AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Byre Gowda: ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೂ ಆರ್ಥಿಕ ಶಿಸ್ತು ಕಾಪಾಡಿದ್ದೇವೆ: ಸಚಿವ ಕೃಷ್ಣಭೈರೇಗೌಡ

ಸಚಿವ ಕೃಷ್ಣಭೈರೇಗೌಡ, ಕನಸಿನ ಕರುನಾಡು ಟಿವಿ9 ಸಮ್ಮಿಟ್​ 2023: ಕನಸಿನ ಕರುನಾಡು ಟಿವಿ9 ಸಮ್ಮಿಟ್​ 2023: ಗ್ಯಾರಂಟಿಗಳ ಮೂಲಕ ದುಡಿಯುವ ವರ್ಗವನ್ನು ಬಲಪಡಿಸಿದ್ದೇವೆ. ಗ್ಯಾರಂಟಿಗಳನ್ನು ಜಾರಿ ಮಾಡಿದರೂ ಆರ್ಥಿಕ ಶಿಸ್ತು ಕಾಪಾಡಿದ್ದೇವೆ. ಗ್ಯಾರಂಟಿ ಯೋಜನೆಗಳು ಶೇ.90ರಷ್ಟು ಅರ್ಹ ಫಲಾನುಭವಿಗಳಿಗೆ ತಲುಪಿವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

Krishna Byre Gowda: ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೂ ಆರ್ಥಿಕ ಶಿಸ್ತು ಕಾಪಾಡಿದ್ದೇವೆ: ಸಚಿವ ಕೃಷ್ಣಭೈರೇಗೌಡ
ಸಚಿವ ಕೃಷ್ಣಭೈರೇಗೌಡ
ಗಂಗಾಧರ​ ಬ. ಸಾಬೋಜಿ
|

Updated on:Sep 15, 2023 | 6:23 PM

Share

ಬೆಂಗಳೂರು, ಸೆಪ್ಟೆಂಬರ್​ 15: ಗ್ಯಾರಂಟಿಗಳ ಮೂಲಕ ದುಡಿಯುವ ವರ್ಗವನ್ನು ಬಲಪಡಿಸಿದ್ದೇವೆ. ಗ್ಯಾರಂಟಿಗಳನ್ನು ಜಾರಿ ಮಾಡಿದರೂ ಆರ್ಥಿಕ ಶಿಸ್ತು ಕಾಪಾಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಹೇಳಿದ್ದಾರೆ. ಕಾಂಗ್ರೆಸ್​ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಟಿವಿ9 ಕನ್ನಡ ಬೆಂಗಳೂರಿನ ಲಲಿತ್​ ಅಶೋಕ್​​​ ಹೋಟೆಲ್​ನಲ್ಲಿ ಆಯೋಜಿಸಿರುವ ‘ಕನಸಿನ ಕರುನಾಡು’ (TV9 Karnataka Summit 2023) ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿಯವರ ರೀತಿ ನಾವು ಬೆಂಕಿ ಇಡುವ ರಾಜಕಾರಣ ಮಾಡುತ್ತಿಲ್ಲ. ಮಕ್ಕಳ ಶುಲ್ಕ ಕಟ್ಟಲು ಕಷ್ಟ ಪಡುತ್ತಿರುವವರಿಗೆ ಅನುಕೂಲ ಆಗುತ್ತಿದೆ. ಬಡವರಿಗೆ ಅನುಕೂಲ ಮಾಡಿಕೊಡಲು ‘ಗೃಹಲಕ್ಷ್ಮೀ’ ಯೋಜನೆ ಜಾರಿ ಮಾಡಲಾಗಿದೆ. ಆ ಮೂಲಕ ಗ್ಯಾರಂಟಿ ಯೋಜನೆಗಳು ಶೇ.90ರಷ್ಟು ಅರ್ಹ ಫಲಾನುಭವಿಗಳಿಗೆ ತಲುಪಿವೆ. ಶೇಕಡಾ 10ರಷ್ಟು ಶ್ರೀಮಂತರಿಗೂ ತಲುಪಿರಬಹುದು ಎಂದು ತಿಳಿಸಿದರು.

ಇದನ್ನೂ ಓದಿ: Siddaramaiah Speech: ಗ್ಯಾರಂಟಿ ಯೋಜನೆಗಳನ್ನು ದೇಶಕ್ಕೆ ತಿಳಿಸುವ ಕೆಲಸ ಮಾಡಲಾಗುತ್ತಿದೆ: ಸಿದ್ದರಾಮಯ್ಯ

ಎಲ್ಲಾ ದೇಶಗಳಲ್ಲಿ ನೆರ ತೆರಿಗೆ ಜಾಸ್ತಿ ಇದೆ. ಅದೇ ರೀತಿಯಾಗಿ ಜಿಎಸ್​ಟಿ ಕಡಿಮೆ ಇದೆ. ಆದರೆ ನಮ್ಮ ದೇಶದಲ್ಲಿ ಅದು ಊಲ್ಟಾ ಇದೆ. ಶ್ರೀಮಂತರು ಕಟ್ಟುತ್ತಿರುವ ತೆರಿಗೆಯನ್ನು ಕಟ್ಟು ಮಾಡಿ, ಜನರು ಕಟ್ಟುವ ತೆರಿಗೆಗಳನ್ನು ಜಾಸ್ತಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Ramalinga Reddy: ಇನ್ಮುಂದೆ ಸಾರಿಗೆ ಸಿಬ್ಬಂದಿಗೂ ಪಿಂಚಣಿ; ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಘೋಷಣೆ

ಉದ್ಯೋಗ ಖಾತ್ರಿ ಯೋಜನೆಯಿಂದ ಜನರು ಬಡತನದಿಂದ ಹೊರಬಂದಿದ್ದಾರೆ. ಉದ್ಯೋಗ ಖಾತ್ರಿ ಭಾರತದಲ್ಲಿ ಒಂದು ಕ್ರಾಂತಿ ಮಾಡಿದೆ. ಅದೇ ರೀತಿಯಾಗಿ ಆಹಾರ ಭದ್ರತಾ ಯೋಜನೆ ಮೂಲಕ ದೇಶ ಎಲ್ಲ ಬಡವರಿಗೆ ಉಚಿತ ಅಕ್ಕಿ ಸಿಗುತ್ತಿದೆ. ಆಗಲೂ ದೇಶ ಹಾಳಾಗುತ್ತೆ ಎಂದು ಹೇಳಿದ್ದರು. ಆದರೆ ದೇಶದ ಜನರಿಗೆ ಇದು ಉಪಯೋಗವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:18 pm, Fri, 15 September 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!