AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ‌ಗಣಿಗಾರಿಕೆ ಕುರಿತು ಸಿಎಂಗೆ ಪತ್ರ ಬರೆದ ಸಚಿವ ಹೆಚ್​ಕೆ ಪಾಟೀಲ್: ಕ್ರಮಕ್ಕೆ ಆಗ್ರಹ

ಕಾನೂನು ಸಚಿವ ಹೆಚ್‌.ಕೆ.ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಕ್ರಮ ಗಣಿಗಾರಿಕೆ ಕುರಿತು ಏಳು ಪುಟಗಳ ಪತ್ರ ಬರೆದಿದ್ದಾರೆ. ಆ ಮೂಲಕ ಅಕ್ರಮ ಗಣಿಗಾರಿಕೆ ಸಂಬಂಧ ಕ್ರಮ ಕೈಗೊಳ್ಳುವಂತೆ ಸಿಎಂಗೆ ಆಗ್ರಹಿಸಿದ್ದಾರೆ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯಕ್ಕೆ 1.5 ಲಕ್ಷ ಕೋಟಿ ರೂ ನಷ್ಟವಾದ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಕ್ರಮ ‌ಗಣಿಗಾರಿಕೆ ಕುರಿತು ಸಿಎಂಗೆ ಪತ್ರ ಬರೆದ ಸಚಿವ ಹೆಚ್​ಕೆ ಪಾಟೀಲ್: ಕ್ರಮಕ್ಕೆ ಆಗ್ರಹ
ಸಚಿವ ಹೆಚ್​.ಕೆ.ಪಾಟೀಲ್, ಸಿಎಂ ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on:Jun 21, 2025 | 11:50 AM

Share

ಬೆಂಗಳೂರು, ಜೂನ್​ 21: ಅಕ್ರಮ ‌ಗಣಿಗಾರಿಕೆ ಕುರಿತು ಸಿಎಂ ಸಿದ್ದರಾಮಯ್ಯಗೆ (Siddaramaiah) ಕಾನೂನು ಸಚಿವ ಹೆಚ್​.ಕೆ.ಪಾಟೀಲ್ (HK Patil) 7 ಪುಟಗಳ ಪತ್ರ ಬರೆದಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.  ರಾಜಕಾರಣಿಗಳು, ಅಧಿಕಾರಶಾಹಿಗಳ ಅಕ್ರಮದಿಂದ ಈ ಹಿಂದೆ ಸಂಪತ್ತು ಲೂಟಿಯಾಗಿ 1.50 ಲಕ್ಷ ಕೋಟಿ ರೂ ಸರ್ಕಾರಕ್ಕೆ ನಷ್ಟವಾಗಿತ್ತು. 2017-18ರಲ್ಲಿ ನನ್ನ ಅಧ್ಯಕ್ಷತೆಯ ಉಪಸಮಿತಿಯಲ್ಲಿ ಇದನ್ನು ಬಹಿರಂಗಗೊಳಿಸಿತ್ತು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಕ್ರಮ ಗಣಿಗಾರಿಕೆ ವಿರುದ್ಧ 320 ಕಿ.ಮೀ. ಪಾದಯಾತ್ರೆ ಮಾಡಲಾಗಿತ್ತು. ಆ ನಂತರ ಕೆಲ ಪ್ರಕರಣಗಳನ್ನು ತನಿಖಾ ಸಂಸ್ಥೆಗಳಿಗೆ ವಹಿಸಲಾಗಿತ್ತು. ಒಂದೆರಡು ಪ್ರಕರಣಗಳಲ್ಲಿ ಪ್ರಮುಖ ಅಪರಾಧಿಗಳಿಗೆ ಶಿಕ್ಷೆಯಾಗಿದ್ದರೆ, ಅನೇಕ ಪ್ರಕರಣಗಳು ಇನ್ನೂ ಎಸ್​ಐಟಿ ವಿಚಾರಣೆ ಹಂತದಲ್ಲೇ ಇವೆ ಎಂದಿದ್ದಾರೆ.

ಇದನ್ನೂ ಓದಿ: ನಂದಿನಿ ಹಾಲಿಗೆ ಪರಿಸರಸ್ನೇಹಿ ಪ್ಯಾಕಿಂಗ್: ಇನ್ನು ಮೆಕ್ಕೆಜೋಳದಲ್ಲಿ ತಯಾರಾಗಲಿದೆ ಹಾಲಿನ ಪ್ಯಾಕೆಟ್!

ಇದನ್ನೂ ಓದಿ
Image
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
Image
ನೀಟ್ ಅಂಕಪಟ್ಟಿಯನ್ನೇ ನಕಲಿ ಮಾಡಿದ ವಿದ್ಯಾರ್ಥಿ: ಟೋಪಿ ಹಾಕಿದ ಶಿಕ್ಷಕಿ ಮಗ
Image
ನಂದಿನಿಗೆ ಪರಿಸರಸ್ನೇಹಿ ಪ್ಯಾಕ್: ಮೆಕ್ಕೆಜೋಳದಲ್ಲಿ ತಯಾರಾಗಲಿದೆ ಪ್ಯಾಕೆಟ್!
Image
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!

ಅಕ್ರಮ ಗಣಿಗಾರಿಕೆಯ ಶೇ.7ರಷ್ಟು ಪ್ರಕರಣ ಮಾತ್ರ ತನಿಖೆಗೆ ಒಳಪಟ್ಟಿದೆ. ಆದರೆ ಶೇ.92ರಷ್ಟು ಪ್ರಕರಣಗಳು ತನಿಖೆಗೆ ಒಳಪಟ್ಟಿಲ್ಲ. ಅಧಿಕಾರಶಾಹಿಯ ಮನೋಭಾವದಿಂದ ಕೆಲ ಕೇಸ್ ತನಿಖೆ ಆಗಲೇ ಇಲ್ಲ. ಎಸ್​ಐಟಿಗೆ ವಹಿಸಿದ ಪ್ರಕರಣಗಳಲ್ಲಿ ಪ್ರಗತಿಯೂ ಸಾಧಿಸಲಿಲ್ಲ. ಹೀಗಾಗಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ವಸೂಲಿ ಆಯುಕ್ತರ ನೇಮಿಸಬೇಕು. ಪೊಲೀಸ್ ಇಲಾಖೆಯಡಿ ವಿಶೇಷ ತನಿಖಾ ತಂಡ ರಚನೆ ಮಾಡಬೇಕು. ವಿಶೇಷ ನ್ಯಾಯಾಲಯ ಸ್ಥಾಪಿಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂದು ಸಚಿವ ಹೆಚ್​​ಕೆ ಪಾಟೀಲ್​​ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಆ ಪತ್ರ ರಾಜಕೀಯ ಪತ್ರವಲ್ಲ, ರಾಜ್ಯದ ಸೇವೆ ಆಗಬೇಕು ಅಂತ ಬರೆದಿದ್ದೇನೆ: ಸಚಿವ ಹೆಚ್.ಕೆ.ಪಾಟೀಲ್

ಈ ಬಗ್ಗೆ ರಾಯಚೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಹೆಚ್.ಕೆ.ಪಾಟೀಲ್​, ರಾಜ್ಯದ ಸೇವೆ ಆಗಬೇಕು. ನಮ್ಮ ಸರ್ಕಾರಕ್ಕೆ ಒಳ್ಳೆಯ ಹೆಸರು ಬೇಕು ಅನ್ನೋ ಕಾರಣಕ್ಕೆ ಪತ್ರ ಬರೆದಿದ್ದೇನೆ. ಸಿಎಂಗೆ ಈಗಾಗಲೇ ಪತ್ರ ತೋರಿಸಿದ್ದೇನೆ ಅವರು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದರು.

12 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದರೂ ಅದರಲ್ಲಿ ಕೇವಲ ಶೇಕಡ 7 ತನಿಖೆಯಾಗುತ್ತಿವೆ. 7ರಲ್ಲಿ 2% ಅಂದರೆ ಒಟ್ಟು ಪ್ರಕರಣದಲ್ಲಿ 0.2% ತೀರ್ಪು ಬಂದಿವೆ. ಅದಕ್ಕೆ ತಾರ್ಕಿಕ ಅಂತ್ಯ ಕೊಡಬೇಕಿದೆ. ಸರ್ಕಾರದ ಹಣ, ರಾಜ್ಯದ ಹಣ 1 ಲಕ್ಷ 40 ಸಾವಿರ ಕೋಟಿ ರೂ ಆಗಿದೆ. ಸಿಬಿಐ ಅವರಿಗೆ ನಾವು 9 ಪ್ರಕರಣ ವಹಿಸಿದ್ದೇವೆ. ಅದರಲ್ಲಿ 3 ಪ್ರಕರಣ ಬಿಟ್ಟು 6 ಪ್ರಕರಣ ನಾವು ಮಾಡಲ್ಲ ಅಂತ ಕಳುಹಿಸಿದ್ದಾರೆ. ಎಸ್​ಐಟಿನಲ್ಲಿ ಬಹುಭಾಗ ಪ್ರಕರಣಗಳು ತನಿಖೆಯಾಗಿಲ್ಲ. ಆ ಉದ್ದೇಶದಿಂದ ಸಿಎಂಗೆ ಪತ್ರ ಬರೆದಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಒಂದೂಕಾಲು ವರ್ಷ ಶ್ರದ್ಧೆಯಿಂದ ಕೆಲಸ ಮಾಡಿರುವ ತೃಪ್ತಿ ನನಗಿದೆ: ವಿಜಯೇಂದ್ರ

ನಾವು 15 ವರ್ಷದ ಹಿಂದೆ ಪಾದಯಾತ್ರೆ ಮಾಡಿದ್ದೇವೆ. ಇಷ್ಟು ವರ್ಷ ಆದ ಮೇಲೂ ಮತ್ತೆ ನಾವೇ 2013 ರಿಂದ 2018 ರೊಳಗ ಸಿದ್ದರಾಮಯ್ಯ ಅವರೇ ಕ್ಯಾಬಿನೆಟ್ ಸಬ್ ಕಮಿಟಿ ಮಾಡಿದ್ದರು. ಕಮಿಟಿಯಲ್ಲಿ ಲೋಕಾಯುಕ್ತರು ಏನು ಮಾಡಿದ್ದರಲ್ಲಾ ಅದು ಅಲ್ಲದೆ, ಅದರ ಮುಂದಿನ ಅವಧಿಯೊಳಗಿನ ಹಾನಿ ಯಾವ ಪ್ರಮಾಣದ್ದು ಅಂತ ನಾವು ಎತ್ತಿ ಹಿಡಿದಿದ್ವಿ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:43 am, Sat, 21 June 25

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು