AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಿ; ಪೊಲೀಸರಿಗೆ ಕೆ.ಎಸ್​ ಈಶ್ವರಪ್ಪ ಸೂಚನೆ

ನಿಯಮ ಪಾಲಿಸದಿದ್ದರೆ ಕ್ರಮ ಕಠಿಣವಾಗಿರಲಿ. ಇದೇ ರೀತಿ ಕೊವಿಡ್​ ನಿಯಮ ಉಲ್ಲಂಘಿಸುತ್ತಿದ್ದರೆ ಸಮಸ್ಯೆ ಗಂಭೀರವಾಗುತ್ತದೆ. ಕಠಿಣ ಕ್ರಮ ಕೈಗೊಳ್ಳದಿದ್ದರೆ ಕಷ್ವಾಗುತ್ತದೆ ಎಂದು ಸಚಿವ ಕೆ.ಎಸ್​ ಈಶ್ವರಪ್ಪ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಕೊವಿಡ್ ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಿ; ಪೊಲೀಸರಿಗೆ ಕೆ.ಎಸ್​ ಈಶ್ವರಪ್ಪ ಸೂಚನೆ
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ
shruti hegde
| Edited By: |

Updated on: Apr 30, 2021 | 2:55 PM

Share

ಶಿವಮೊಗ್ಗ: ಕೊರೊನಾ ಎರಡನೇ ಅಲೆ ಜೋರಾಗಿದ್ದರೂ ಕೂಡಾ ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಗಂಭೀರವಾಗಿ ಜಾರಿಯಾಗಿಲ್ಲ. ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಲ್ಲಿದೆ ಎನ್ನುವುದೇ ಗೊತ್ತಾಗುತ್ತಿಲ್ಲ ಎಂದು ಸಚಿವ ಕೆ.ಎಸ್​ ಈಶ್ವರಪ್ಪ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಲಾಠಿ ಬೀಸುತ್ತಿರೋ ಅಥವಾ ಕೇಸ್‌ ದಾಖಲಿಸುತ್ತಿರೋ ನಿಮಗೆ ಬಿಟ್ಟಿದ್ದು, ನಿಯಮ ಪಾಲಿಸದಿದ್ದರೆ ಕ್ರಮ ಕಠಿಣವಾಗಿರಲಿ. ಇದೇ ರೀತಿ ಕೊವಿಡ್​ ನಿಯಮ ಉಲ್ಲಂಘಿಸುತ್ತಿದ್ದರೆ ಸಮಸ್ಯೆ ಗಂಭೀರವಾಗುತ್ತದೆ. ಕಠಿಣ ಕ್ರಮ ಕೈಗೊಳ್ಳದಿದ್ದರೆ ಕಷ್ವಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ಅವಧಿ ಮುಗಿಯದಿದ್ದರೂ ಸಂಚಾರ ಮುಂದುವರಿಕೆ ಏಕೆ? ಜನರ ನಿರ್ಲಕ್ಷ್ಯ ತೋರುತ್ತಿದ್ದರೆ ಕ್ರಮ ಕೈಗೊಳ್ಳಿ. ಜಿಲ್ಲೆಯಲ್ಲಿ ಕರ್ಫ್ಯೂ ಇದೆ ಎನ್ನುವುದೇ ಗೊತ್ತಾಗುತ್ತಿಲ್ಲ ಎಂದು ಸಚಿವ ಕೆ.ಎಸ್​ ಈಶ್ವರಪ್ಪ ಸಭೆಯಲ್ಲಿ ಪೊಲೀಸ್​ ಇಲಾಖೆ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಕೊವಿಡ್ ಸೋಂಕಿತರ ಭೇಟಿಗೆ ಅವಕಾಶ; ಆಸ್ಪತ್ರೆ ಅವ್ಯವಸ್ಥೆ ಕಂಡು ಬೆಚ್ಚಿಬಿದ್ದ ಜನಪ್ರತಿನಿಧಿಗಳು ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ಸ್ಪೋಟಗೊಳ್ಳುತ್ತಿದೆ. ಈಗಾಗಲೇ 10ಕ್ಕೂ ಹೆಚ್ಚು ಜನರು ಬಲಿಯಾಗುತ್ತಿದ್ದಾರೆ. ಈ ನಡುವೆ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿರುವ ಕೊವಿಡ್ ವ್ಯವಸ್ಥೆಗಳ ಪರಿಶೀಲನೆಗೆ ಏಪ್ರಿಲ್ 27 ರಂದು ಬಿಜೆಪಿ ಶಾಸಕ ರುದ್ರೇಗೌಡರು ಮತ್ತು ಆಯನೂರು ಮಂಜುನಾಥ್ ಆಗಮಿಸಿದ್ದು, ಜಿಲ್ಲಾಸ್ಪತ್ರೆಯ ಅಧೀಕ್ಷ ಡಾ. ಶ್ರೀಧರ್ ಅವರಿಂದ ಕೊವಿಡ್ ಸೋಂಕಿತರ ಚಿಕಿತ್ಸೆ ಕುರಿತು ಮಾಹಿತಿ ಕಲೆಹಾಕಿದ್ದಾರೆ.

ಈ ವೇಳೆ ಕೊವಿಡ್ ಆಸ್ಪತ್ರೆಯಲ್ಲಿರುವ ಕೆಲವೊಂದು ಅವ್ಯವಸ್ಥೆಗಳು ಬಹಿರಂಗವಾಗಿದೆ. ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಿಗೆ ಊಟ ಮತ್ತು ಇತರೆ ಎಲ್ಲಾ ವ್ಯವಸ್ಥೆಗಳನ್ನು ಕುಟುಂಬದ ಸದಸ್ಯರೇ ಮಾಡುತ್ತಿದ್ದಾರೆ. ಅದರಲ್ಲೂ ಕೊವಿಡ್ ಆಸ್ಪತ್ರೆಯ ಒಳಗೆ ಹೋಗಿ ನೆರವಾಗಿ ಮಾತನಾಡುತ್ತಿರುವ ದೃಶ್ಯಗಳು ಕಂಡು ಬಂದಿವೆ. ಪಿಪಿಇ ಕಿಟ್ ಧರಿಸದೇ ಹೀಗೆ ಸೋಂಕಿತರ ಸಂಬಂಧಿಗಳು ಕೊವಿಡ್ ಆಸ್ಪತ್ರೆಯಲ್ಲಿ ಓಡಾಡಿಕೊಂಡಿದ್ದಾರೆ. ಇನ್ನೂ ಆಸ್ಪತ್ರೆಯಲ್ಲಿ ಸಿಬ್ಬಂದಿ ಮತ್ತು ನರ್ಸ್​ಗಳ ಕೊರತೆಯಿಂದ ಸೋಂಕಿತರ ಆರೈಕೆ ಖುದ್ದಾಗಿ ಸಂಬಂಧಿಗಳೇ ಮಾಡುತ್ತಿರುವ ಅಚ್ಚರಿ ಸಂಗತಿಗಳು ಸಿಸಿ ಕ್ಯಾಮರಾ ಮೂಲಕ ಬಹಿರಂಗವಾಗಿದೆ. ಇದನ್ನು ನೋಡಿದ ಬಿಜೆಪಿ ಶಾಸಕ ರುದ್ರೇಗೌಡರು ಮತ್ತು ಆಯನೂರು ಮಂಜುನಾಥ್ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಕೊವಿಡ್ ಸೋಂಕಿತರ ಭೇಟಿಗೆ ಅವಕಾಶ; ಆಸ್ಪತ್ರೆ ಅವ್ಯವಸ್ಥೆ ಕಂಡು ಬೆಚ್ಚಿಬಿದ್ದ ಜನಪ್ರತಿನಿಧಿಗಳು

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು