Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯತಿ ಸದಸ್ಯರಿಗೆ ಇಂದಿನಿಂದ ತರಬೇತಿ: ಅಧ್ಯಕ್ಷರು, ಉಪಾಧ್ಯಕ್ಷರಿಗೆ ಪ್ರತ್ಯೇಕ ತರಬೇತಿ- ಸಚಿವ ಈಶ್ವರಪ್ಪ

ತಾಲೂಕು ಪಂಚಾಯತ್ ಗಳಿಂದ ಉಪಯೋಗ ಆಗ್ತಿಲ್ಲ ಎಂದು ಚರ್ಚೆ ಆಗ್ತಿದೆ. ಗ್ರಾಮ ಪಂಚಾಯತಿ ಮತ್ತು ಜಿಲ್ಲಾ ಪಂಚಾಯತ್ ಸಾಕು ಎನ್ನುತ್ತಿದ್ದಾರೆ. ಈ ಬಗ್ಗೆ ಚರ್ಚೆ ಮಾಡಿ‌ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿಕೊಡಲಾಗುತ್ತದೆ. ನೋಡೋಣ, ಕೇಂದ್ರ ಸರ್ಕಾರ ಯಾವ ರೀತಿ ತೀರ್ಮಾನ ಮಾಡುತ್ತದೋ ಅಂತಾ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಗ್ರಾಮ ಪಂಚಾಯತಿ ಸದಸ್ಯರಿಗೆ ಇಂದಿನಿಂದ ತರಬೇತಿ: ಅಧ್ಯಕ್ಷರು, ಉಪಾಧ್ಯಕ್ಷರಿಗೆ ಪ್ರತ್ಯೇಕ ತರಬೇತಿ- ಸಚಿವ ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ
Follow us
shruti hegde
|

Updated on:Feb 16, 2021 | 3:51 PM

ಬೆಂಗಳೂರು: ತಾಲೂಕು ಪಂಚಾಯತ್ ಗಳಿಂದ ಉಪಯೋಗ ಆಗ್ತಿಲ್ಲ ಎಂದು ಚರ್ಚೆ ಆಗ್ತಿದೆ. ಗ್ರಾಮ ಪಂಚಾಯತಿ ಮತ್ತು ಜಿಲ್ಲಾ ಪಂಚಾಯತ್ ಸಾಕು ಎನ್ನುತ್ತಿದ್ದಾರೆ. ಈ ಬಗ್ಗೆ ಚರ್ಚೆ ಮಾಡಿ‌ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿಕೊಡಲಾಗುತ್ತದೆ. ನೋಡೋಣ, ಕೇಂದ್ರ ಸರ್ಕಾರ ಯಾವ ರೀತಿ ತೀರ್ಮಾನ ಮಾಡುತ್ತದೋ ಅಂತಾ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದು, ಇತ್ತೀಚೆಗೆ ಆಯ್ಕೆಗೊಂಡಿರುವ ನೂತನ ಗ್ರಾಮ ಪಂಚಾಯತ್​ ಸದಸ್ಯರುಗಳಿಗೆ ಇಂದಿನಿಂದ ತರಬೇತಿ ನೀಡುತ್ತೇವೆ  ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತಂತೆ ಮಾತನಾಡುತ್ತಿದ್ದ ಅವರು 5,728 ಗ್ರಾ.ಪಂ.ಗೆ 90,729 ಸದಸ್ಯರು ಆಯ್ಕೆಯಾಗಿದ್ದಾರೆ. ತರಬೇತಿ ಮೂಲಕ ಅಧಿಕಾರದ ಬಗ್ಗೆ ಮಾಹಿತಿ ನೀಡುತ್ತೇವೆ. 5 ದಿನಗಳಲ್ಲಿ 850 ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡುತ್ತಾರೆ. ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರಿಗೂ ಪ್ರತ್ಯೇಕ ತರಬೇತಿ ನೀಡಲಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​

ಈ ಕುರಿತು 23 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದೇವೆ. ಹಾಗೂ ಇದಕ್ಕಾಗಿ 15ನೇ ಹಣಕಾಸು ಆಯೋಗದಿಂದಲೂ ಅನುದಾನ ಬರುತ್ತದೆ. 1 ರಿಂದ 1.5 ಕೋಟಿ ರೂಪಾಯಿ ಅನುದಾನ ಸಿಗುತ್ತದೆ. ಹಾಗೂ ವಿದ್ಯುತ್ ಸಮಸ್ಯೆ ಆಗದಂತೆ ಸೋಲಾರ್ ವ್ಯವಸ್ಥೆ ಮಾಡುತ್ತಿದ್ದೇವೆ. ಸದ್ಯಕ್ಕೆ ಏಪ್ರೀಲ್‌, ಮೇನಲ್ಲಿ ನಡೆಯಬಹುದಾದ ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ನಡೆಯಲಿದೆ. ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.

Published On - 3:16 pm, Tue, 16 February 21

‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್