Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೊಂದು ತಿಂಗಳಾದ ಬಳಿಕ ಏನು ಬಿಡುಗಡೆ ಮಾಡ್ತಾರೋ ನೋಡೋಣ; ಡಾ.ಕೆ.ಸುಧಾಕರ್

ಏಕಪತ್ನಿವ್ರತಸ್ಥ ಹೇಳಿಕೆ ವಿಚಾರವಾಗಿ ಪ್ರಶ್ನಿಸಿದಾಗ, ಸಚಿವ.ಡಾ.ಕೆ.ಸುಧಾಕರ್ ಉತ್ತರಿಸಲು ಹಿಂದೇಟು ಹಾಕಿದರು. ಅದು ನಿನ್ನೆಯೇ ಮುಗಿದುಹೋಗಿದೆ. ಆ ಮುಗಿದುಹೋದ ಅಧ್ಯಾಯದ ಕುರಿತು ಇನ್ನು ಮಾತನಾಡುವುದಿಲ್ಲ ಎಂದು ಅವರು ತಿಳಿಸಿದರು.

ಇನ್ನೊಂದು ತಿಂಗಳಾದ ಬಳಿಕ ಏನು ಬಿಡುಗಡೆ ಮಾಡ್ತಾರೋ ನೋಡೋಣ; ಡಾ.ಕೆ.ಸುಧಾಕರ್
ಕೆ. ಸುಧಾಕರ್​
Follow us
guruganesh bhat
|

Updated on: Mar 26, 2021 | 3:01 PM

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ‘ಇನ್ನೊಂದು ತಿಂಗಳಾದ ಬಳಿಕ ಏನು ಬಿಡುಗಡೆ ಮಾಡ್ತಾರೋ..ಏನೇನು ಬಿಡುಗಡೆ ಮಾಡುತ್ತಾರೋ ನೋಡೋಣ. SIT ತನಿಖೆಯಾಗ್ತಿದೆ, ಈಗ ನಾನು ಏನೂ ಹೇಳದಿರುವುದು ಉತ್ತಮ’ ಎಂದು ಬೆಂಗಳೂರಿನಲ್ಲಿ ಹೇಳಿದರು.

ಸುದ್ದಿಗಾರರು ಏಕಪತ್ನಿವ್ರತಸ್ಥ ಹೇಳಿಕೆ ವಿಚಾರವಾಗಿ ಪ್ರಶ್ನಿಸಿದಾಗ, ಸಚಿವ.ಡಾ.ಕೆ.ಸುಧಾಕರ್ ಉತ್ತರಿಸಲು ಹಿಂದೇಟು ಹಾಕಿದರು. ಅದು ನಿನ್ನೆಯೇ ಮುಗಿದುಹೋಗಿದೆ. ಆ ಮುಗಿದುಹೋದ ಅಧ್ಯಾಯದ ಕುರಿತು ಇನ್ನು ಮಾತನಾಡುವುದಿಲ್ಲ ಎಂದು ಅವರು ತಿಳಿಸಿದರು.

ಏನಿದು ಏಕಪತ್ನಿವೃತಸ್ಥ ಹೇಳಿಕೆ?

‘ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ನಾನೂ ಸೇರಿದಂತೆ 224 ಶಾಸಕ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನು ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತದೆ’ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹಾಲಿ ಬೆಳವಣಿಗೆಗಳ ಬಗ್ಗೆ ಮಾತನಾಡುತ್ತಾ ಪಂಥಾಹ್ವಾನ ನೀಡಿದ್ದರು.

ಮುಖ್ಯಮಂತ್ರಿ ಆಗಿದ್ದಾಗ ಯಾರು ಯಾರು ಏನೇನು ಮಾಡಿದ್ದರು? ಎಂದು ಎಲ್ಲದರ ಬಗ್ಗೆಯೂ ತನಿಖೆಯಾಗಲಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಎಂದು ಡಾ.ಕೆ.ಸುಧಾಕರ್ ಪ್ರಶ್ನೆ ಎತ್ತಿದ್ದಾರೆ. ಹೀಗಾಗಿ 224 ಶಾಸಕರ ಬಗ್ಗೆ ಕೂಡ ತನಿಖೆಯಾಗಲಿ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆಗ್ರಹಿಸಿದ್ದರು.

ಎಲ್ಲಾ ಮಂತ್ರಿಗಳದ್ದು ಶಾಸಕರದ್ದು ವಿರೋಧ ಪಕ್ಷಗಳವರದ್ದು ಕೂಡ ತನಿಖೆಯಾಗಲಿ. ಯಾರಿಗೆ ಅನೈತಿಕ ಸಂಬಂಧವಿದೆ ಎಂಬುದು ತಿಳಿಯಲಿ ಬಿಡಿ. ಸಮಾಜಕ್ಕೆ ಇವರೆಲ್ಲರೂ ಕೂಡ ಮಾದರಿಯಾಗಿದ್ದಾರೆ. ಆದರೆ ಇವರೆಲ್ಲರೂ ಕೂಡ ಒಪ್ಪಿಕೊಳ್ಳಲಿ. 224 ಶಾಸಕರ ಬಗ್ಗೆಯೂ ಕೂಡ ತನಿಖೆಯಾಗಲಿ ಎಂದು ಸುಧಾಕರ್ ಆಗ್ರಹಿಸಿದ್ದರು.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ಪ್ರಶ್ನೆ: ಜೀವನದಲ್ಲಿ ಒಂದು ಸಾರಿ ತಪ್ಪು ಮಾಡಿದ್ದೇನೆ. ಅದನ್ನು ಸದನದಲ್ಲಿ ಒಪ್ಕೊಂಡಿದ್ದೇನೆ: ಹೆಚ್‌ಡಿ ಕುಮಾರಸ್ವಾಮಿ

ಏಕಪತ್ನಿ ವ್ರತಸ್ಥ ಪ್ರಶ್ನೆ: ಬಿದ್ದು ಬಿದ್ದು ನಕ್ಕ ಸೌಮ್ಯಾರೆಡ್ಡಿ; ನಾನು ನೂರಕ್ಕೆ ನೂರರಷ್ಟು ಏಕ ಪತ್ನಿವ್ರತಸ್ಥ ಎಂದ ಶಿವಲಿಂಗೇಗೌಡ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!