AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದನದಲ್ಲಿ ಸಿ.ಡಿ. ಕೊಟ್ಟ ಬಿಜೆಪಿ ಸಚಿವ, ಸಿಡಿ ನೋಡಿ ಗಾಬರಿಯಾದೆ ಎಂದ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ!

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಮುಂದುವರಿದಿದೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಲಾಪದಲ್ಲಿ ಪಾಲ್ಗೊಂಡಿಲ್ಲ. ಬೆಂಗಳೂರಿನ ಅಶೋಕನಗರದಲ್ಲಿ ಹಿರಿಯ ನಾಯಕ ಆಸ್ಕರ್ ಫರ್ನಾಡಿಂಸ್​ ಅವರ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದು, ಮುಖ್ಯಮಂತ್ರಿ ಬೊಮ್ಮಾಯಿ ಅವರು ಹುಬ್ಬಳ್ಳಿಗೆ ತೆರಳಿದ್ದು ತಮ್ಮ ಬಾಲ್ಯ ಸ್ನೇಹಿತನ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದಾರೆ. ಇತ್ತ ಹಿರಿಯ ನಾಯಕರ ಅನುಪಸ್ಥಿತಿಯಲ್ಲಿ ಹಿರಿಯ ಮನೆ ಕಲಾಪ (ವಿಧಾನ ಪರಿಷತ್​) ನಡೆಯುತ್ತಿದೆ. ಈ ವೇಳೆ ಪ್ರಶ್ನೆಯೊಂದಕ್ಕೆ ಉತ್ತರ ರೂಪವಾಗಿ ಸಚಿವ ಜೆಸಿ […]

ಸದನದಲ್ಲಿ ಸಿ.ಡಿ. ಕೊಟ್ಟ ಬಿಜೆಪಿ ಸಚಿವ, ಸಿಡಿ ನೋಡಿ ಗಾಬರಿಯಾದೆ ಎಂದ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ!
ಸದನದಲ್ಲಿ ಸಿ.ಡಿ. ಕೊಟ್ಟ ಬಿಜೆಪಿ ಸಚಿವ! ಸಿ.ಡಿ ನೋಡಿ ಗಾಬರಿಯಾದೆ ಎಂದ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ!
TV9 Web
| Edited By: |

Updated on:Sep 16, 2021 | 1:46 PM

Share

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಮುಂದುವರಿದಿದೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಲಾಪದಲ್ಲಿ ಪಾಲ್ಗೊಂಡಿಲ್ಲ. ಬೆಂಗಳೂರಿನ ಅಶೋಕನಗರದಲ್ಲಿ ಹಿರಿಯ ನಾಯಕ ಆಸ್ಕರ್ ಫರ್ನಾಡಿಂಸ್​ ಅವರ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದು, ಮುಖ್ಯಮಂತ್ರಿ ಬೊಮ್ಮಾಯಿ ಅವರು ಹುಬ್ಬಳ್ಳಿಗೆ ತೆರಳಿದ್ದು ತಮ್ಮ ಬಾಲ್ಯ ಸ್ನೇಹಿತನ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದಾರೆ.

ಇತ್ತ ಹಿರಿಯ ನಾಯಕರ ಅನುಪಸ್ಥಿತಿಯಲ್ಲಿ ಹಿರಿಯ ಮನೆ ಕಲಾಪ (ವಿಧಾನ ಪರಿಷತ್​) ನಡೆಯುತ್ತಿದೆ. ಈ ವೇಳೆ ಪ್ರಶ್ನೆಯೊಂದಕ್ಕೆ ಉತ್ತರ ರೂಪವಾಗಿ ಸಚಿವ ಜೆಸಿ ಮಾಧುಸ್ವಾಮಿ ಅವರು ಸಿ.ಡಿ (CD) ನೀಡಿದಾಗ ಜೆಡಿಎಸ್ ಸದಸ್ಯ ಶ್ರೀಕಂಠೇ ಗೌಡ ಹಾಸ್ಯ ಚಟಾಕಿ ಹಾರಿಸಿದ್ದು, ಸದನ ನಗೆಗಡಲಲ್ಲಿ ತೇಲಿದೆ.

ಜೆಡಿಎಸ್ ಸದಸ್ಯ ಶ್ರೀಕಂಠೇಗೌಡರು ತಾವು ಕೇಳಿದ್ದ ಪ್ರಶ್ನೆಗೆ ಉತ್ತರ ರೂಪವಾಗಿ ಸಂಬಂಧಪಟ್ಟ ಸಚಿವರ ಕಡೆಯಿಂದ CD ಬಂದಾಗ ಅದನ್ನು ನೋಡಿ ಗಾಬರಿಯಾಗಿದೆ ಎಂದು ಶ್ರೀಕಂಠೇ ಗೌಡರು ಹೇಳಿದರು. CD ನೋಡಿ ನನಗೆ ಗಾಬರಿಯಾಗಿದೆ ಎಂದ ಶ್ರೀಕಂಠೇಗೌಡ, ಸಚಿವರು ನೀಡಿದ CDಯನ್ನು ಸದನಕ್ಕೆ ಎತ್ತಿ ತೋರಿಸಿದರು. ಏನ್ರಿ ಇದೆಲ್ಲ ಸುಮ್ನಿರಿ ಎಂದು ಸಭಾಪತಿ ಹೊರಟ್ಟಿ ನಗೆಯಾಡುತ್ತಲೇ ಪ್ರತಿಕ್ರಿಯಿಸಿದರು.

ಆದರೆ ಅದಕ್ಕೆ ಖಡಕ್​ ಉತ್ತರ ನೀಡಿದ ಸಚಿವ ಜೆಸಿ ಮಾಧುಸ್ವಾಮಿ ಅವರು ಅಷ್ಟೊಂದು ಮಾಹಿತಿ ಕೇಳಿದಾಗ CDಯನ್ನೂ ಕೊಡಬೇಕಾಗುತ್ತೆ, ಎನ್ ಸೈಕ್ಲೋಪಿಡಿಯಾನೂ ಕೊಡಬೇಕಾಗುತ್ತದೆ ಎಂದು ಸಭಾಪತಿ ಮತ್ತು ಶ್ರೀಕಂಠೇಗೌಡಗೆ ತಿಳಿಸಿದರು. ಆಗ ಅದು ಯಾವ ಸಿಡಿಯೋ ಅಂತಾ ಗಾಬರಿ ಬಿದ್ದೋದೆ ನಾನು ಎಂದು ಶ್ರೀಕಂಠೇಗೌಡ ಸೇರಿಸಿದರು.

ಈ ಹಂತದಲ್ಲಿ, ನಾವು ಮಾಹಿತಿ ಕೊಟ್ಟರೂ ವ್ಯಂಗ್ಯ ಮಾಡುತ್ತಾರೆ; ಕೊಡದಿದ್ದರೂ ವ್ಯಂಗ್ಯ ಮಾಡುತ್ತಾರೆಂದು ಮಾಧುಸ್ವಾಮಿ ಹುಸಿನಗೆಯೊಂದಿಗೆ ಹೇಳಿದರು.

Also Read:  ಹುಬ್ಬಳ್ಳಿ ಕುಚಿಕು ಗೆಳೆಯ ರಾಜು ಪಾಟೀಲ್ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಭಾಗಿ, ಬಿಕ್ಕಿ ಬಿಕ್ಕಿ ಅಳುತ್ತಾ ಅಂತಿಮ ನಮನ

(minister jc madhu swamy gives answer to jds member in the form of cd in karnataka legislature house)

Published On - 12:55 pm, Thu, 16 September 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್