AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಹಳ್ಳಿ ಚಂದ್ರಶೇಖರ್​ಗೂ, ಸಾರಿಗೆ ಸಿಬ್ಬಂದಿಗೂ ಸಂಬಂಧವಿಲ್ಲ; ನೌಕರರೇ ಚರ್ಚೆಗೆ ಬನ್ನಿ- ಸಚಿವ ಸವದಿ

ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ಸಿಬ್ಬಂದಿಗೆ ಸಂಬಂಧವಿಲ್ಲ. ಕೋಡಿಹಳ್ಳಿ ರೈತ ಮುಖಂಡರು. ಅವರ ಬಗ್ಗೆ ಒಳ್ಳೇ ಅಭಿಪ್ರಾಯವಿದೆ. ಸದ್ಯಕ್ಕೆ, ಸಿಎಂ ಯಡಿಯೂರಪ್ಪನವರು ಕಾದು ನೋಡೋಣ ಅಂದಿದ್ದಾರೆ ಎಂದು ಲಕ್ಷ್ಮಣ ಸವದಿ ಹೇಳಿದರು.

ಕೋಡಿಹಳ್ಳಿ ಚಂದ್ರಶೇಖರ್​ಗೂ, ಸಾರಿಗೆ ಸಿಬ್ಬಂದಿಗೂ ಸಂಬಂಧವಿಲ್ಲ; ನೌಕರರೇ ಚರ್ಚೆಗೆ ಬನ್ನಿ- ಸಚಿವ ಸವದಿ
ಸಾರಿಗೆ ಸಚಿವ ಲಕ್ಷ್ಮಣ ಸವದಿ
KUSHAL V
| Edited By: ಸಾಧು ಶ್ರೀನಾಥ್​|

Updated on: Dec 11, 2020 | 7:04 PM

Share

ಬೆಂಗಳೂರು: ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಪ್ರತಿಭಟನೆಯಲ್ಲಿ ತೊಡಗಿರುವ ನೌಕರರು ಯಾವಾಗ ಬೇಕಾದರೂ ಬಂದು ನನ್ನ ಜೊತೆ ಚರ್ಚಿಸಬಹುದು. ನನ್ನದು ಒಂದೇ ವಿನಂತಿ, ತಕ್ಷಣ ಹೋರಾಟ ಕೈಬಿಡಬೇಕು. ಈಗಾಗಲೇ ಕೊರೊನಾದಿಂದ ರಾಜ್ಯದ ಜನ ನೊಂದಿದ್ದಾರೆ. ನಾವು ಯಾವಾಗ ಬೇಕಾದರೂ ಸಂಧಾನ ಮಾಡಿಕೊಳ್ಳಬಹುದು. ಮುಖಂಡರು ಯಾವಾಗ ಬೇಕಾದ್ರೂ ಬಂದು ಚರ್ಚಿಸಬಹುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸುದ್ದಿಗೋಷ್ಠಿ ಮೂಲಕ ಪ್ರತಿಭಟನಾನಿರತರಿಗೆ ಮಾತುಕತೆಗೆ ಆಹ್ವಾನ ಕೊಟ್ಟಿದ್ದಾರೆ .

ಸಾರಿಗೆ ನಿಗಮದ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸಾರಿಗೆ ಸಚಿವ ಸವದಿ ಸುದ್ದಿಗೋಷ್ಠಿ ನಡೆಸಿದರು. ಅದಕ್ಕೂ ಮುನ್ನ ವಿಧಾನಸೌಧದಲ್ಲಿ ಸಿಎಂ ಭೇಟಿಯಾದ DCM ಲಕ್ಷ್ಮಣ ಸವದಿ ಸಾರಿಗೆ ನೌಕರರ ಪ್ರತಿಭಟನೆ, ಬೇಡಿಕೆ ಬಗ್ಗೆ BSY ಜೊತೆ ಮಾತುಕತೆ ನಡೆಸಿದರು. ಅದಾದ ಬಳಿಕ ವಿಧಾನಸೌಧದ ಕ್ಯಾಬಿನೆಟ್ ಹಾಲ್​ನಲ್ಲಿ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಬಿಎಂಟಿಸಿ ಎಂ.ಡಿ ಶಿಖಾ ಹಾಗೂ ಸಾರಿಗೆ ಇಲಾಖೆ ಆಯುಕ್ತ ಅಂಜುಮ್ ಪರ್ವೇಜ್ ಜೊತೆಯೂ ಸಮಾಲೋಚನೆ ಸಹ ನಡೆಸಿದರು.

ನನಗೆ ನಂಬಿಕೆ ಇದೆ, ನಾಳೆ ಎಲ್ಲರೂ ಕರ್ತವ್ಯಕ್ಕೆ ಹಾಜರಾಗುವ ವಿಶ್ವಾಸವಿದೆ. ಬಳಿಕ ಯಾವಾಗ ಬೇಕಾದ್ರೂ ಬಂದು ನನ್ನ ಜೊತೆ ಚರ್ಚಿಸಬಹುದು. ನಾವು ಲಾಭ, ಹಾನಿ ಬಗ್ಗೆ ಯಾವತ್ತೂ ಯೋಚನೆ ಮಾಡಿಲ್ಲ. ನಮ್ಮ ಗುರಿ ಸಾರ್ವಜನಿಕರಿಗೆ ಸೇವೆ ಒದಗಿಸುವುದೊಂದೇ ಎಂದು ಸಚಿವರು ಹೇಳಿದರು.

ಕಾನೂನು ಇದೆ, ಕಾನೂನು ತನ್ನ ಕೆಲಸ ಮಾಡುತ್ತದೆ ಇದೇ ವೇಳೆ.. ಕೋಡಿಹಳ್ಳಿ ಚಂದ್ರಶೇಖರ್​ಗೂ, ಸಾರಿಗೆ ಸಿಬ್ಬಂದಿಗೂ ಸಂಬಂಧವಿಲ್ಲ. ಕೋಡಿಹಳ್ಳಿ ರೈತ ಮುಖಂಡರು. ಅವರ ಬಗ್ಗೆ ಒಳ್ಳೇ ಅಭಿಪ್ರಾಯವಿದೆ. ಸದ್ಯಕ್ಕೆ, ಸಿಎಂ ಯಡಿಯೂರಪ್ಪನವರು ಕಾದು ನೋಡೋಣ ಅಂದಿದ್ದಾರೆ. ಸಾರಿಗೆ ಸಿಬ್ಬಂದಿ ಪ್ರತಿಭಟನೆ ಮಾಡ್ತಿಲ್ಲ, ಕೆಲಸ ಸ್ಥಗಿತಗೊಳಿಸಿದ್ದಾರೆ. ನಾನು ಕಾಯುತ್ತಾ ಕುಳಿತಿರುತ್ತೇನೆ, ಚರ್ಚೆಗೆ ಬರಲಿ ಎಂದು ಸವದಿ ಹೇಳಿದರು. ಕಾನೂನು ಇದೆ, ಕಾನೂನು ತನ್ನ ಕೆಲಸ ಮಾಡುತ್ತದೆ. ಈಗಲೇ ನಾವು ಕಾನೂನು ಜಾರಿ ಮಾಡಲು ಹೋಗುವುದಿಲ್ಲ ಎಂದು ಲಕ್ಷ್ಮಣ ಸವದಿ ಹೇಳಿದರು.

ರಾತ್ರಿ ಊಟಕ್ಕಾಗಿ ಹಣ ಸಂಗ್ರಹಿಸಲು.. ಜೋಳಿಗೆ ಹಿಡಿದು ಭಿಕ್ಷೆ ಬೇಡಿದ ಸಾರಿಗೆ ಸಿಬ್ಬಂದಿ

Explainer | ಆಂಧ್ರ ಸಾರಿಗೆ ನಿಗಮ ಸಿಬ್ಬಂದಿ ಈಗ ರಾಜ್ಯ ಸರ್ಕಾರಿ ನೌಕರರು: ಏನಿದು ‘ಆಂಧ್ರ ಮಾಡೆಲ್‘?

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ