AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದ ನಂತರ ಎಚ್ಚೆತ್ತು, ಮನೆಬಿಟ್ಟು ಆಸ್ಪತ್ರೆಯಲ್ಲೇ ಲಸಿಕೆ ಹಾಕಿಸಿಕೊಂಡ ಕೃಷಿ ಸಚಿವ ಬಿ ಸಿ ಪಾಟೀಲ್!

ವಿವಾದದ ಸುಳಿಯಲ್ಲಿ ಸಿಕ್ಕ ಬಳಿಕ ಎಚ್ಚೆತ್ತ ಸಚಿವ ಬಿ.ಸಿ. ಪಾಟೀಲ್ ಕೊರೊನಾದ ಎರಡನೇ ಡೋಸ್​ ಲಸಿಕೆಯನ್ನು ಮನೆಯಲ್ಲಿ ಪಡೆಯದೆ ಹಿರೇಕೆರೂರು ಸರ್ಕಾರಿ ಆಸ್ಪತ್ರೆಗೆ ತೆರಳಿ ಲಸಿಕೆ ಪಡೆದಿದ್ದಾರೆ.

ವಿವಾದದ ನಂತರ ಎಚ್ಚೆತ್ತು, ಮನೆಬಿಟ್ಟು ಆಸ್ಪತ್ರೆಯಲ್ಲೇ ಲಸಿಕೆ ಹಾಕಿಸಿಕೊಂಡ ಕೃಷಿ ಸಚಿವ ಬಿ ಸಿ ಪಾಟೀಲ್!
ಬಿ.ಸಿ.ಪಾಟೀಲ್
ಆಯೇಷಾ ಬಾನು
| Edited By: |

Updated on: Apr 02, 2021 | 3:19 PM

Share

ಹಾವೇರಿ: ಮನೆಯಲ್ಲೇ ಕೊರೊನಾ ಲಸಿಕೆ ಪಡೆದು ವಿವಾದ ಮಾಡಿಕೊಂಡಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್ ಎರಡನೇ ಡೋಸ್​ ಲಸಿಕೆಯನ್ನು ಆಸ್ಪತ್ರೆಗೆ ತೆರಳಿ ಪಡೆದಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರು ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾದ ಎರಡನೇ ಡೋಸ್​ ಲಸಿಕೆಯನ್ನು ಬಿ.ಸಿ.ಪಾಟೀಲ್ ಇಂದು ಪಡೆದಿದ್ದಾರೆ.

ಮಾರ್ಚ್ 2 ರಂದು ಬಿ.ಸಿ. ಪಾಟೀಲ್ ಮತ್ತು ಅವರ ಪತ್ನಿ ಆರೋಗ್ಯ ಸಿಬ್ಬಂದಿಯನ್ನು ತಮ್ಮ ಮನೆಗೆ ಕರೆಸಿಕೊಂಡು ಮನೆಯಲ್ಲೇ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು. ಸಚಿವರ ಈ ನಡೆಗೆ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ನರೇಂದ್ರ ಮೋದಿಯವರೇ ಆಸ್ಪತ್ರೆಗೆ ಹೋಗಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಆದರೆ ಸಚಿವನಾಗಿ ಬಿ.ಸಿ. ಪಾಟೀಲ್ ಆರೋಗ್ಯ ಸಿಬ್ಬಂದಿಯನ್ನು ಮನೆಗೆ ಕರೆಸಿ ಲಸಿಕೆ ಹಾಕಿಸಿಕೊಂಡಿರುವುದು ಎಷ್ಟರಮಟ್ಟಿಗೆ ಸರಿ ಎಂಬ ಮಾತುಗಳು ತೂರಿ ಬಂದಿದ್ದವು.

ಇದೇ ವಿಚಾರಕ್ಕೆ ಸಂಬಂಧಿಸಿ ಜಿಲ್ಲಾ ಆರ್‌ಸಿಹೆಚ್ ಡಾ.ಜಯಾನಂದ್‌ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್‌ ನೋಟಿಸ್ ಜಾರಿ ಮಾಡಿದ್ದರು. ನಿನ್ನೆಯಷ್ಟೇ ಹಿರೇಕೆರೂರು ಆರೋಗ್ಯಾಧಿಕಾರಿ (ಟಿಹೆಚ್ಒ) ಡಾ. ಝಡ್​. ಆರ್​. ಮಕಾಂದಾರ್ ಅವರನ್ನು ಅಮಾನತು ಮಾಡಿ ಆರೋಗ್ಯ, ಕುಟುಂಬ ಕಲ್ಯಾಣ‌ ಸೇವೆ ಇಲಾಖೆ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಆದೇಶ ಹೊರಡಿಸಿದರು.

ಈ ವಿವಾದ, ಬೆಳವಣಿಗೆಗಳ ಮಧ್ಯೆ, ಎಚ್ಚೆತ್ತ ಸಚಿವ ಬಿ.ಸಿ. ಪಾಟೀಲ್ ಕೊರೊನಾದ ಎರಡನೇ ಡೋಸ್​ ಲಸಿಕೆಯನ್ನು ಮನೆಯಲ್ಲಿ ಪಡೆಯದೆ ಹಿರೇಕೆರೂರು ಸರ್ಕಾರಿ ಆಸ್ಪತ್ರೆಗೆ ತೆರಳಿ ಲಸಿಕೆ ಪಡೆದಿದ್ದಾರೆ. ಕೆಟ್ಟ ಮೇಲೆ ಬುದ್ಧಿ ಬಂದಂತೆ ವಿವಾದಕ್ಕೆ ಸಿಲುಕಿ ಎಚ್ಚೆತ್ತುಕೊಂಡಿದ್ದಾರೆ.

BC Patil

ಬಿ.ಸಿ.ಪಾಟೀಲ್

ಇದನ್ನೂ ಓದಿ: ಸಚಿವ ಬಿ.ಸಿ.ಪಾಟೀಲ್ ಮನೆಗೇ ಹೋಗಿ ಲಸಿಕೆ ನೀಡಿದ್ದಕ್ಕೆ ವೈದ್ಯಾಧಿಕಾರಿ ಮಕಾಂದಾರ್ ಸಸ್ಪೆಂಡ್

Minister BC Patil takes 2nd dose corona vaccine in haveri hospital

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ