AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಾಗಲೇ ನಿಗದಿಯಾದಂತೆ ಪರೀಕ್ಷೆಗಳು ಮತ್ತು ಆಫ್‌ಲೈನ್ ಕ್ಲಾಸ್ ನಡೆಯುತ್ತದೆ; ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಸ್ಪಷ್ಟನೆ

ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಬದಲಾವಣೆಯಿಲ್ಲ. ನಿಗದಿಯಂತೆ ಪರೀಕ್ಷೆಗಳು ಮತ್ತು ಆಫ್‌ಲೈನ್ ಕ್ಲಾಸ್ ನಡೆಯುತ್ತದೆ ಎಂದು ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ನಿಗದಿಯಾದಂತೆ ಪರೀಕ್ಷೆಗಳು ಮತ್ತು ಆಫ್‌ಲೈನ್ ಕ್ಲಾಸ್ ನಡೆಯುತ್ತದೆ; ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಸ್ಪಷ್ಟನೆ
ಉಪ ಮುಖ್ಯಮಂತ್ರಿ, ಡಾ. ಸಿ.ಎನ್ ಅಶ್ವತ್ಥ್ ನಾರಾಯಣ (ಸಂಗ್ರಹ ಚಿತ್ರ)
shruti hegde
|

Updated on:Mar 23, 2021 | 2:25 PM

Share

ಬೆಂಗಳೂರು: ಆಫ್‌ಲೈನ್ ಕ್ಲಾಸ್ ಮತ್ತು ನಿಗದಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆಯಿಲ್ಲ. ಕೊವಿಡ್ ಕಾರಣಕ್ಕಾಗಿ ಪದವಿ ಕೋರ್ಸ್‌ಗಳ ಆಫ್‌ಲೈನ್ ಕ್ಲಾಸ್ ನಡೆಸಲಾಗುತ್ತದೆ. ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಬದಲಾವಣೆಗಳಿಲ್ಲ. ನಿಗದಿಯಂತೆ ಪರೀಕ್ಷೆಗಳು ಮತ್ತು ಆಫ್‌ಲೈನ್ ಕ್ಲಾಸ್ ನಡೆಯುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಮಾಧ್ಯಮ ಪ್ರಕಟನೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಕೊವಿಡ್ ನಿಯಮ ಪಾಲಿಸುವಂತೆ ಎಲ್ಲರಿಗೂ ಸೂಚಿಸಿದ್ದೇವೆ. ಸರಕಾರ ಹೊರಡಿಸಿರುವ ಮಾದರಿ ವೇಳಾಪಟ್ಟಿಯಂತೆ ವಿಶ್ವವಿದ್ಯಾಲಯಗಳು ನಿಗದಿಪಡಿಸಿರುವ ವೇಳಾಪಟ್ಟಿ ಅನುಸಾರ ಹಾಲಿ ನಡೆಯುತ್ತಿರುವ ಆಫ್​ ಲೈನ್‌ ತರಗತಿಗಳನ್ನು ಹಾಗೆಯೇ ಮುಂದುವರಿಸಲಾಗುವುದು. ಕೊವಿಡ್‌ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಹಾಗೂ ಮಹಾವಿದ್ಯಾಲಯಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ವಿಶ್ವವಿದ್ಯಾಲಯಗಳು, ಕಾಲೇಜುಗಳು,  ಪಾಲಿಟೆಕ್ನಿಕ್‌ಗಳು ಮತ್ತು ಇನ್ನಿತರೆ ಶಿಕ್ಷಣ ಸಂಸ್ಥೆಗಳಲ್ಲಿ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಎರಡನೇ ಅಲೆ ಬೀರುವ ಪರಿಣಾಮಗಳ ಮಹತ್ವದ ಸಮಾಲೋಚನೆ ನಡೆಸಿದ್ದೇನೆ. ಮುಖ್ಯಮಂತ್ರಿ ಅವರ ಜತೆಗೂ ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯಡಿಯಲ್ಲಿ ನಡೆಸುತ್ತಿರುವ ಹಾಸ್ಟೆಲ್‌ಗಳನ್ನು ಮುಂದುವರಿಸಲು ಆಯಾ ಇಲಾಖೆಗಳನ್ನು ಕೋರಲಾಗುವುದು ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳಲ್ಲಿ, ಮಹಾವಿದ್ಯಾಲಯಗಳಲ್ಲಿ ಹಾಗೂ ಹಾಸ್ಟೆಲ್​ಗಳಲ್ಲಿ ಕೊವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ನಡೆಸಿ.. ಸರ್ಕಾರಕ್ಕೆ ಪೋಷಕರ ಒತ್ತಾಯ

ಖಾಸಗಿ ಶಾಲಾ ಒಕ್ಕೂಟದಿಂದ ಪ್ರತಿಭಟನೆ: SSLC ಪರೀಕ್ಷೆ ವೇಳೆ ಪ್ರತಿಭಟನೆ ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗರಂ

Published On - 2:25 pm, Tue, 23 March 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ