AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿನಿಂದ ಮೃತಪಟ್ಟವರ ಕುಟುಂಬದ ನೆರವಿಗೆ ನಿಂತ ಬಿ.ಸಿ.ಪಾಟೀಲ್​; 50 ಸಾವಿರ ರೂ. ಪರಿಹಾರ ಘೋಷಣೆ

ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್​ ಇಂದಿನಿಂದ ಮೃತರ ಮನೆಗಳಿಗೆ ಸತಃ ತಾವೇ ತೆರಳಿ ಪರಿಹಾರದ ಹಣ ವಿತರಣೆ ಮಾಡಲಿದ್ದಾರೆ.

ಸೋಂಕಿನಿಂದ ಮೃತಪಟ್ಟವರ ಕುಟುಂಬದ ನೆರವಿಗೆ ನಿಂತ ಬಿ.ಸಿ.ಪಾಟೀಲ್​; 50 ಸಾವಿರ ರೂ. ಪರಿಹಾರ ಘೋಷಣೆ
ಬಿ.ಸಿ.ಪಾಟೀಲ್​
preethi shettigar
|

Updated on: May 17, 2021 | 11:46 AM

Share

ಹಾವೇರಿ: ಕೊರೊನಾ ಎರಡನೇ ಅಲೆ ದೇಶದೆಲ್ಲೇಡೆ ತೀವ್ರವಾಗಿ ಹಬ್ಬುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇನ್ನು ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಸಿನಿಮಾ ನಟ-ನಟಿಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದು, ಸೋಂಕಿತರ ನೆರವಿಗೆ ನಿಂತಿದ್ದಾರೆ. ಹೀಗಿರುವಾಗಲೇ ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬದ ನೆರವಿಗೆ ನಿಂತ ಕೃಷಿ ಸಚಿವ ಬಿ.ಸಿ. ಪಾಟೀಲ್ ವೈಯಕ್ತಿಕವಾಗಿ ಐವತ್ತು ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್​ ಇಂದಿನಿಂದ ಮೃತರ ಮನೆಗಳಿಗೆ ಸತಃ ತಾವೇ ತೆರಳಿ ಪರಿಹಾರದ ಹಣ ವಿತರಣೆ ಮಾಡಲಿದ್ದಾರೆ.

ಎರಡನೆ ಅಲೆಯಲ್ಲಿ ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೆ ಮೃತಪಟ್ಟಿರುವವರ ಸಂಖ್ಯೆ ಹದಿನೆಂಟಕ್ಕೆ ಏರಿಕೆಯಾಗಿದೆ. ಸೋಂಕಿತರಾಗಿ ಹೋಂ ಐಸೋಲೇಶನ್​ನಲ್ಲಿರುವವರು ಕೊವಿಡ್ ಕೇರ್ ಸೆಂಟರ್​ಗಳಿಗೆ ದಾಖಲಾಗಿ ಮತ್ತು ಆ ಮೂಲಕ ಕುಟುಂಬ ವರ್ಗದವರಿಗೆ ಕೊರೊನಾ ಸೋಂಕು ತಗುಲದಂತೆ ಎಚ್ಚರಿಕೆ ವಹಿಸುವಂತೆ ಜನರಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಮೈಸೂರು: ಹೋಂ ಐಸೋಲೇಷನ್​ನಲ್ಲಿರೊ ಸೋಂಕಿತರಿಗೆ ವೈದ್ಯಕೀಯ ನೆರವು; ವಿದ್ಯಾರ್ಥಿಗಳಿಂದ ಶ್ಲಾಘನೀಯ ಕಾರ್ಯ

ವ್ಯಕ್ತಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ 18 ಜನರಿಗೆ ಸೋಂಕು, ವಲಸಿಗರಿಂದಲೇ ಕೊರೊನಾ ಹರಡುತ್ತಿದೆ ಎಂಬ ಶಂಕೆ ವ್ಯಕ್ತಪಡಿಸಿದ ತಹಶೀಲ್ದಾರ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!