AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Byre Gowda: ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೂ ಆರ್ಥಿಕ ಶಿಸ್ತು ಕಾಪಾಡಿದ್ದೇವೆ: ಸಚಿವ ಕೃಷ್ಣಭೈರೇಗೌಡ

ಸಚಿವ ಕೃಷ್ಣಭೈರೇಗೌಡ, ಕನಸಿನ ಕರುನಾಡು ಟಿವಿ9 ಸಮ್ಮಿಟ್​ 2023: ಕನಸಿನ ಕರುನಾಡು ಟಿವಿ9 ಸಮ್ಮಿಟ್​ 2023: ಗ್ಯಾರಂಟಿಗಳ ಮೂಲಕ ದುಡಿಯುವ ವರ್ಗವನ್ನು ಬಲಪಡಿಸಿದ್ದೇವೆ. ಗ್ಯಾರಂಟಿಗಳನ್ನು ಜಾರಿ ಮಾಡಿದರೂ ಆರ್ಥಿಕ ಶಿಸ್ತು ಕಾಪಾಡಿದ್ದೇವೆ. ಗ್ಯಾರಂಟಿ ಯೋಜನೆಗಳು ಶೇ.90ರಷ್ಟು ಅರ್ಹ ಫಲಾನುಭವಿಗಳಿಗೆ ತಲುಪಿವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

Krishna Byre Gowda: ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೂ ಆರ್ಥಿಕ ಶಿಸ್ತು ಕಾಪಾಡಿದ್ದೇವೆ: ಸಚಿವ ಕೃಷ್ಣಭೈರೇಗೌಡ
ಸಚಿವ ಕೃಷ್ಣಭೈರೇಗೌಡ
ಗಂಗಾಧರ​ ಬ. ಸಾಬೋಜಿ
|

Updated on:Sep 15, 2023 | 6:23 PM

Share

ಬೆಂಗಳೂರು, ಸೆಪ್ಟೆಂಬರ್​ 15: ಗ್ಯಾರಂಟಿಗಳ ಮೂಲಕ ದುಡಿಯುವ ವರ್ಗವನ್ನು ಬಲಪಡಿಸಿದ್ದೇವೆ. ಗ್ಯಾರಂಟಿಗಳನ್ನು ಜಾರಿ ಮಾಡಿದರೂ ಆರ್ಥಿಕ ಶಿಸ್ತು ಕಾಪಾಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಹೇಳಿದ್ದಾರೆ. ಕಾಂಗ್ರೆಸ್​ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಟಿವಿ9 ಕನ್ನಡ ಬೆಂಗಳೂರಿನ ಲಲಿತ್​ ಅಶೋಕ್​​​ ಹೋಟೆಲ್​ನಲ್ಲಿ ಆಯೋಜಿಸಿರುವ ‘ಕನಸಿನ ಕರುನಾಡು’ (TV9 Karnataka Summit 2023) ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿಯವರ ರೀತಿ ನಾವು ಬೆಂಕಿ ಇಡುವ ರಾಜಕಾರಣ ಮಾಡುತ್ತಿಲ್ಲ. ಮಕ್ಕಳ ಶುಲ್ಕ ಕಟ್ಟಲು ಕಷ್ಟ ಪಡುತ್ತಿರುವವರಿಗೆ ಅನುಕೂಲ ಆಗುತ್ತಿದೆ. ಬಡವರಿಗೆ ಅನುಕೂಲ ಮಾಡಿಕೊಡಲು ‘ಗೃಹಲಕ್ಷ್ಮೀ’ ಯೋಜನೆ ಜಾರಿ ಮಾಡಲಾಗಿದೆ. ಆ ಮೂಲಕ ಗ್ಯಾರಂಟಿ ಯೋಜನೆಗಳು ಶೇ.90ರಷ್ಟು ಅರ್ಹ ಫಲಾನುಭವಿಗಳಿಗೆ ತಲುಪಿವೆ. ಶೇಕಡಾ 10ರಷ್ಟು ಶ್ರೀಮಂತರಿಗೂ ತಲುಪಿರಬಹುದು ಎಂದು ತಿಳಿಸಿದರು.

ಇದನ್ನೂ ಓದಿ: Siddaramaiah Speech: ಗ್ಯಾರಂಟಿ ಯೋಜನೆಗಳನ್ನು ದೇಶಕ್ಕೆ ತಿಳಿಸುವ ಕೆಲಸ ಮಾಡಲಾಗುತ್ತಿದೆ: ಸಿದ್ದರಾಮಯ್ಯ

ಎಲ್ಲಾ ದೇಶಗಳಲ್ಲಿ ನೆರ ತೆರಿಗೆ ಜಾಸ್ತಿ ಇದೆ. ಅದೇ ರೀತಿಯಾಗಿ ಜಿಎಸ್​ಟಿ ಕಡಿಮೆ ಇದೆ. ಆದರೆ ನಮ್ಮ ದೇಶದಲ್ಲಿ ಅದು ಊಲ್ಟಾ ಇದೆ. ಶ್ರೀಮಂತರು ಕಟ್ಟುತ್ತಿರುವ ತೆರಿಗೆಯನ್ನು ಕಟ್ಟು ಮಾಡಿ, ಜನರು ಕಟ್ಟುವ ತೆರಿಗೆಗಳನ್ನು ಜಾಸ್ತಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Ramalinga Reddy: ಇನ್ಮುಂದೆ ಸಾರಿಗೆ ಸಿಬ್ಬಂದಿಗೂ ಪಿಂಚಣಿ; ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಘೋಷಣೆ

ಉದ್ಯೋಗ ಖಾತ್ರಿ ಯೋಜನೆಯಿಂದ ಜನರು ಬಡತನದಿಂದ ಹೊರಬಂದಿದ್ದಾರೆ. ಉದ್ಯೋಗ ಖಾತ್ರಿ ಭಾರತದಲ್ಲಿ ಒಂದು ಕ್ರಾಂತಿ ಮಾಡಿದೆ. ಅದೇ ರೀತಿಯಾಗಿ ಆಹಾರ ಭದ್ರತಾ ಯೋಜನೆ ಮೂಲಕ ದೇಶ ಎಲ್ಲ ಬಡವರಿಗೆ ಉಚಿತ ಅಕ್ಕಿ ಸಿಗುತ್ತಿದೆ. ಆಗಲೂ ದೇಶ ಹಾಳಾಗುತ್ತೆ ಎಂದು ಹೇಳಿದ್ದರು. ಆದರೆ ದೇಶದ ಜನರಿಗೆ ಇದು ಉಪಯೋಗವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:18 pm, Fri, 15 September 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ