AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುವರಿ ಡಿಸಿಎಂ ಡಿಶುಂ ಡಿಶುಂ ಮಧ್ಯ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಮುನ್ನೆಲೆಗೆ

ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್​ನಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಮುಸುಕಿನ ಗುದ್ದಾಟಗಳು ನಡೆಯುತ್ತಲೇ ಇವೆ. ಹೆಚ್ಚುವರಿ ಡಿಸಿಎಂ ಪಟ್ಟದ ಫೈಟ್ ಜೋರಾಗೇ ನಡೀತಿದೆ. ಸದ್ಯಕ್ಕೆ ಡಿಕೆ ಶಿವಕುಮಾರ್ ಒಬ್ಬರೇ ಡಿಸಿಎಂ ಆಗಿದ್ದು, ಹೆಚ್ಚುವರಿ ಡಿಸಿಎಂ ಸ್ಥಾನ ನೀಡಬೇಕು ಅನ್ನೋ ಕೂಗು ಕೆಪಿಸಿಸಿ ಕಚೇರಿಯಿಂದ ಮುಂದಿನ ಬೀದಿಗೂ ಬಂದುಬಿಟ್ಟಿದೆ. ಕೆಲವರು ಮೂವರು ಡಿಸಿಎಂ ಇರಲಿ ಅಂದ್ರೆ ಇನ್ನು ಕೆಲವರು ಐವರು ಡಿಸಿಎಂ ಆಗಲಿ ಅಂತಿದ್ದಾರೆ. ಇದರ ಮಧ್ಯ ಇದೀಗ ಕೆಪಿಸಿಸಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕೆಂಬ ಕೂಗು ಕೇಳಿಬಂದಿದೆ.

ಹೆಚ್ಚುವರಿ ಡಿಸಿಎಂ ಡಿಶುಂ ಡಿಶುಂ ಮಧ್ಯ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಮುನ್ನೆಲೆಗೆ
ಡಿಕೆ ಶಿವಕುಮಾರ್
ರಮೇಶ್ ಬಿ. ಜವಳಗೇರಾ
|

Updated on: Jun 26, 2024 | 5:51 PM

Share

ಬೆಂಗಳೂರು, (ಜೂನ್ 26): ಕರ್ನಾಟಕ ಕಾಂಗ್ರೆಸ್​​ನಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಡಿಶುಂ ಡಿಶುಂ ಜೋರಾಗಿದೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಮೊದಲು ಸಚಿವ ಕೆಎನ್ ಡಿಸಿಎಂ ಸ್ಥಾನದ ಬಗ್ಗೆ ಹೇಳಿಕೆ ನೀಡಿ ಕಿಚ್ಚು ಹೊತ್ತಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಾಯಾಸಿದ್ದಾರೆ. ​ಬೆಂಗಳೂರಿನಲ್ಲಿ ಇಂದು (ಜೂನ್ 26) ಸುದ್ದಿಗಾರರೊಂದಿಗೆ ಮಾತನಾಡಿದ ಕೆಎನ್ ರಾಜಣ್ಣ, ಸಿಎಂ, ಡಿಸಿಎಂ ಆಯ್ಕೆ ವೇಳೆ ವರಿಷ್ಠರು ಏನು ಹೇಳಿದ್ದರು? ಸಿದ್ದರಾಮಯ್ಯ ಸಿಎಂ, ಡಿಕೆ ಡಿಸಿಎಂ ಎಂದು ಮಾಡಲಾಗಿತ್ತು. ಕೆಪಿಸಿಸಿ ಅಧ್ಯಕ್ಷರು ಚುನಾವಣೆವರೆಗೆ ಮುಂದುವರಿಕೆ ಅಂದಿದ್ರು. ಅದನ್ನ ನೆನಪಿಸಿಕೊಳ್ಳಲು ಒತ್ತಾಯಿಸುತ್ತೇನೆ ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಈಗ ಲೋಕಸಭೆ ಚುನಾವಣೆ ಮುಗಿದಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಚರ್ಚೆಗೆ ನಾಂದಿ ಹಾಡಿದ್ದ ಡಿಕೆ ಶಿವಕುಮಾರ್

‘ನಾನು ಇನ್ನೆಷ್ಟು ದಿನ ಕೆಪಿಸಿಸಿ ಅಧ್ಯಕ್ಷನಾಗಿ ಇರುತ್ತೇನೋ ಗೊತ್ತಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಇತ್ತೀಚೆಗೆ ನೀಡಿದ್ದ ಹೇಳಿಕೆ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗಳಿಗೆ ಗ್ರಾಸವಾಗಿದೆ. ಬೆಂಗಳೂರು ಗ್ರಮಾಂತರ ಲೋಕಸಭಾ ಚುನಾವಣೆ ಸೋಲುಕಂಡಿರುವ ತಮ್ಮ ಸಹೋದರ ಡಿಕೆ ಸುರೇಶ್​​ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟವನ್ನು ಕಟ್ಟಲು ಡಿಕೆ ಶಿವಕುಮಾರ್ ಈ ರೀತಿ ಹೇಳಿಕೆ ನೀಡಿದ್ದಾರೆ ಎನ್ನುವ ಚರ್ಚೆಯೂ ಸಹ ನಡೆದಿದ್ದವು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಶುರುವಾಯ್ತು ಪ್ಲ್ಯಾನ್; ಹೆಚ್ಚುವರಿ ಡಿಸಿಎಂ ಆಗ್ರಹದ ಹಿಂದಿದೆ ಭರ್ಜರಿ ತಂತ್ರ!

ಆದರೆ, ಪಕ್ಷದ ನಂಬಲರ್ಹ ಮೂಲಗಳ ಪ್ರಕಾರ ಕನಿಷ್ಠ ಈ ವರ್ಷಾಂತ್ಯದವರೆಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಸಾಧ್ಯ. ಅದರಲ್ಲೂ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸುವ ದಿಸೆಯಲ್ಲಿ ಚಿಂತಿಸುತ್ತಿರುವ ಕಾಂಗ್ರೆಸ್‌ ನಾಯಕತ್ವ ಈ ಹಂತದಲ್ಲಿ ಅಧ್ಯಕ್ಷರ ಬದಲಾವಣೆಯಂತಹ ಸರ್ಕಸ್‌ಗೆ ಕೈ ಹಾಕುವ ಸಾಧ್ಯತೆಯೇ ಇಲ್ಲ. ಹೀಗಿದ್ದರೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಅವರೇ ಇಂತಹದೊಂದು ಹೇಳಿಕೆ ನೀಡಿದ್ದು ಏಕೆ ಎಂಬ ಬಗ್ಗೆ ಪಕ್ಷದ ವಲಯದಲ್ಲಂತೂ ಹಲವು ವ್ಯಾಖ್ಯಾನಗಳಿಗೆ ಕಾರಣವಾಗಿದೆ.

ಶಿವಕುಮಾರ್‌ ಅವರ ಆಪ್ತ ಮೂಲಗಳ ಪ್ರಕಾರ, ಬೆಂಗಳೂರು ನಗರಾಭಿವೃದ್ದಿ ಹಾಗೂ ಜಲಸಂಪನ್ಮೂಲ ಖಾತೆಯಂತಹ ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿರುವ ಶಿವಕುಮಾರ್‌ ಅವರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಅಲ್ಲದೆ, ಕಾಂಗ್ರೆಸ್‌ ಹೈಕಮಾಂಡ್‌, ಲೋಕಸಭಾ ಚುನಾವಣೆ ಪೂರ್ಣಗೊಳ್ಳುವವರೆಗೂ ನೀವೇ ಕೆಪಿಸಿಸಿ ಅಧ್ಯಕ್ಷ ಹುದ್ದೆ ನಿರ್ವಹಿಸಿ ಎಂಬ ಸೂಚನೆಯನ್ನು ಚುನಾವಣೆ ಪೂರ್ವದಲ್ಲಿ ಶಿವಕುಮಾರ್‌ ಅವರಿಗೆ ನೀಡಿತ್ತು.

ಈಗ ಲೋಕಸಭಾ ಚುನಾವಣೆ ಮುಕ್ತಾಯಗೊಂಡಿರುವುದರಿಂದ ಹೈಕಮಾಂಡ್‌ ಸೂಚಿಸಿದ್ದ ಅವಧಿ ಮುಗಿದಿದೆ. ಜತೆಗೆ, ಹುದ್ದೆಗೆ ಬಂದೂ ನಾಲ್ಕು ವರ್ಷವೂ ಆಗಿದೆ. ಈ ಎಲ್ಲ ಕಾರಣಗಳಿಗಾಗಿ ತಾವು ಈ ಹುದ್ದೆಯ ಹೊಣೆಗಾರಿಕೆಯನ್ನು ಬೇರೆಯವರಿಗೆ ಬಿಟ್ಟುಕೊಡಲು ಸಿದ್ಧ ಎಂಬ ಸಂದೇಶವನ್ನು ಹೈಕಮಾಂಡ್‌ಗೆ ರವಾನಿಸುವ ಏಕ ಮಾತ್ರ ಉದ್ದೇಶದಿಂದ ಶಿವಕುಮಾರ್‌ ಈ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಹೈಕಮಾಂಡ್‌ ಬಯಸಿದರೆ ಹುದ್ದೆ ಬಿಟ್ಟುಕೊಡುವ ಮನಸ್ಸೂ ಅವರಿಗೆ ಇದೆ ಎಂದು ಹೇಳುತ್ತವೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಲಿಂಗಾಯತ ಸಮುದಾಯಕ್ಕೆ ನೀಡುವಂತೆ ಒತ್ತಾಯ

ಇದೀಗ ಕೆಎನ್​ ರಾಜಣ್ಣ ಅವರು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಮಾಡಬೇಕೆನ್ನುವ ಧ್ವನಿ ಎತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ಲಿಂಗಾಯತ ಶಾಸಕರು ಸಹ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ತಮ್ಮ ಸಮುದಾಯಕ್ಕೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಹೈಕಮಾಂಡ್​ ಬಳಿ ಮಾತುಕತೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಕಾಂಗ್ರೆಸ್​ನಲ್ಲಿ ಒಂದಲ್ಲ ಒಂದು ವಿಚಾರಕ್ಕೆ ನಾಯಕರ ನಡುವೆ ಮುಸುಕಿನ ಗುದ್ದಾಟಗಳು ನಡೆಯುತ್ತಲೇ ಇವೆ. ಸದ್ಯ ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಭಾರೀ ಚರ್ಚೆಯಾಗುತ್ತಿದ್ದು, ಇದರ ಮಧ್ಯ ಇದೀಗ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಕೂಗು ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ