AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಮಳೆ, ಕಾಣೆಯಾದ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ: ಜನಾಕ್ರೋಶ

ತುಮಕೂರು ಜಿಲ್ಲೆಯಲ್ಲಿ ನಿರತಂತ ಮಳೆಯಾಗುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ ಅವರು ಕ್ಷೇತ್ರಕ್ಕೆ ಕಾಲಿಡದೆ ನಾಪತ್ತೆಯಾಗಿದ್ದಾರೆ. ಸೌಜನ್ಯಕ್ಕೆ ಅಧಿಕಾರಿಗಳ ಸಭೆಯೂ ನಡೆಸಿಲ್ಲ.

ನಿರಂತರ ಮಳೆ, ಕಾಣೆಯಾದ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ: ಜನಾಕ್ರೋಶ
ಆರಗ ಜ್ಞಾನೇಂದ್ರ
TV9 Web
| Edited By: |

Updated on: May 21, 2022 | 2:56 PM

Share

ತುಮಕೂರು: ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆ (Rain) ಸುರಿಯುತ್ತಿದೆ. ಇತ್ತ ಜಿಲ್ಲೆಯ ಉಸ್ತುವಾರಿಗಳಾದ ಗೃಹಸಚಿವ ಅರಗ ಜ್ಞಾನೇಂದ್ರ (Araga Jnanendra) ಅವರು ಕ್ಷೇತ್ರಕ್ಕೆ ಒಂದು ದಿನವೂ ಭೇಟಿ ನೀಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ.  ನಿರಂತರ ಮಳೆಯಿಂದಾಗಿ ಜನರು ಕಂಗೆಟ್ಟಿದ್ದರೂ ಕ್ಯಾರೇ ಎನ್ನದ ಅರಗ ಜ್ಞಾನೇಂದ್ರ ಅವರು, ಸೌಜನ್ಯಕ್ಕೆ ಅಧಿಕಾರಿಗಳ ಒಂದು ಸಭೆಯನ್ನೂ ಕರೆದಿಲ್ಲ. ರಾಜ್ಯದ ವಿವಿಧ ಜಿಲ್ಲೆಗಳ ಉಸ್ತುವಾರಿಗಳು ಆಯಾ ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಿ ಮಳೆಗಾಲದ ಸಂಕಷ್ಟ ಎದುರಿಸಲು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ, ತುಮಕೂರು ಜಿಲ್ಲೆಯ ಮಳೆ ಪರಿಸ್ಥತಿ ನಿರ್ವಹಣೆಗೆ ಜಿಲ್ಲಾಡಳಿತಕ್ಕೆ ಈವರೆಗೆ ಸೂಚನೆಯೂ ನೀಡಲ್ಲ.  ಮೇ 4ರಂದು ತುಮಕೂರಿನಲ್ಲಿ ಕೊನೆಯ ಸಭೆ ನಡೆಸಿದ್ದರು. ಆದರೆ, ನಿರಂತರ ಮಳೆಯಾಗುತ್ತಿದ್ದರೂ ಜಿಲ್ಲಾ ಉಸ್ತುವಾರಿಗಳು ಕ್ಷೇತ್ರದಲ್ಲಿ ಜನರ ಮುಂದೆ ಬಾರದ ಹಿನ್ನೆಲೆ ಜನಾಕ್ರೋಶಕ್ಕೆ ಕಾರಣವಾಗಿದೆ. ರೈತರ ಹಾಗೂ ಜನರ ಸಂಕಷ್ಟ (Hardship)ಗಳನ್ನು ಕೇಳುವವರೇ ಇಲ್ಲ ಎಂಬಂತಾಗಿದೆ.

ಇನ್ನೂ ಓದಿ: ಅರಗ ಜ್ಞಾನೇಂದ್ರ ಚಿಕ್ಕ ಮಗುವಲ್ಲ ಪದೇ ಪದೆ ಹೇಳಿಕೆ ಬದಲಿಸೋಕೆ ಎಂದು ಅವರ ವಿರುದ್ಧ ದೂರು ನೀಡಿದ ಮೊಹಮ್ಮದ್‌ ನಲಪಾಡ್

ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು, ಮಳೆ ನೀರು ತುಂಬಿ 30 ಹೆಕ್ಟೇರ್ ರಾಗಿ ಬೆಳೆ ನಾಶಗೊಂಡಿದೆ. 60ಕ್ಕೂ ಹೆಚ್ಚು ಕೆರೆಗಳು ಭರ್ತಿಯಾಗಿವೆ. ಇನ್ನೊಂದೆಡೆ ಮಾರ್ಕೋನಹಳ್ಳಿ ಸೇರಿದಂತೆ ಜಿಲ್ಲೆಯಲ್ಲಿರುವ ಡ್ಯಾಂಗಳು ಕೂಡ ಭರ್ತಿಯಾಗಿವೆ. ಈ ಬಗ್ಗೆಯೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಅವರು ಮಾಹಿತಿ ಕಲೆಹಾಕಿಲ್ಲ. ಹೀಗಿದ್ದಾಗ ರೈತರು ಅನುಭವಿಸಿದ ನಷ್ಟಕ್ಕೆ ಪರಿಹಾರ ನೀಡುವವರಾದರೂ ಯಾರು? ಎಂಬ ಪ್ರಶ್ನೆ ಉದ್ಭವಿಸಿದೆ.

ಅಬಕಾರಿ ಪೊಲೀಸರ ಮೇಲೆ ಹಲ್ಲೆ

ಯಾದಗಿರಿ: ನಕಲಿ ಮದ್ಯ ಸಾಗಾಟಗಾರರ ಮೇಲೆ ದಾಳಿ ನಡೆಸಿದ ಅಬಕಾರಿ (Excise) ಪೊಲೀಸರ ಮೇಲೆ ಜನರು ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಚಂದಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಬಕಾರಿ ಇಲಾಖೆ ಇನ್ಸ್​ಪೆಕ್ಟರ್ ವಿಜಯ್ ಕುಮಾರ್ ಹಿರೇಮಠ ಮತ್ತು ಸಿಬ್ಬಂದಿ ಮೊಹಮ್ಮದ್ ರಫಿ ಮೇಲೆ ಸುಮಾರು 45ಕ್ಕೂ ಹೆಚ್ಚು ಜನರಿಂದ ಹಲ್ಲೆ ನಡೆಸಲಾಗಿದೆ. ಈ ಘಟನೆ ಮೇ 19ರಂದು ರಾತ್ರಿ ನಡೆದಿದೆ.

ಇದನ್ನೂ ಓದಿ: Crime News: ಮನೆಕೆಲಸದವಳ ಮೇಲೆ ಹಲ್ಲೆ ನಡೆಸಿ, ಕೂದಲು ಕತ್ತರಿಸಿದ ಮಾಲೀಕರು!

ಮುದುಕಪ್ಪ ಅಳ್ಳಳ್ಳಿ ತೋಟದ ಮನೆಯಲ್ಲಿ ನಕಲಿ ಮದ್ಯ ಸಂಗ್ರಹ ಮಾಡಿಡಲಾಗಿತ್ತು. ಇದನ್ನು ಸಾಗಿಸುವ ವೇಳೆಯಲ್ಲಿ ಅಬಕಾರಿ ಇಲಾಖೆ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿ ಹನುಮಂತರಾಯ ಸಾಹುನನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಸ್ಥಳದಲ್ಲಿ 40 ಬಾಕ್ಸ್ ನಕಲಿ ಮದ್ಯ ಪತ್ತೆಯಾಗಿದೆ. ಸಾಹುನನ್ನ ಬಂಧಿಸಿ ಠಾಣೆಗೆ ಕರೆದೊಯ್ಯುವ ವೇಳೆ, ಆಕ್ರೋಶಗೊಂಡ ಸುಮಾರು 45ಕ್ಕೂ ಹೆಚ್ಚು ಜನರಿಂದ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆ ಸಾಹು ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದಾನೆ.

ಹಲ್ಲೆಯಲ್ಲಿ ಕೈಜೋಡಿಸಿದ್ದ ಇಬ್ಬರು ಆರೋಪಿಗಳಾದ ಲಕ್ಷ್ಮಣ ಮತ್ತು ರೇವಣಸಿದ್ಧನನ್ನು ಪೊಲೀಸರು ಬಂಧಿಸಿದ್ದು, ಸುಮಾರು 40ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಸಿಲಾಗಿದೆ. ಅಲ್ಲದೆ, ತಪ್ಪಿಸಿಕೊಂಡಿರುವ ಸಾಹುನ ಬಂಧನಕ್ಕೆ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.

ಇದನ್ನೂ ಓದಿ: ನಿಶ್ಚಿತಾರ್ಥ ಮುಗಿಸಿ ಬರುತ್ತಿದ್ದಾಗ ಧಾರವಾಡದಲ್ಲಿ ಭೀಕರ ಅಪಘಾತ; 9 ಜನರು ಸಾವು, 4 ಜನರ ಸ್ಥಿತಿ ಗಂಭೀರ

ಇದನ್ನೂ ಓದಿ: PM Modi: ವಿದೇಶ ಪ್ರವಾಸಕ್ಕೆ ತೆರಳುವಾಗ ರಾತ್ರಿ ಪ್ರಯಾಣಕ್ಕೆ ಆದ್ಯತೆ ನೀಡುವ ಪ್ರಧಾನಿ ಮೋದಿ; ಕಾರಣವೇನು? 

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ