AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಫಾರಿ ಹೋಗುವವರಿಗೆ ಗುಡ್​ನ್ಯೂಸ್: ಸಿಂಹ, ಹುಲಿ ಜೊತೆಗೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ ಆರಂಭ

ಬೆಂಗಳೂರಿನ ಹೊರ ವಲಯದಲ್ಲಿರುವ ಬನ್ನೇರುಘಟ್ಟ ಉದ್ಯಾನವನದಲ್ಲಿ ಚಿರತೆ ಸಫಾರಿ ಆರಂಭವಾಗಲಿದೆ. ಹೌದು... ಇಷ್ಟು ದಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ ಸಫಾರಿ ಇತ್ತು, ಇದೀಗ ಈಗ ಚಿರತೆ ಸಫಾರಿ ಶುರುವಾಗಲಿದ್ದು, ಇದೇ ಮಾಸಾಂತ್ಯಕ್ಕೆ ಚಿರತೆ ಸಫಾರಿ ಶುರುವಾಗಲಿದೆ.

ಸಫಾರಿ ಹೋಗುವವರಿಗೆ ಗುಡ್​ನ್ಯೂಸ್:  ಸಿಂಹ, ಹುಲಿ ಜೊತೆಗೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ ಆರಂಭ
ಕಿರಣ್​ ಹನಿಯಡ್ಕ
| Edited By: |

Updated on:Jun 10, 2024 | 4:41 PM

Share

ಬೆಂಗಳೂರು (ಜೂ.10): ಬೆಂಗಳೂರಿನ ಹೊರ ವಲಯದಲ್ಲಿರುವ  ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ(Bannerghatta National Park)  ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಚಿರತೆ ಸಫಾರಿ (leopard safari) ಆರಂಭವಾಗಲಿದೆ. ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ. ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ಇಂದು (ಜೂನ್ 10) ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದರ ಜೊತೆಗೆ, ಮೈಸೂರಿನ ಕಾರಂಜಿ ಕೆರೆಯಲ್ಲಿ ಮತ್ಯ್ಸಾಗಾರ ನಿರ್ಮಾಣಕ್ಕೆ ಸಮ್ಮತಿ ನೀಡಿದರು. ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮೊದನೆ ನೀಡಿದರು.

ಹುಲಿಗಳು ಮತ್ತು ಸಿಂಹಗಳಿಗಿಂತ ಭಿನ್ನವಾಗಿ, ಚಿರತೆಗಳು ಬಹಳ ಚುರುಕುಬುದ್ಧಿಯವು ಮತ್ತು ಚಾಲಾಕಿಗಳು. ತಪ್ಪಿಸಿಕೊಳ್ಳಲು ಸಾಧ್ಯವಿರುವ ಯಾವುದೇ ಮಾರ್ಗವನ್ನು ಕಂಡುಕೊಳ್ಳುತ್ತವೆ, ಆದ್ದರಿಂದ ಆವರಣವನ್ನು ರಚಿಸುವಾಗ ಎಲ್ಲಾ ರೀತಿಯ ಮುಂಜಾಗ್ರತೆ ತೆಗೆದುಕೊಳ್ಳಲಾಗಿದೆ. ಈ ಪ್ರದೇಶದಲ್ಲಿ 20 ಚಿರತೆಗಳಿಗೆ ಸ್ಥಳಾವಕಾಶವಿದೆ, ಆದರೆ ಇದೀಗ ಸುಮಾರು 12 ಚಿರತೆಗಳಿವೆ. ಜಗಳವಾಗದಂತೆ ಪರಸ್ಪರ ಒಗ್ಗಿಕೊಳ್ಳುವಂತೆ ಮಾಡಲಾಗುತ್ತಿದೆ. ಇರಿಸಲಾಗಿರುವ ಚಿರತೆಗಳು ತಲಾ ಆರು ಗುಂಪುಗಳಂತೆ ಎರಡು ಗುಂಪುಗಳಾಗಿ ವಿಂಗಡಿಸಲ್ಪಟ್ಟಿವೆ. ಪರಸ್ಪರ ಹೊದಿಕೊಳ್ಳಲು ಅವರಿಗೆ ಸಮಯ ಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರದರ್ಶನಕ್ಕೆ ಇಡಲಾಗುವ ಎಲ್ಲಾ ಚಿರತೆಗಳು ಒಂದು ವರ್ಷದೊಳಗಿನವು ಮತ್ತು ಮೃಗಾಲಯದಲ್ಲಿ ಸಾಕಲ್ಪಟ್ಟ ಚಿರತೆಗಳಾಗಿವೆ. ಅವರು ಎರಡು ತಿಂಗಳೊಳಗೆ ಇರುವಾಗ ಅರಣ್ಯ ಇಲಾಖೆ ಸಿಬ್ಬಂದಿ ಅಥವಾ ವ್ಯಕ್ತಿಗಳು ಹೊಲಗಳಿಂದ ಕರೆತಂದ ರಕ್ಷಿಸಲ್ಪಟ್ಟ ಮರಿಗಳು. ದಾಖಲೆಗಳ ಪ್ರಕಾರ, ಬಿಬಿಪಿಯಲ್ಲಿ 70 ಚಿರತೆಗಳು, 19 ಹುಲಿಗಳು ಮತ್ತು 19 ಸಿಂಹಗಳು ಮೃಗಾಲಯದಲ್ಲಿವೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Mon, 10 June 24

Follow Us
Kiran Haniyadka
Kiran Haniyadka
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ