AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಕುರುಬರ ಋಣ ತೀರಿಸಲಿ ಎಂದ ಸಿದ್ದರಾಮಾನಂದಪುರಿ ಸ್ವಾಮೀಜಿ; ವೇದಿಕೆ ಮೇಲೆ ಗರಂ ಆದ್ರು ಕೆ.ಎಸ್​.ಈಶ್ವರಪ್ಪ

ಮಾತು ತಪ್ಪಿರುವವರು ಅನೇಕ ಕಡೆ ಸರ್ಕಾರ ಕಳೆದುಕೊಂಡಿದ್ದಾರೆ. ಆ ಪರಿಸ್ಥಿತಿ ನಿಮಗೂ ಬರಬಾರದು. ಇಲ್ಲಿ ಈಶ್ವರಪ್ಪ ಇದ್ದಾರೆ ಎಂದ ಮಾತ್ರಕ್ಕೆ ನಾವು ಬಿಜೆಪಿ ಪರ ಅಂತಲ್ಲ. ಎಸ್​ಟಿ ಮೀಸಲಾತಿ ಪರ ಎಂದು ಸ್ವಾಮೀಜಿ ಹೇಳಿದರು.

ಸರ್ಕಾರ ಕುರುಬರ ಋಣ ತೀರಿಸಲಿ ಎಂದ ಸಿದ್ದರಾಮಾನಂದಪುರಿ ಸ್ವಾಮೀಜಿ; ವೇದಿಕೆ ಮೇಲೆ ಗರಂ ಆದ್ರು ಕೆ.ಎಸ್​.ಈಶ್ವರಪ್ಪ
ಸಮಾವೇಶದಲ್ಲಿ ಕುರುಬ ಸಮುದಾಯದ ಸ್ವಾಮೀಜಿಗಳು, ಕೆ.ಎಸ್.ಈಶ್ವರಪ್ಪ ಇದ್ದರು.
Lakshmi Hegde
|

Updated on:Nov 29, 2020 | 5:24 PM

Share

ಬಾಗಲಕೋಟೆ: ಕುರುಬ ಸಮಾಜವನ್ನು ಎಸ್​ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿನ ಕಾಳಿದಾಸ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಸ್ವಾಮೀಜಿಯೋರ್ವರ ಮಾತಿಗೆ ಈಶ್ವರಪ್ಪ ಅಸಮಾಧಾನಗೊಂಡಿದ್ದಾರೆ.

ಕನಕಗುರುಪೀಠದ ಶಾಖಾಮಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಮಾತನಾಡಿ, ಇವತ್ತಿನ ಬಿಜೆಪಿ ಸರ್ಕಾರ ಕುರುಬರ ಋಣದಲ್ಲಿದೆ. ಆ ಋಣವನ್ನು ತೀರಿಸುವ ಕೆಲಸವನ್ನು ಯಡಿಯೂರಪ್ಪನವರು ಮಾಡಬೇಕು. ಸರ್ಕಾರ ರಚಿಸಲು ಕಾರಣರಾದ ನಮ್ಮ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡುತ್ತಾರೆಂದು ಕಾಯುತ್ತ ಇದ್ದೇವೆ. ಆದರೆ ಸಿಎಂ ಯಾಕೋ ವಿಳಂಬ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಅಷ್ಟಕ್ಕೇ ಸುಮ್ಮನಾಗದೆ, ಮಾತು ತಪ್ಪಿರುವವರು ಅನೇಕ ಕಡೆ ಸರ್ಕಾರ ಕಳೆದುಕೊಂಡಿದ್ದಾರೆ. ಆ ಪರಿಸ್ಥಿತಿ ನಿಮಗೂ ಬರಬಾರದು. ಇಲ್ಲಿ ಈಶ್ವರಪ್ಪ ಇದ್ದಾರೆ ಎಂದ ಮಾತ್ರಕ್ಕೆ ನಾವು ಬಿಜೆಪಿ ಪರ ಅಂತಲ್ಲ. ನಾವು ಯಾರ ಪರವಾಗಿಯೂ ಇಲ್ಲ. ಎಸ್​ಟಿ ಮೀಸಲಾತಿ ಪರ ಎಂದು ಸ್ವಾಮೀಜಿ ಹೇಳಿದ್ದರು. ಆದರೆ ಸ್ವಾಮೀಜಿಯವರ ಈ ಮಾತಿಗೆ ಈಶ್ವರಪ್ಪನವರು ಗರಂ ಆಗಿದ್ದಾರೆ. ನೀವು ಹೀಗೆಲ್ಲ ಮಾತನಾಡೋದು ಸರಿಯಲ್ಲ ಸ್ವಾಮೀಜಿ ಎಂದು ನೇರವಾಗಿಯೇ ಹೇಳಿದ್ದಾರೆ. ಈ ವೇಳೆ ಇವರಿಬ್ಬರ ಮಧ್ಯೆಯೂ ಸ್ವಲ್ಪಮಟ್ಟಿಗೆ ಮಾತಿಗೆ ಮಾತು ಬೆಳೆದಿತ್ತು.

Published On - 5:13 pm, Sun, 29 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!