದೃಷ್ಟಿಕೋನದಿಂದ ಕೊರೊನಾ ಏರಿಕೆ ಇದ್ದರೂ ಶಾಲೆ ಪುನರಾರಂಭಿಸಬೇಕು ಎಂಬ ಚಿಂತನೆಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದಲ್ಲಿ ನಡೆಯಲಿರುವ ಸಭೆ ಮಹತ್ವ ಪಡೆದುಕೊಂಡಿದೆ. ಸಭೆಯಲ್ಲಿ ಶಾಲೆಗಳ ಕುರಿತು ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಬಹುದು, ಸರ್ಕಾರ ಚಿಂತನೆಗಳೇನು ಎಂಬುದನ್ನು ಸಚಿವ ಬಿಸಿ ನಾಗೇಶ್ (BC Nagesh) ಮಾತನಾಡಿದ್ದಾರೆ. ಪ್ರಸ್ತುತದ ಸ್ಥಿತಿಗತಿ ವಿವರಿಸಿದ ಸಚಿವರು, ಆಯಾ ಪ್ರದೇಶಗಳಿಗೆ ತಕ್ಕಂತೆ ನಿರ್ಧಾರ ಕೈಗೊಳ್ಳಲು ಜಿಲ್ಲಾಧಿಕಾರಿಯವರಿಗೆ ಸೂಚಿಸಲಾಗಿದೆ. ನಗರ- ಮಹಾನಗರಗಳಲ್ಲಿ ಪ್ರಕರಣ ಏರಿಕೆಯಿದೆ. ಆದರೆ ಗ್ರಾಮಾಂತರ ಹಾಗೂ ತಾಲೂಕು ಪ್ರದೇಶಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿಲ್ಲ. ಮಹಾನಗರಗಳನ್ನು ಹೊರತುಪಡಿಸಿ ಒಟ್ಟು 246 ಶಾಲೆಗಳನ್ನು ಮಾತ್ರ ಬಂದ್ ಮಾಡಲಾಗಿದೆ. ಅದೂ ಕೂಡ 3-5 ದಿನದ ಕಂಡೀಷನ್ ಮೇಲೆ ಕ್ಲೋಸ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಚಿವ ಬಿಸಿ ನಾಗೇಶ್ ಹೇಳಿದ್ದೇನು? ಮುಖ್ಯಮಂತ್ರಿಯವರ ಸಲಹೆ ಮೇರೆಗೆ, ಜಿಲ್ಲಾಧಿಕಾರಿಗಳಿಗೆ ಶಾಲೆಗಳನ್ನು ಪುನಾರಂಭ ಮಾಡಲು ಅನುಮತಿ ಕೇಳುತ್ತೇವೆ. ಸಿಎಂ ಸಭೆಯಲ್ಲಿ ಅನುಮತಿ ಸಿಕ್ಕಿದರೆ ತಕ್ಷಣವೇ ಶಾಲೆ ಆರಂಭ ಮಾಡಲಾಗುವುದು ಎಂದು ನಾಗೇಶ್ ಹೇಳಿಕೆ ನೀಡಿದ್ದಾರೆ. 1-9ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಅನುಮತಿ ನೀಡದಿದ್ದರೆ, 5ರಿಂದ 9ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಪರ್ಯಾಯ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಶಾಲೆ ಆರಂಭವಿಲ್ಲ ಎಂದಾದರೆ ವಿದ್ಯಾಗಮ ಆರಂಭಕ್ಕೆ ಅನುಮತಿ ನೀಡುವಂತೆ ಕೇಳುತ್ತೇವೆ. ಸಿಎಂ ಸಭೆಯಲ್ಲಿ ಅನುಮತಿ ನೀಡಿದರೆ ಶಾಲೆ ಆರಂಭಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಂತೆ ಇಲಾಖೆ ಎಂದಿಗೂ ಶ್ರಮಿಸಲಿದೆ. ತಜ್ಞರ ಸಲಹೆ ಮೇರೆಗೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಒಂದು ವೇಳೆ ತಜ್ಞರು ಶಾಲೆ ಆರಂಭಿಸಲು ಸಲಹೆ ನೀಡಿದರೆ ಆರಂಭಿಸಲಾಗುತ್ತದೆ. ಒಂದು ವೇಳೆ ಶಾಲೆ ಆರಂಭವಿಲ್ಲ ಎಂದಾದರೆ ವಿದ್ಯಾಗಮಕ್ಕೆ ಅನುಮತಿ ನೀಡುವಂತೆ ಕೇಳುತ್ತೇವೆ ಎಂದು ಸಚಿವರು ನುಡಿದಿದ್ದಾರೆ.

ಬೆಂಗಳೂರು ಮಹಾನಗರದ ದೃಷ್ಟಿಯಿಂದ ತಾಂತ್ರಿಕ ಸಲಹಾ ಸಮಿತಿ ಇಂದಿನ ಸಭೆಯಲ್ಲಿ ನೀಡುವ ಸಲಹೆಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.

ಇದನ್ನೂ ಓದಿ:

ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದರೆ ಮಹಾನಗರಗಳಲ್ಲೂ ಶಾಲೆ ಓಪನ್​- ಶಿಕ್ಷಣ ಸಚಿವ ಬಿ ಸಿ ನಾಗೇಶ್​

ಹೊಸ ಸಂಸತ್ ಭವನದ ನಿರ್ಮಾಣ ವೆಚ್ಚ ಶೇ.29 ರಷ್ಟು ಹೆಚ್ಚಳ; ಸೆಂಟ್ರಲ್ ವಿಸ್ಟಾ ಯೋಜನೆಯ ಖರ್ಚು ಎಷ್ಟು?

Published On - 9:27 am, Fri, 21 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ