AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೊಂದು ತಿಂಗಳಾದ ಬಳಿಕ ಏನು ಬಿಡುಗಡೆ ಮಾಡ್ತಾರೋ ನೋಡೋಣ; ಡಾ.ಕೆ.ಸುಧಾಕರ್

ಏಕಪತ್ನಿವ್ರತಸ್ಥ ಹೇಳಿಕೆ ವಿಚಾರವಾಗಿ ಪ್ರಶ್ನಿಸಿದಾಗ, ಸಚಿವ.ಡಾ.ಕೆ.ಸುಧಾಕರ್ ಉತ್ತರಿಸಲು ಹಿಂದೇಟು ಹಾಕಿದರು. ಅದು ನಿನ್ನೆಯೇ ಮುಗಿದುಹೋಗಿದೆ. ಆ ಮುಗಿದುಹೋದ ಅಧ್ಯಾಯದ ಕುರಿತು ಇನ್ನು ಮಾತನಾಡುವುದಿಲ್ಲ ಎಂದು ಅವರು ತಿಳಿಸಿದರು.

ಇನ್ನೊಂದು ತಿಂಗಳಾದ ಬಳಿಕ ಏನು ಬಿಡುಗಡೆ ಮಾಡ್ತಾರೋ ನೋಡೋಣ; ಡಾ.ಕೆ.ಸುಧಾಕರ್
ಕೆ. ಸುಧಾಕರ್​
guruganesh bhat
|

Updated on: Mar 26, 2021 | 3:01 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ‘ಇನ್ನೊಂದು ತಿಂಗಳಾದ ಬಳಿಕ ಏನು ಬಿಡುಗಡೆ ಮಾಡ್ತಾರೋ..ಏನೇನು ಬಿಡುಗಡೆ ಮಾಡುತ್ತಾರೋ ನೋಡೋಣ. SIT ತನಿಖೆಯಾಗ್ತಿದೆ, ಈಗ ನಾನು ಏನೂ ಹೇಳದಿರುವುದು ಉತ್ತಮ’ ಎಂದು ಬೆಂಗಳೂರಿನಲ್ಲಿ ಹೇಳಿದರು.

ಸುದ್ದಿಗಾರರು ಏಕಪತ್ನಿವ್ರತಸ್ಥ ಹೇಳಿಕೆ ವಿಚಾರವಾಗಿ ಪ್ರಶ್ನಿಸಿದಾಗ, ಸಚಿವ.ಡಾ.ಕೆ.ಸುಧಾಕರ್ ಉತ್ತರಿಸಲು ಹಿಂದೇಟು ಹಾಕಿದರು. ಅದು ನಿನ್ನೆಯೇ ಮುಗಿದುಹೋಗಿದೆ. ಆ ಮುಗಿದುಹೋದ ಅಧ್ಯಾಯದ ಕುರಿತು ಇನ್ನು ಮಾತನಾಡುವುದಿಲ್ಲ ಎಂದು ಅವರು ತಿಳಿಸಿದರು.

ಏನಿದು ಏಕಪತ್ನಿವೃತಸ್ಥ ಹೇಳಿಕೆ?

‘ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ನಾನೂ ಸೇರಿದಂತೆ 224 ಶಾಸಕ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನು ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತದೆ’ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹಾಲಿ ಬೆಳವಣಿಗೆಗಳ ಬಗ್ಗೆ ಮಾತನಾಡುತ್ತಾ ಪಂಥಾಹ್ವಾನ ನೀಡಿದ್ದರು.

ಮುಖ್ಯಮಂತ್ರಿ ಆಗಿದ್ದಾಗ ಯಾರು ಯಾರು ಏನೇನು ಮಾಡಿದ್ದರು? ಎಂದು ಎಲ್ಲದರ ಬಗ್ಗೆಯೂ ತನಿಖೆಯಾಗಲಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಎಂದು ಡಾ.ಕೆ.ಸುಧಾಕರ್ ಪ್ರಶ್ನೆ ಎತ್ತಿದ್ದಾರೆ. ಹೀಗಾಗಿ 224 ಶಾಸಕರ ಬಗ್ಗೆ ಕೂಡ ತನಿಖೆಯಾಗಲಿ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆಗ್ರಹಿಸಿದ್ದರು.

ಎಲ್ಲಾ ಮಂತ್ರಿಗಳದ್ದು ಶಾಸಕರದ್ದು ವಿರೋಧ ಪಕ್ಷಗಳವರದ್ದು ಕೂಡ ತನಿಖೆಯಾಗಲಿ. ಯಾರಿಗೆ ಅನೈತಿಕ ಸಂಬಂಧವಿದೆ ಎಂಬುದು ತಿಳಿಯಲಿ ಬಿಡಿ. ಸಮಾಜಕ್ಕೆ ಇವರೆಲ್ಲರೂ ಕೂಡ ಮಾದರಿಯಾಗಿದ್ದಾರೆ. ಆದರೆ ಇವರೆಲ್ಲರೂ ಕೂಡ ಒಪ್ಪಿಕೊಳ್ಳಲಿ. 224 ಶಾಸಕರ ಬಗ್ಗೆಯೂ ಕೂಡ ತನಿಖೆಯಾಗಲಿ ಎಂದು ಸುಧಾಕರ್ ಆಗ್ರಹಿಸಿದ್ದರು.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ಪ್ರಶ್ನೆ: ಜೀವನದಲ್ಲಿ ಒಂದು ಸಾರಿ ತಪ್ಪು ಮಾಡಿದ್ದೇನೆ. ಅದನ್ನು ಸದನದಲ್ಲಿ ಒಪ್ಕೊಂಡಿದ್ದೇನೆ: ಹೆಚ್‌ಡಿ ಕುಮಾರಸ್ವಾಮಿ

ಏಕಪತ್ನಿ ವ್ರತಸ್ಥ ಪ್ರಶ್ನೆ: ಬಿದ್ದು ಬಿದ್ದು ನಕ್ಕ ಸೌಮ್ಯಾರೆಡ್ಡಿ; ನಾನು ನೂರಕ್ಕೆ ನೂರರಷ್ಟು ಏಕ ಪತ್ನಿವ್ರತಸ್ಥ ಎಂದ ಶಿವಲಿಂಗೇಗೌಡ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!