AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದ ನಂತರ ಎಚ್ಚೆತ್ತು, ಮನೆಬಿಟ್ಟು ಆಸ್ಪತ್ರೆಯಲ್ಲೇ ಲಸಿಕೆ ಹಾಕಿಸಿಕೊಂಡ ಕೃಷಿ ಸಚಿವ ಬಿ ಸಿ ಪಾಟೀಲ್!

ವಿವಾದದ ಸುಳಿಯಲ್ಲಿ ಸಿಕ್ಕ ಬಳಿಕ ಎಚ್ಚೆತ್ತ ಸಚಿವ ಬಿ.ಸಿ. ಪಾಟೀಲ್ ಕೊರೊನಾದ ಎರಡನೇ ಡೋಸ್​ ಲಸಿಕೆಯನ್ನು ಮನೆಯಲ್ಲಿ ಪಡೆಯದೆ ಹಿರೇಕೆರೂರು ಸರ್ಕಾರಿ ಆಸ್ಪತ್ರೆಗೆ ತೆರಳಿ ಲಸಿಕೆ ಪಡೆದಿದ್ದಾರೆ.

ವಿವಾದದ ನಂತರ ಎಚ್ಚೆತ್ತು, ಮನೆಬಿಟ್ಟು ಆಸ್ಪತ್ರೆಯಲ್ಲೇ ಲಸಿಕೆ ಹಾಕಿಸಿಕೊಂಡ ಕೃಷಿ ಸಚಿವ ಬಿ ಸಿ ಪಾಟೀಲ್!
ಬಿ.ಸಿ.ಪಾಟೀಲ್
ಆಯೇಷಾ ಬಾನು
| Edited By: |

Updated on: Apr 02, 2021 | 3:19 PM

Share

ಹಾವೇರಿ: ಮನೆಯಲ್ಲೇ ಕೊರೊನಾ ಲಸಿಕೆ ಪಡೆದು ವಿವಾದ ಮಾಡಿಕೊಂಡಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್ ಎರಡನೇ ಡೋಸ್​ ಲಸಿಕೆಯನ್ನು ಆಸ್ಪತ್ರೆಗೆ ತೆರಳಿ ಪಡೆದಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರು ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾದ ಎರಡನೇ ಡೋಸ್​ ಲಸಿಕೆಯನ್ನು ಬಿ.ಸಿ.ಪಾಟೀಲ್ ಇಂದು ಪಡೆದಿದ್ದಾರೆ.

ಮಾರ್ಚ್ 2 ರಂದು ಬಿ.ಸಿ. ಪಾಟೀಲ್ ಮತ್ತು ಅವರ ಪತ್ನಿ ಆರೋಗ್ಯ ಸಿಬ್ಬಂದಿಯನ್ನು ತಮ್ಮ ಮನೆಗೆ ಕರೆಸಿಕೊಂಡು ಮನೆಯಲ್ಲೇ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು. ಸಚಿವರ ಈ ನಡೆಗೆ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ನರೇಂದ್ರ ಮೋದಿಯವರೇ ಆಸ್ಪತ್ರೆಗೆ ಹೋಗಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಆದರೆ ಸಚಿವನಾಗಿ ಬಿ.ಸಿ. ಪಾಟೀಲ್ ಆರೋಗ್ಯ ಸಿಬ್ಬಂದಿಯನ್ನು ಮನೆಗೆ ಕರೆಸಿ ಲಸಿಕೆ ಹಾಕಿಸಿಕೊಂಡಿರುವುದು ಎಷ್ಟರಮಟ್ಟಿಗೆ ಸರಿ ಎಂಬ ಮಾತುಗಳು ತೂರಿ ಬಂದಿದ್ದವು.

ಇದೇ ವಿಚಾರಕ್ಕೆ ಸಂಬಂಧಿಸಿ ಜಿಲ್ಲಾ ಆರ್‌ಸಿಹೆಚ್ ಡಾ.ಜಯಾನಂದ್‌ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್‌ ನೋಟಿಸ್ ಜಾರಿ ಮಾಡಿದ್ದರು. ನಿನ್ನೆಯಷ್ಟೇ ಹಿರೇಕೆರೂರು ಆರೋಗ್ಯಾಧಿಕಾರಿ (ಟಿಹೆಚ್ಒ) ಡಾ. ಝಡ್​. ಆರ್​. ಮಕಾಂದಾರ್ ಅವರನ್ನು ಅಮಾನತು ಮಾಡಿ ಆರೋಗ್ಯ, ಕುಟುಂಬ ಕಲ್ಯಾಣ‌ ಸೇವೆ ಇಲಾಖೆ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಆದೇಶ ಹೊರಡಿಸಿದರು.

ಈ ವಿವಾದ, ಬೆಳವಣಿಗೆಗಳ ಮಧ್ಯೆ, ಎಚ್ಚೆತ್ತ ಸಚಿವ ಬಿ.ಸಿ. ಪಾಟೀಲ್ ಕೊರೊನಾದ ಎರಡನೇ ಡೋಸ್​ ಲಸಿಕೆಯನ್ನು ಮನೆಯಲ್ಲಿ ಪಡೆಯದೆ ಹಿರೇಕೆರೂರು ಸರ್ಕಾರಿ ಆಸ್ಪತ್ರೆಗೆ ತೆರಳಿ ಲಸಿಕೆ ಪಡೆದಿದ್ದಾರೆ. ಕೆಟ್ಟ ಮೇಲೆ ಬುದ್ಧಿ ಬಂದಂತೆ ವಿವಾದಕ್ಕೆ ಸಿಲುಕಿ ಎಚ್ಚೆತ್ತುಕೊಂಡಿದ್ದಾರೆ.

BC Patil

ಬಿ.ಸಿ.ಪಾಟೀಲ್

ಇದನ್ನೂ ಓದಿ: ಸಚಿವ ಬಿ.ಸಿ.ಪಾಟೀಲ್ ಮನೆಗೇ ಹೋಗಿ ಲಸಿಕೆ ನೀಡಿದ್ದಕ್ಕೆ ವೈದ್ಯಾಧಿಕಾರಿ ಮಕಾಂದಾರ್ ಸಸ್ಪೆಂಡ್

Minister BC Patil takes 2nd dose corona vaccine in haveri hospital

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?