AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ಗೋಪಾಲಯ್ಯ ಚಾಲನೆ, ಹಳ್ಳಿಗಳತ್ತ ಹೊರಟ ವೈದ್ಯರು

ಜಿಲ್ಲೆಯಾದ್ಯಂತ 50 ವೈದ್ಯರ ತಂಡ ಸಂಚರಿಸಲಿದ್ದು ಹಳ್ಳಿ ಹಳ್ಳಿಗೆ ತೆರಳಿ ಜನರ ಆರೋಗ್ಯ ತಪಾಸಣೆ ಹಾಗೂ ಕೊರೊನ ಪರೀಕ್ಷೆ ನಡೆಸಲಿದ್ದಾರೆ. ಪ್ರತಿ ತಂಡದಲ್ಲಿ ವೈದ್ಯರು, ನರ್ಸ್, ಲ್ಯಾಬ್ ಟೆಕ್ನಿಷಿಯನ್ ಟೀಂ ಇರಲಿದೆ. ಈ ತಂಡ ಒಂದು ದಿನಕ್ಕೆ ನಾಲ್ಕು ಗ್ರಾಮಗಳನ್ನು ಸಂಚರಿಸಿ ಜನರ ಆರೋಗ್ಯ ಪರಿಶೀಲಿಸಲಿದ್ದಾರೆ.

ವೈದ್ಯರ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ಗೋಪಾಲಯ್ಯ ಚಾಲನೆ, ಹಳ್ಳಿಗಳತ್ತ ಹೊರಟ ವೈದ್ಯರು
ವೈದ್ಯರ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ಗೋಪಾಲಯ್ಯ ಚಾಲನೆ
ಆಯೇಷಾ ಬಾನು
ಆಯೇಷಾ ಬಾನು|

Updated on: May 26, 2021 | 12:20 PM

Share

ಹಾಸನ: ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಕೊವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣ, ಜಾಗೃತಿ ಮೂಡಿಸಲು ವೈದ್ಯರ ನಡೆ ಹಳ್ಳಿಗಳ ಕಡೆ ಎಂಬ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಸದ್ಯ ಈಗ ಹಾಸನ ಜಿಲ್ಲೆಯ ಹಳ್ಳಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮ ಶುರುವಾಗಿದೆ.

ಜಿಲ್ಲೆಯಾದ್ಯಂತ 50 ವೈದ್ಯರ ತಂಡ ಸಂಚರಿಸಲಿದ್ದು ಹಳ್ಳಿ ಹಳ್ಳಿಗೆ ತೆರಳಿ ಜನರ ಆರೋಗ್ಯ ತಪಾಸಣೆ ಹಾಗೂ ಕೊರೊನ ಪರೀಕ್ಷೆ ನಡೆಸಲಿದ್ದಾರೆ. ಪ್ರತಿ ತಂಡದಲ್ಲಿ ವೈದ್ಯರು, ನರ್ಸ್, ಲ್ಯಾಬ್ ಟೆಕ್ನಿಷಿಯನ್ ಟೀಂ ಇರಲಿದೆ. ಈ ತಂಡ ಒಂದು ದಿನಕ್ಕೆ ನಾಲ್ಕು ಗ್ರಾಮಗಳನ್ನು ಸಂಚರಿಸಿ ಜನರ ಆರೋಗ್ಯ ಪರಿಶೀಲಿಸಲಿದ್ದಾರೆ. ಜಿಲ್ಲೆಯಲ್ಲಿ ಎರಡು ಸಾವಿರ ಹಳ್ಳಿಗಳಿದ್ದು ತಪಾಸಣೆ ಕೈಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಇಂದು ಉಸ್ತುವಾರಿ ಸಚಿವ ಗೋಪಾಲಯ್ಯ ಚಾಲನೆ ನೀಡಿದ್ದಾರೆ. ಸದ್ಯ ಹಾಸನದಿಂದ ಹಳ್ಳಿ ಹಳ್ಳಿಗೆ ಹೊರಡಲು ವೈದ್ಯರ ತಂಡ ಸಿದ್ಧವಾಗಿದೆ.

Doctors walk towards Village

ವೈದ್ಯರ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಸಿದ್ಧವಾಗಿ ನಿಂತಿರುವ ವಾಹನಗಳು

ವೈದ್ಯರ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಮಾರ್ಗಸೂಚಿ ಸೋಂಕಿನ ಲಕ್ಷಣಗಳಿದ್ದಲ್ಲಿ ಸ್ಥಳದಲ್ಲಿಯೇ ಆರ್ಎಟಿ ಪರೀಕ್ಷೆ ಮಾಡಲಾಗುತ್ತದೆ. ರೋಗಿಯನ್ನು ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಸ್ಥಳದಲ್ಲೇ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೊವಿಡ್ ಸೋಂಕಿತರಿಗೆ ಮೆಡಿಕಲ್ ಕಿಟ್ ವಿತರಿಸಿ ಅಗತ್ಯ ಮಾಹಿತಿ ನೀಡುಲಾಗುತ್ತದೆ. ಸೋಂಕಿತರ ಸಂಪರ್ಕದಲ್ಲಿರುವವರನ್ನು ಪರೀಕ್ಷೆ ಮಾಡುವುದು. ಹೋಂ ಐಸೋಲೇಶನ್ ಆಗಬಲ್ಲ ವ್ಯವಸ್ಥೆ ಇದ್ದರೆ ಮನೆಯಲ್ಲಿಯೇ ಹೋಂ ಐಸೋಲೇಷನ್ಗೆ ಅವಕಾಶ ಮಾಡಿಕೊಡುವುದು. ಅಂತಹ ವ್ಯವಸ್ಥೆ ಇಲ್ಲದಿದ್ದರೆ ಕೊವಿಡ್ ಕೇರ್ ಸೆಂಟರ್ನಲ್ಲಿ ಹೋಂ ಐಸೋಲೇಶನ್ಗೆ ವ್ಯವಸ್ಥೆ ಮಾಡಲಾಗುತ್ತದೆ.

ಅಷ್ಟೇ ಅಲ್ಲದೇ, ಹೋಂ ಐಸೋಲೇಷನ್ನಲ್ಲಿರುವವರನ್ನು ಟೆಸ್ಟ್ ಮಾಡಲಾಗುತ್ತದೆ. ತಪಾಸಣೆ ಮಾಡಿದ ವಿವರವನ್ನು ಆ್ಯಪ್ನಲ್ಲಿ ನಮೂದಿಸಲಾಗುತ್ತದೆ. ಮೊಬೈಲ್ ಕ್ಲಿನಿಕ್ ತಂಡ ದಿನದ ವರದಿಯನ್ನು ಆರೋಗ್ಯಾಧಿಕಾರಿಗಳಿಗೆ ಒಪ್ಪಿಸಬೇಕು ಎಂದು ಮಾರ್ಗಸೂಚಿಯಲ್ಲಿ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ವೈದ್ಯರ ನಡಿಗೆ ಹಳ್ಳಿ ಕಡೆಗೆ: ಕರ್ನಾಟಕ ಸರ್ಕಾರದ ಬಿಡುಗಡೆಗೊಳಿಸಿದ ಮಾರ್ಗಸೂಚಿಯ ವಿವರ ಇಲ್ಲಿದೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು