AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದಿಂದ ಕೋವಿಶೀಲ್ಡ್, ಕೋವ್ಯಾಕ್ಸಿನ್ ಪೂರೈಕೆ.. ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ, ನಿಮ್ಹಾನ್ಸ್, ಜಯನಗರದ ಜನರಲ್ ಆಸ್ಪತ್ರೆ, ಇಎಸ್ಐ, ಸರ್ ಸಿ.ವಿ.ರಾಮನ್ ಜನರಲ್ ಆಸ್ಪತ್ರೆ ಸೇರಿದಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕೊವಿಡ್ ಲಸಿಕೆ ಹಾಕಲಾಗುತ್ತೆ. ಹಾಗೂ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲಾಗುತ್ತೆ...

ಕೇಂದ್ರ ಸರ್ಕಾರದಿಂದ ಕೋವಿಶೀಲ್ಡ್, ಕೋವ್ಯಾಕ್ಸಿನ್ ಪೂರೈಕೆ.. ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
ಆಯೇಷಾ ಬಾನು
|

Updated on:May 09, 2021 | 12:59 PM

Share

ಬೆಂಗಳೂರು: ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಸೋಂಕಿನ ವಿರುದ್ಧ ನೀಡುವ ಲಸಿಕಾ ಅಭಿಯಾನಕ್ಕೆ ಮೇ 1ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಾಜಿನಗರದ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಸಾಂಕೇತಿಕ ಚಾಲನೆ ನೀಡಿದ್ರು. ಸದ್ಯ ಈಗ ಮೇ 10ರಿಂದ 18-44 ವರ್ಷದವರಿಗೆ ವ್ಯಾಕ್ಸಿನ್ ನೀಡಿಕೆ ಬಗ್ಗೆ ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ, ನಿಮ್ಹಾನ್ಸ್, ಜಯನಗರದ ಜನರಲ್ ಆಸ್ಪತ್ರೆ, ಇಎಸ್ಐ, ಸರ್ ಸಿ.ವಿ.ರಾಮನ್ ಜನರಲ್ ಆಸ್ಪತ್ರೆ ಸೇರಿದಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕೊವಿಡ್ ಲಸಿಕೆ ಹಾಕಲಾಗುತ್ತೆ. ಹಾಗೂ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲಾಗುತ್ತೆ. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕಾ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ನಿನ್ನೆ 3.5 ಲಕ್ಷ ಡೋಸ್ ಲಸಿಕೆ ರಾಜ್ಯಕ್ಕೆ ತಲುಪಿದೆ. ಈವರೆಗೂ ಒಟ್ಟು 6.5 ಲಕ್ಷ ಡೋಸ್ ರಾಜ್ಯಕ್ಕೆ ತಲುಪಿದೆ. ಕೇಂದ್ರ ಸರ್ಕಾರದಿಂದ 99,58,190 ಡೋಸ್ ಕೊವಿಶೀಲ್ಡ್, 10,91,280 ಡೋಸ್ ಕೊವ್ಯಾಕ್ಸಿನ್ ಲಸಿಕೆ ರಾಜ್ಯಕ್ಕೆ ಪೂರೈಕೆಯಾಗಿದ್ದು ಈವರೆಗೆ ಒಟ್ಟು 1,10,49,470 ಡೋಸ್ ಲಸಿಕೆ ತಲುಪಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ-ಕೊವಿಡ್​ 19 ಸ್ಪೆಲ್ಲಿಂಗ್ ಬದಲಿಸಿದರೆ ಸೋಂಕು ನಿರ್ಮೂಲನ ಖಚಿತ; ವೈರಲ್ ಆಗುತ್ತಿದೆ ಸಂಖ್ಯಾಶಾಸ್ತ್ರಜ್ಞನ ಜಾಹೀರಾತು

Published On - 12:46 pm, Sun, 9 May 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ