AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ದಿನೇಶ್​ ಗುಂಡೂರಾವ್​ಗೂ ತಟ್ಟಿದ ಬೆಂಗ್ಳೂರು ಟ್ರಾಫಿಕ್ ಬಿಸಿ, ಮಂಗಳೂರು ಪ್ರವಾಸ ರದ್ದು

ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದಾಗಿ ಹಲವೆಡೆ ಭಾರೀ ಹಾನಿ ಆಗಿದೆ. ಈ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿತ್ತು. ಆದ್ರೆ, ಅವರಿಗೆ ಬೆಂಗಳೂರು ಟ್ರಾಫಿಕ್​ ಬಿಸಿ ತಟ್ಟಿದ್ದು, ಫೈಟ್​ ಮಿಸ್ ಆಗಿದೆ.

ಸಚಿವ ದಿನೇಶ್​ ಗುಂಡೂರಾವ್​ಗೂ ತಟ್ಟಿದ ಬೆಂಗ್ಳೂರು ಟ್ರಾಫಿಕ್ ಬಿಸಿ, ಮಂಗಳೂರು ಪ್ರವಾಸ ರದ್ದು
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​​​
ರಮೇಶ್ ಬಿ. ಜವಳಗೇರಾ
|

Updated on: Jul 21, 2024 | 12:13 PM

Share

ಬೆಂಗಳೂರು/ಮಂಗಳೂರು, (ಜುಲೈ 21): ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರ ಮಂಗಳೂರು ಭೇಟಿ ರದ್ದಾಗಿದೆ. ಅವರು ಇಂದು (ಜುಲೈ 21) ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಬೇಕಿತ್ತು. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂ ಮಂಗಳೂರಿಗೆ ತೆರಳಬೇಕಿತ್ತು. ಆದ್ರೆ, ಬೆಂಗಳೂರು ಏರ್‌ಪೋರ್ಟ್‌ ರೋಡ್ ಬ್ಲಾಕ್ ಆದ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಟ್ರಾಫಿಕ್​ನಲ್ಲಿ ಸಿಲುಕಿಕೊಂಡಿದ್ದಾರೆ. ಅತ್ತ ಅವರು ಪ್ರಯಾಣಿಸಬೇಕಿದ್ದ ವಿಮಾನ ಸಹ ಟೇಕಾಫ್ ಆಗಿದೆ. ಹೀಗಾಗಿ ವಿಮಾನ ಮಿಸ್ ಆಗಿದ್ದರಿಂದ ದಿನೇಶ್ ಗುಂಡೂರಾವ್ ಅವರು ಮಂಗಳೂರು ಜಿಲ್ಲಾ ಪ್ರವಾಸ ರದ್ದಾಗಿದೆ.

ದಿನೇಶ್ ಗುಂಡೂರಾವ್ ಅವರು ಇಂದು(ಜುಲೈ 21) ಮಂಗಳೂರು ಜಿಲ್ಲೆಯ ಅದ್ಯಪಾಡಿ, ಕೆತ್ತಿಕಲ್, ಪಾಣೆಮಂಗಳೂರು ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಬೇಕಿತ್ತು. ಮಳೆ ಹಾನಿ, ಪರಿಹಾರ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಿಗದಿಯಾಗಿತ್ತು. ಇದಕ್ಕಾಗಿ ಸಿದ್ಧತೆಯನ್ನೂ ಕೈಗೊಳ್ಳಲಾಗಿತ್ತು. ಆದ್ರೆ, ಬೆಂಗಳೂರು ಏರ್ ಪೋರ್ಟ್ ರಸ್ತೆಯಲ್ಲಿ ಲಾರಿ ಸಿಲುಕಿ ವಾಹನ ದಟ್ಟಣೆ ಉಂಟಾಗಿದ್ದರಿಂದ ದಿನೇಶ್ ಗುಂಡೂರಾವ್ ಅವರು ತಡವಾಗಿ ಬಂದಿದ್ದಾರೆ. ಆದ್ರೆ, ಅಷ್ಟರಾಗಲೇ ಸರಿಯಾದ ಸಮಯಕ್ಕೆ ವಿಮಾನ ಟೇಕಫ್​ ಆಗಿ ಮಂಗಳೂರಿನತ್ತ ಹಾರಿದೆ. ಇದರಿಂದ ದಿನೇಶ್ ಗುಂಡೂರಾವ್ ಅವರ ಮಂಗಳೂರು ಭೇಟಿ ರದ್ದಾಗಿದೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದ ಆ್ಯಂಥಮ್ ಸಾಂಗ್ ಬಿಡುಗಡೆ: ಇಲ್ಲಿದೆ ವಿಡಿಯೋ

ಉಡುಪಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಉಡುಪಿ: ಜಿಲ್ಲೆಗೆ ಕೊನೆಗೂ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗಮಿಸಿದ್ದಾರೆ. ಎರಡು ವಾರಗಳಿಂದ ಭಾರೀ ಮಳೆಗೆ ತುತ್ತಾಗಿದ್ದ ಉಡುಪಿ ಜಿಲ್ಲೆಯಲ್ಲಿ ಸದ್ಯ ಮಳೆಗೆ ಕೊಂಚ ವಿರಾಮ ಸಿಕ್ಕಿದೆ. ಎರಡು ವಾರಗಳಿಂದ ಭಾರಿ ಮಳೆಗೆ ತುತ್ತಾಗಿದ್ದ ಜಿಲ್ಲೆಗೆ ಸಚಿವೆ ಆಗಮಿಸದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ನೆರೆ, ಪ್ರವಾಹ ಕಡಿಮೆ ಆಗುತ್ತಲೇ‌ ಉಡುಪಿಗೆ ಸಚಿವೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟುನಿಟ್ಟಿನ ಸೂಚನೆ ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಡುಪಿ ನಗರ ಸೇರಿದಂತೆ ಹಲವೆಡೆ ಹಾನಿಯಾಗಿವೆ. ಬೈಂದೂರು ತಾಲೂಕಿನಲ್ಲಿ ಸಾವಿರಕ್ಕೂ ಅಧಿಕ ಮರಗಳು ಧರಶಾಹಿಯಾಗಿವೆ. ನದಿಗಳು ಅಪಾಯ ಮಟ್ಟವನ್ನು ಮೀರಿ ಕೃತಕ ನೆರೆ ಸೃಷ್ಟಿಯಾಗಿದೆ. ಕಡಲ್ಕೊರೆತವೂ ತೀವ್ರವಾಗಿದೆ. ಇದರಿಂದ ನೂರಾರು ಮಂದಿ ತೊಂದರೆಗೆ ಒಳಗಾಗಿದ್ದಾರೆ. ಬೈಂದೂರು ಭಾಗದಲ್ಲಿ ಸೇತುವೆಗಳಿಲ್ಲದೇ ಹಲವು ರೀತಿಯ ಸಂಕಷ್ಟ ಎದುರಾಗಿದೆ. ಪಡುಬಿದ್ರಿ, ಮಲ್ಪೆ ಕಡಲ್ಕೊರೆತಕ್ಕೆ ಸಿಕ್ಕಿ ಅಪಾರ ಪ್ರಮಾಣದಲ್ಲಿ ಹಾನಿಗೊಳಗಾಗಿದೆ. ಇಷ್ಟಾಗಿಯೂ ಉಸ್ತುವಾರಿ ಸಚಿವೆ ಭೇಟಿಯಾಗದಿರುವ ಬಗ್ಗೆ ಭಾರಿ ವಿರೋಧ ಕೇಳಿ ಬಂದಿತ್ತು. ಇದೀಗ ಕೊನೆಗೂ ಇಂದು ಉಡುಪಿ ಜಿಲ್ಲೆಗೆ ಸಚಿವೆ ಆಗಮಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು