AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ ಎದ್ದುಬಂದು ಕೊರೊನಾ ಸೋಂಕಿಸೋಲ್ಲ, ಗೌರವಯುತ ಅಂತ್ಯಸಂಸ್ಕಾರ ಮಾಡಿ: ಸಿ.ಟಿ. ರವಿ

ಚಿಕ್ಕಮಗಳೂರು: ಹೆಣ ಯಾವತ್ತಿಗೂ ಉಗಿಯೋಕು ಸಾಧ್ಯವಿಲ್ಲ, ಸೀನೋಕೂ ಸಾಧ್ಯವಿಲ್ಲ. ಆದರೆ, ಮೃತದೇಹಗಳಿಗೆ ಗೌರವಯುತವಾದ ಅಂತ್ಯಸಂಸ್ಕಾರವನ್ನು ಮಾಡದಂತಹ ಭೀತಿ ಸೃಷ್ಟಿಸಿದ್ದೇವೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಕೊರೊನಾ ಪಾಸಿಟಿವ್ ದೃಢಪಟ್ಟ ಮೇಲೆ 14 ದಿನಗಳ ಕಾಲ ತಮ್ಮ ಫಾರಂ ಹೌಸ್‍ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದ ಸಚಿವ ಸಿ.ಟಿ. ರವಿ, ಕೊರೊನಾಗೆ ಯಾರೂ ಭಯ ಪಡಬೇಡಿ, ಕೊರೊನಾ ಬಂದಾಗ ಪ್ರೀತಿ ಇರಲಿ, ಭೀತಿ ಬೇಡ ಎಂದಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಹೆಣ ಯಾವತ್ತಿಗೂ ಉಗಿಯೋಕು ಸಾಧ್ಯವಿಲ್ಲ, ಸೀನೋಕೂ […]

ಹೆಣ ಎದ್ದುಬಂದು ಕೊರೊನಾ ಸೋಂಕಿಸೋಲ್ಲ, ಗೌರವಯುತ ಅಂತ್ಯಸಂಸ್ಕಾರ ಮಾಡಿ:  ಸಿ.ಟಿ. ರವಿ
ಸಾಧು ಶ್ರೀನಾಥ್​
| Edited By: |

Updated on:Jul 26, 2020 | 12:36 AM

Share

ಚಿಕ್ಕಮಗಳೂರು: ಹೆಣ ಯಾವತ್ತಿಗೂ ಉಗಿಯೋಕು ಸಾಧ್ಯವಿಲ್ಲ, ಸೀನೋಕೂ ಸಾಧ್ಯವಿಲ್ಲ. ಆದರೆ, ಮೃತದೇಹಗಳಿಗೆ ಗೌರವಯುತವಾದ ಅಂತ್ಯಸಂಸ್ಕಾರವನ್ನು ಮಾಡದಂತಹ ಭೀತಿ ಸೃಷ್ಟಿಸಿದ್ದೇವೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಕೊರೊನಾ ಪಾಸಿಟಿವ್ ದೃಢಪಟ್ಟ ಮೇಲೆ 14 ದಿನಗಳ ಕಾಲ ತಮ್ಮ ಫಾರಂ ಹೌಸ್‍ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದ ಸಚಿವ ಸಿ.ಟಿ. ರವಿ, ಕೊರೊನಾಗೆ ಯಾರೂ ಭಯ ಪಡಬೇಡಿ, ಕೊರೊನಾ ಬಂದಾಗ ಪ್ರೀತಿ ಇರಲಿ, ಭೀತಿ ಬೇಡ ಎಂದಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ಹೆಣ ಯಾವತ್ತಿಗೂ ಉಗಿಯೋಕು ಸಾಧ್ಯವಿಲ್ಲ, ಸೀನೋಕೂ ಸಾಧ್ಯವಿಲ್ಲ. ಆದರೆ, ಮೃತದೇಹಗಳಿಗೆ ಗೌರವಯುತವಾದ ಅಂತ್ಯ ಸಂಸ್ಕಾರ ಮಾಡದಂತಹ ಭೀತಿ ಸೃಷ್ಟಿಸಿದ್ದೇವೆ, ಹೆಣ ನೇರವಾಗಿ ಯಾರಿಗೂ ತೊಂದರೆ ಮಾಡಲ್ಲ. ಹೆಣ ಮುಟ್ಟಿದವರು ಮೂಗು, ಕಣ್ಣು, ಬಾಯಿ ಮುಟ್ಟಿಕೊಂಡರೆ ಸೋಂಕು ತಗುಲಬಹುದು. ಹೆಣವೇ ಎದ್ದು ಬಂದು ಅವರ ಕೈ-ಬಾಯಿ-ಮೂಗು ಮುಟ್ಟುವುದಿಲ್ಲ ಎಂದರು.

ಸತ್ತವರಿಗೆ ಗೌರವಯುತವಾದ ಅಂತ್ಯ ಸಂಸ್ಕಾರ ಮಾಡಲು ಭೀತಿಯ ಅವಶ್ಯಕತೆ ಇಲ್ಲ. ಅದಕ್ಕಾಗಿ ತಂಡ ರಚನೆ ಮಾಡ್ತೀವಿ, ಅದರ ನೇತೃತ್ವ ನನ್ನದೇ ಎಂದಿದ್ದಾರೆ. ಅದಕ್ಕೆ ಬೇಕಿರುವ ತಂಡವನ್ನ ನಮ್ಮ ಜಿಲ್ಲೆಯಲ್ಲಿ ರಚನೆ ಮಾಡಿ, ತೊಂದರೆಯಾದರೆ ನಾವೇ ಮುಂದೆ ನಿಂತು ಅವರವರ ನಂಬಿಕೆ ಪ್ರಕಾರ ಅಂತ್ಯಸಂಸ್ಕಾರ ಮಾಡ್ತೀವಿ ಎಂದಿದ್ದಾರೆ.

ಇನ್ನು ಇದೇ ವೇಳೆ, ಸೀಲ್ ಡೌನ್, ಲಾಕ್‍ಡೌನ್ ಬಗ್ಗೆ ಮಾತನಾಡಿದ ಸಚಿವ ಸಿ.ಟಿರವಿ, ವೈರಸ್ ಒಂದೆರಡು ಮೀಟರ್ ಕ್ರಮಿಸಬಹುದು, ನೂರಾರು ಮೀಟರ್ ಅಲ್ಲ. ಆದ್ದರಿಂದ ನೂರು ಮೀಟರ್ ಸೀಲ್ ಡೌನ್ ಬಗ್ಗೆ ಪರಿಶೀಲನೆ ಮಾಡಿ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೇನೆ ಎಂದರು.

ವೈರಸ್ ನಿರ್ಜೀವ ವಸ್ತುವಿನ ಮೇಲೆ ಏಳರಿಂದ ಎಂಟು ಗಂಟೆ ಮಾತ್ರ ಇರುತ್ತೆ. ಹಾಗಾಗಿ, ವಾರಗಟ್ಟಲೇ ಸೀಲ್‍ಡೌನ್ ಬಗ್ಗೆ ಪರಿಶೀಲಿಸಬೇಕಾಗಿದೆ. ಮೊದಲು 500 ಮೀಟರ್ ಸೀಲ್‍ಡೌನ್ ಮಾಡುತ್ತಿದ್ದರು, ಈಗ 100 ಮೀಟರ್ ಮಾಡುತ್ತಿದ್ದಾರೆ. ಅದನ್ನ ಪರಿಶೀಲಿಸಿ ಎಂದು ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೇನೆ ಎಂದರು.

Published On - 7:25 pm, Fri, 24 July 20

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?