AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದನದಲ್ಲಿ ಸಿ.ಡಿ. ಕೊಟ್ಟ ಬಿಜೆಪಿ ಸಚಿವ, ಸಿಡಿ ನೋಡಿ ಗಾಬರಿಯಾದೆ ಎಂದ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ!

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಮುಂದುವರಿದಿದೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಲಾಪದಲ್ಲಿ ಪಾಲ್ಗೊಂಡಿಲ್ಲ. ಬೆಂಗಳೂರಿನ ಅಶೋಕನಗರದಲ್ಲಿ ಹಿರಿಯ ನಾಯಕ ಆಸ್ಕರ್ ಫರ್ನಾಡಿಂಸ್​ ಅವರ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದು, ಮುಖ್ಯಮಂತ್ರಿ ಬೊಮ್ಮಾಯಿ ಅವರು ಹುಬ್ಬಳ್ಳಿಗೆ ತೆರಳಿದ್ದು ತಮ್ಮ ಬಾಲ್ಯ ಸ್ನೇಹಿತನ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದಾರೆ. ಇತ್ತ ಹಿರಿಯ ನಾಯಕರ ಅನುಪಸ್ಥಿತಿಯಲ್ಲಿ ಹಿರಿಯ ಮನೆ ಕಲಾಪ (ವಿಧಾನ ಪರಿಷತ್​) ನಡೆಯುತ್ತಿದೆ. ಈ ವೇಳೆ ಪ್ರಶ್ನೆಯೊಂದಕ್ಕೆ ಉತ್ತರ ರೂಪವಾಗಿ ಸಚಿವ ಜೆಸಿ […]

ಸದನದಲ್ಲಿ ಸಿ.ಡಿ. ಕೊಟ್ಟ ಬಿಜೆಪಿ ಸಚಿವ, ಸಿಡಿ ನೋಡಿ ಗಾಬರಿಯಾದೆ ಎಂದ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ!
ಸದನದಲ್ಲಿ ಸಿ.ಡಿ. ಕೊಟ್ಟ ಬಿಜೆಪಿ ಸಚಿವ! ಸಿ.ಡಿ ನೋಡಿ ಗಾಬರಿಯಾದೆ ಎಂದ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ!
TV9 Web
| Edited By: ಸಾಧು ಶ್ರೀನಾಥ್​|

Updated on:Sep 16, 2021 | 1:46 PM

Share

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಮುಂದುವರಿದಿದೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಲಾಪದಲ್ಲಿ ಪಾಲ್ಗೊಂಡಿಲ್ಲ. ಬೆಂಗಳೂರಿನ ಅಶೋಕನಗರದಲ್ಲಿ ಹಿರಿಯ ನಾಯಕ ಆಸ್ಕರ್ ಫರ್ನಾಡಿಂಸ್​ ಅವರ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದು, ಮುಖ್ಯಮಂತ್ರಿ ಬೊಮ್ಮಾಯಿ ಅವರು ಹುಬ್ಬಳ್ಳಿಗೆ ತೆರಳಿದ್ದು ತಮ್ಮ ಬಾಲ್ಯ ಸ್ನೇಹಿತನ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದಾರೆ.

ಇತ್ತ ಹಿರಿಯ ನಾಯಕರ ಅನುಪಸ್ಥಿತಿಯಲ್ಲಿ ಹಿರಿಯ ಮನೆ ಕಲಾಪ (ವಿಧಾನ ಪರಿಷತ್​) ನಡೆಯುತ್ತಿದೆ. ಈ ವೇಳೆ ಪ್ರಶ್ನೆಯೊಂದಕ್ಕೆ ಉತ್ತರ ರೂಪವಾಗಿ ಸಚಿವ ಜೆಸಿ ಮಾಧುಸ್ವಾಮಿ ಅವರು ಸಿ.ಡಿ (CD) ನೀಡಿದಾಗ ಜೆಡಿಎಸ್ ಸದಸ್ಯ ಶ್ರೀಕಂಠೇ ಗೌಡ ಹಾಸ್ಯ ಚಟಾಕಿ ಹಾರಿಸಿದ್ದು, ಸದನ ನಗೆಗಡಲಲ್ಲಿ ತೇಲಿದೆ.

ಜೆಡಿಎಸ್ ಸದಸ್ಯ ಶ್ರೀಕಂಠೇಗೌಡರು ತಾವು ಕೇಳಿದ್ದ ಪ್ರಶ್ನೆಗೆ ಉತ್ತರ ರೂಪವಾಗಿ ಸಂಬಂಧಪಟ್ಟ ಸಚಿವರ ಕಡೆಯಿಂದ CD ಬಂದಾಗ ಅದನ್ನು ನೋಡಿ ಗಾಬರಿಯಾಗಿದೆ ಎಂದು ಶ್ರೀಕಂಠೇ ಗೌಡರು ಹೇಳಿದರು. CD ನೋಡಿ ನನಗೆ ಗಾಬರಿಯಾಗಿದೆ ಎಂದ ಶ್ರೀಕಂಠೇಗೌಡ, ಸಚಿವರು ನೀಡಿದ CDಯನ್ನು ಸದನಕ್ಕೆ ಎತ್ತಿ ತೋರಿಸಿದರು. ಏನ್ರಿ ಇದೆಲ್ಲ ಸುಮ್ನಿರಿ ಎಂದು ಸಭಾಪತಿ ಹೊರಟ್ಟಿ ನಗೆಯಾಡುತ್ತಲೇ ಪ್ರತಿಕ್ರಿಯಿಸಿದರು.

ಆದರೆ ಅದಕ್ಕೆ ಖಡಕ್​ ಉತ್ತರ ನೀಡಿದ ಸಚಿವ ಜೆಸಿ ಮಾಧುಸ್ವಾಮಿ ಅವರು ಅಷ್ಟೊಂದು ಮಾಹಿತಿ ಕೇಳಿದಾಗ CDಯನ್ನೂ ಕೊಡಬೇಕಾಗುತ್ತೆ, ಎನ್ ಸೈಕ್ಲೋಪಿಡಿಯಾನೂ ಕೊಡಬೇಕಾಗುತ್ತದೆ ಎಂದು ಸಭಾಪತಿ ಮತ್ತು ಶ್ರೀಕಂಠೇಗೌಡಗೆ ತಿಳಿಸಿದರು. ಆಗ ಅದು ಯಾವ ಸಿಡಿಯೋ ಅಂತಾ ಗಾಬರಿ ಬಿದ್ದೋದೆ ನಾನು ಎಂದು ಶ್ರೀಕಂಠೇಗೌಡ ಸೇರಿಸಿದರು.

ಈ ಹಂತದಲ್ಲಿ, ನಾವು ಮಾಹಿತಿ ಕೊಟ್ಟರೂ ವ್ಯಂಗ್ಯ ಮಾಡುತ್ತಾರೆ; ಕೊಡದಿದ್ದರೂ ವ್ಯಂಗ್ಯ ಮಾಡುತ್ತಾರೆಂದು ಮಾಧುಸ್ವಾಮಿ ಹುಸಿನಗೆಯೊಂದಿಗೆ ಹೇಳಿದರು.

Also Read:  ಹುಬ್ಬಳ್ಳಿ ಕುಚಿಕು ಗೆಳೆಯ ರಾಜು ಪಾಟೀಲ್ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಭಾಗಿ, ಬಿಕ್ಕಿ ಬಿಕ್ಕಿ ಅಳುತ್ತಾ ಅಂತಿಮ ನಮನ

(minister jc madhu swamy gives answer to jds member in the form of cd in karnataka legislature house)

Published On - 12:55 pm, Thu, 16 September 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು