AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಡಕ್ಕೆ ಮಣಿದ ಸರ್ಕಾರ: ಅಂಗನವಾಡಿ ಕೇಂದ್ರಲ್ಲೇ ಎಲ್​ಕೆಜಿ, ಯುಕೆಜಿ ಆರಂಭ

ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ತರಗತಿ ಆರಂಭಸಿವ ಚಿಂತನೆಯನ್ನು ಕೈಬಿಟ್ಟು ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲಿ ತರಗತಿ ಆರಂಭಿಸಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಸೋಮವಾರ ಬೆಂಗಳೂರಿನ ಪಟ್ಟ ಪಟ್ಟೇಗಾರಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ ಮತ್ತು ಯುಕೆಜಿ ತರಗತಿ ಆರಂಭಕ್ಕೆ ಚಾಲನೆ ನೀಡಿದರು.

ಒತ್ತಡಕ್ಕೆ ಮಣಿದ ಸರ್ಕಾರ: ಅಂಗನವಾಡಿ ಕೇಂದ್ರಲ್ಲೇ ಎಲ್​ಕೆಜಿ, ಯುಕೆಜಿ ಆರಂಭ
ಅಂಗನವಾಡಿ ಕೇಂದ್ರ
Vinay Kashappanavar
| Updated By: ವಿವೇಕ ಬಿರಾದಾರ|

Updated on: Jul 22, 2024 | 1:52 PM

Share

ಬೆಂಗಳೂರು, ಜುಲೈ 22: ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಮಣಿದ ಕರ್ನಾಟಕ ಸರ್ಕಾರ (Karnataka Government) ಅಂಗನವಾಡಿ ಕೇಂದ್ರಗಳಲ್ಲೇ (Anganwadi Centre) ಎಲ್​ಕೆಜಿ ಮತ್ತು ಯುಕೆಜಿ (LKG and UKG) ತರಗತಿ ಪ್ರಾರಂಭಿಸಿದೆ. ಬೆಂಗಳೂರಿನ ಪಟ್ಟೇಗಾರಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಎಲ್​ಕೆಜಿ ಮತ್ತು ಯುಕೆಜಿ ತರಗತಿ ಆರಂಭಕ್ಕೆ ಇಂದು (ಜು.22) ಸಾಂಕೇತಿಕವಾಗಿ ಚಾಲನೆ ನೀಡಿದರು. ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ ಮತ್ತು ಯುಕೆಜಿ ಪರಿಚಯಿಸುತ್ತಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ರಾಜ್ಯದಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ಕೂಡ ಮಾಡಿದ್ದರು.

ಸರ್ಕಾರಕ್ಕೆ ಈ ಹಿಂದೆ ಹಲವು ಬಾರಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್​ಕೆಜಿ-ಯುಕೆಜಿ ತರಗತಿ ಆರಂಭಿಸುವುದಕ್ಕೆ ಮನವಿ ಮಾಡಲಾಗಿತ್ತು. ಆದರೆ ಈ ಮನವಿಗೆ ಸರ್ಕಾರಗಳು ಪುರಸ್ಕರಿಸಿರಲಿಲ್ಲ. ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ-ಯುಕೆಜಿ ತರಗತಿಗೆ ತೆಗೆದರೆ ಅಂಗನವಾಡಿ ಕೇಂದ್ರಗಳು ಖಾಲಿ ಆಗುತ್ತವೆ. ಕಾರ್ಯಕರ್ತೆಯರು, ಸಹಾಯಕರಿಯರು, ಅಡುಗೆ ಸಹಾಯಕಿರು ಕೆಲಸ ಕಳೆದುಕೊಳ್ಳುತ್ತಾರೆ ಎಂದು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲೇ ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ ಮತ್ತು ಯುಕೆಜಿ ಆರಂಭಿಸಬೇಕೆಂದು ಒತ್ತಾಯಿದ್ದರು.ಇದೀಗ, ಸರ್ಕಾರ ಅಂಗನವಾಡಿಯಲ್ಲೇ ಎಲ್​ಕೆಜಿ ಮತ್ತು ಯುಕೆಜಿ ಆರಂಭಿಸಿದೆ.

ಇದನ್ನೂ ಓದಿ: ಟಿವಿ9 ರಿಯಾಲಿಟಿ ಚೆಕ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹುಳುಗಳ ಪಾಲಾದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಗೋಧಿ

ಅಂಗನವಾಡಿ ಶಿಕ್ಷಕಿಯರನ್ನು ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ

ಇಂದಿನಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ಹೇಳಿದ್ದರು.

ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರ ಮತ್ತು ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ. 30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ