AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಿಮ ವರ್ಷದ ಎಮ್ ಬಿ ಬಿ ಎಸ್ ಪರೀಕ್ಷೆ ಮುಂದೂಡುವಂತೆ ಆರ್ ಜಿ ಯು ಎಚ್ ಎಸ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ರ

ಮೂರನೇ ಅಲೆಯಲ್ಲಿ ಪುನಃ ಪ್ರಕರಣಗಳು ಹೆಚ್ಚಾಗುತ್ತಿದ್ದು ಶೈಕ್ಷಣಿಕ ವೇಳಾಪಟ್ಟಿ ಕುಸಿದು, ಪರೀಕ್ಷೆಗಳಿಗೆ ತಯಾರಾಗಲು ವಿದ್ಯಾರ್ಥಿಗಳಿಗೆ ಸಾಕಾಗುವಷ್ಟು ಸಮಯ ಸಿಕ್ಕಿಲ್ಲ. ಅವರು ಅಂತಿಮ ವರ್ಷದ ವಿದ್ಯಾರ್ಥಿಗಳಾಗಿರುವುದರಿಂದ ಚಾನ್ಸ್ ತೆಗೆದುಕೊಳ್ಳಲಾಗದು. ಈ ಹಿನ್ನೆಲೆಯಲ್ಲಿ ಅವರಿಗೆ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಅಗತ್ಯವಿರುವಷ್ಟು ಕಾಲಾವಕಾಶ ಒದಗಿಸಿ, ಪರಷ್ಕೃತ ವೇಳಾಪಟ್ಟಿ ಪ್ರಕಟಿಸುವಂತೆ ಡಾ ಸುಧಾಕರ್ ತಮ್ಮ ಪತ್ರದಲ್ಲಿ ಆದೇಶಿಸಿದ್ದಾರೆ

ಅಂತಿಮ ವರ್ಷದ ಎಮ್ ಬಿ ಬಿ ಎಸ್ ಪರೀಕ್ಷೆ ಮುಂದೂಡುವಂತೆ ಆರ್ ಜಿ ಯು ಎಚ್ ಎಸ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ರ
ಡಾ ಕೆ ಸುಧಾಕರ್
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on:Feb 01, 2022 | 6:42 PM

Share

ಕೋವಿಡ್ ಮೂರನೇ ಅಲೆಯಲ್ಲಿ ಹೆಚ್ಚುತ್ತಿರುವ ಸೋಂಕಿನ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ (RGUHS) ಅಧೀನದಲ್ಲಿ ಬರುವ ವೈದ್ಯಕೀಯ ಕಾಲೇಜುಗಳಲ್ಲಿ ಓದುತ್ತಿರುವ ಅಂತಿಮ ವರ್ಷದ ಎಮ್ ಬಿ ಬಿ ಎಸ್ (MBBS) ವಿದ್ಯಾರ್ಥಿಗಳು ಒಂದು ವಾರದ ಹಿಂದೆ ನಡೆಸಿದ ವರ್ಚ್ಯೂಯಲ್ ಪ್ರತಿಭಟನೆಗೆ (virtual protest) ವೈದ್ಯಕೀಯ ಶಿಕ್ಷಣ ಸಚಿವ (medical education minister) ಡಾ ಕೆ ಸುಧಾಕರ್ (K Sudhakar) ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ಪತ್ರವೊಂದನ್ನು ಬರೆದಿರುವ ಸಚಿವರು ಫೆಬ್ರುವರಿಯಲ್ಲಿ ಆರಂಭವಾಗಬೇಕಿದ್ದ ಎಮ್ ಬಿ ಬಿ ಎಸ್ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಲು ತಿಳಿಸಿದ್ದಾರೆ. ತರಗತಿಗಳು ವಿಳಂಬವಾಗಿ ಆರಂಭವಾಗಿದ್ದೂ ಅಲ್ಲದೆ ಸೋಂಕಿನ ಪ್ರಕರಣಗಳು ಹೆಚ್ಚಾದಾಗ ಅನ್ ಲೈನಲ್ಲಿ ಕ್ಲಾಸ್ಗಳನ್ನು ನಡೆಸಿದ್ದರಿಂದ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗದ ಕಾರಣ ಅವುಗಳನ್ನು ಮುಂದೂಡಬೇಕೆಂದು ವಿದ್ಯಾರ್ಥಿಗಳು ಕಳೆದ ವಾರ ವರ್ಚ್ಯೂಯಲ್ ಪ್ರತಿಭಟನೆ ನಡೆಸಿದ್ದರು.

ರಾಜ್ಯ ಸರ್ಕಾರ ತಮ್ಮ ಮನವಿ ಹಾಗೂ ಪ್ರತಿಭಟನೆ ಇಷ್ಟು ಬೇಗ ಪ್ರತಿಕ್ರಿಯಿಸುತ್ತದೆ ಎಂದು ವಿದ್ಯಾರ್ಥಿಗಳು ಪ್ರಾಯಶಃ ಭಾವಿಸಿರಲಾರರು. ಹಾಗಾಗಿ, ಡಾ ಸುಧಾಕರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿರುವುದು ಅವರಲ್ಲಿ ಅಪಾರ ಸಂತಸ ಮೂಡಿಸಿದೆ.

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಅಧೀನದ ಮೆಡಿಕಲ್ ಕಾಲೇಜುಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿ ಆರಂಭವಾದದ್ದು ಮೇ ತಿಂಗಳಲ್ಲಿ ಮತ್ತು ಕೊವಿಡ್ ಸೋಂಕಿನ ಪ್ರಕರಣಗಳು ಹೆಚ್ಚಿದ್ದ ಕಾರಣ ಜುಲೈವರೆಗೆ ಪಾಠಗಳು ಆನ್ಲೈನ್ ನಡೆದಿವೆ. ಇದೇ ಹಿನ್ನೆಲೆಯಲ್ಲಿ ಅಗತ್ಯವಿದ್ದಷ್ಟು ಕ್ಲಿನಿಕಲ್ ಪೋಸ್ಟಿಂಗ್ ಸಹ ಆಗಿರುವುದಿಲ್ಲ. ಅಷ್ಟು ಮಾತ್ರವಲ್ಲದೆ ಅಂತಿಮ ವರ್ಷದ ವಿದ್ಯಾರ್ಥಿಗಳು ಎರಡು ತಿಂಗಳು ಕಾಲ‌ ಕೋವಿಡ್ ಕರ್ತವ್ಯವನ್ನು ನಿರ್ವಹಿಸಿದ್ದಾರೆ ಎಂದು ಡಾ ಸುಧಾಕರ್ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ಮೂರನೇ ಅಲೆಯಲ್ಲಿ ಪುನಃ ಪ್ರಕರಣಗಳು ಹೆಚ್ಚಾಗುತ್ತಿದ್ದು ಶೈಕ್ಷಣಿಕ ವೇಳಾಪಟ್ಟಿ ಕುಸಿದು, ಪರೀಕ್ಷೆಗಳಿಗೆ ತಯಾರಾಗಲು ವಿದ್ಯಾರ್ಥಿಗಳಿಗೆ ಸಾಕಾಗುವಷ್ಟು ಸಮಯ ಸಿಕ್ಕಿಲ್ಲ. ಅವರು ಅಂತಿಮ ವರ್ಷದ ವಿದ್ಯಾರ್ಥಿಗಳಾಗಿರುವುದರಿಂದ ಚಾನ್ಸ್ ತೆಗೆದುಕೊಳ್ಳಲಾಗದು. ಈ ಹಿನ್ನೆಲೆಯಲ್ಲಿ ಅವರಿಗೆ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಅಗತ್ಯವಿರುವಷ್ಟು ಕಾಲಾವಕಾಶ ಒದಗಿಸಿ, ಪರಷ್ಕೃತ ವೇಳಾಪಟ್ಟಿ ಪ್ರಕಟಿಸುವಂತೆ ಡಾ ಸುಧಾಕರ್ ತಮ್ಮ ಪತ್ರದಲ್ಲಿ ಆದೇಶಿಸಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ವೈದ್ಯಕೀಯ ಕಾಲೇಜುಗಳಲ್ಲಿ ಅಂತಿಮ ವರ್ಷದ ಪರೀಕ್ಷೆಗಳು ಫೆಬ್ರುವರಿ 22 ರಂದು ಆರಂಭವಾಗಬೇಕಿತ್ತು.

ಸಚಿವರ ಪತ್ರ ವಿದ್ಯಾರ್ಥಿಗಳಲ್ಲಿ ಅಪಾರ ಸಂತೋಷವನ್ನುಂಟು ಮಾಡಿದೆ ಮತ್ತು ಮಕ್ಕಳು ಹಗಲು ರಾತ್ರಿ ಕಣ್ಣಲ್ಲಿ ಎಣ್ಣೆ ಬಿಟ್ಟುಕೊಂಡು ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದುದನ್ನು ಕಂಡು ಅವರ ಆರೋಗ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದ ಪೋಷಕರು ಸಹ ನಿಟ್ಟುಸಿರಾಗಿದ್ದಾರೆ.

ಇದನ್ನೂ ಓದಿ:  ಜ. 10ರಿಂದ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್​ ಡೋಸ್, ಆಸ್ಪತ್ರೆಗಳಲ್ಲಿ ವಿಐಪಿಗಳ ಪ್ರಭಾವ ನಡೆಯುವುದಿಲ್ಲ; ಸಚಿವ ಡಾ. ಸುಧಾಕರ್

Published On - 6:41 pm, Tue, 1 February 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು