AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhu Bangarappa: ಅಧಿಕಾರ ಸ್ವೀಕರಿಸಿದ ಬಳಿಕ ಮೊದಲು ಸಹಿ ಮಾಡಿದ್ದೇ ಪಠ್ಯ ಪರಿಷ್ಕರಣೆಗೆ; ಮಧು ಬಂಗಾರಪ್ಪ

ಮಕ್ಕಳಿಗೆ ಅಗತ್ಯವಿರುವ ಪಠ್ಯ ಬೋಧನೆ ಮಾಡಿದರೆ ಸಾಕು. ನಾವು ಪ್ರಣಾಳಿಕೆಯಲ್ಲಿ ಹೇಳಿದಂತೆ ಪಠ್ಯ ಪರಿಷ್ಕರಣೆ ಮಾಡಿದ್ದೇವೆ. ಆದರೆ ಬಿಜೆಪಿಯವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ಅದನ್ನು ತಿರುಚಿದರು. ಆಪರೇಷನ್ ಕಮಲ ಮೂಲಕ ಬಿಜೆಪಿಯವರು ಅಧಿಕಾರಕ್ಕೆ ಬಂದಿದ್ದು. ಸಂವಿಧಾನ ಬಾಹಿರವಾಗಿ ಅಧಿಕಾರಕ್ಕೆ ಬಂದವರು ಪಠ್ಯ ತಿರುಚಿದ್ದರು ಎಂದು ಮಧು ಬಂಗಾರಪ್ಪ ಹೇಳಿದರು.

Madhu Bangarappa: ಅಧಿಕಾರ ಸ್ವೀಕರಿಸಿದ ಬಳಿಕ ಮೊದಲು ಸಹಿ ಮಾಡಿದ್ದೇ ಪಠ್ಯ ಪರಿಷ್ಕರಣೆಗೆ; ಮಧು ಬಂಗಾರಪ್ಪ
ಮಧು ಬಂಗಾರಪ್ಪ
Ganapathi Sharma
|

Updated on: Sep 15, 2023 | 7:26 PM

Share

ಬೆಂಗಳೂರು, ಸೆಪ್ಟೆಂಬರ್ 15: ನಾವು ಅಧಿಕಾರಕ್ಕೆ ಬಂದರೆ ಪಠ್ಯ ಪರಿಷ್ಕರಣೆ ಮಾಡುವುದಾಗಿ ಹೇಳಿದ್ದೆವು. ಅಧಿಕಾರ ಸ್ವೀಕರಿಸಿದ ಬಳಿಕ ಮೊದಲು ಸಹಿ ಮಾಡಿದ್ದೇ ಪಠ್ಯ ಪರಿಷ್ಕರಣೆಗೆ. ಪಠ್ಯ ಪರಿಷ್ಕರಣೆ ಕಡತಕ್ಕೆ ಮೊದಲು ಸಹಿ ಮಾಡಿದ್ದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದರು. ಕಾಂಗ್ರೆಸ್​ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಟಿವಿ9 ಕನ್ನಡ ಬೆಂಗಳೂರಿನ ಲಲಿತ್​ ಅಶೋಕ್​​​ ಹೋಟೆಲ್​ನಲ್ಲಿ ಆಯೋಜಿಸಿರುವ ಕನಸಿನ ಕರುನಾಡು (TV9 Karnataka Summit 2023) ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಅಗತ್ಯವಿರುವ ಪಠ್ಯ ಬೋಧನೆ ಮಾಡಿದರೆ ಸಾಕು. ನಾವು ಪ್ರಣಾಳಿಕೆಯಲ್ಲಿ ಹೇಳಿದಂತೆ ಪಠ್ಯ ಪರಿಷ್ಕರಣೆ ಮಾಡಿದ್ದೇವೆ. ಆದರೆ ಬಿಜೆಪಿಯವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ಅದನ್ನು ತಿರುಚಿದರು. ಆಪರೇಷನ್ ಕಮಲ ಮೂಲಕ ಬಿಜೆಪಿಯವರು ಅಧಿಕಾರಕ್ಕೆ ಬಂದಿದ್ದು. ಸಂವಿಧಾನ ಬಾಹಿರವಾಗಿ ಅಧಿಕಾರಕ್ಕೆ ಬಂದವರು ಪಠ್ಯ ತಿರುಚಿದ್ದರು. ಸಾಂವಿಧಾನಾತ್ಮಕವಾಗಿ ಜನರಿಂದ ಆಯ್ಕೆಯಾದ ನಾವು ಪರಿಷ್ಕರಿಸಿದ್ದೇವೆ. ಕೆಲವು ವ್ಯಕ್ತಿಗಳು ತಿರುಚಿದ್ದ ಪಠ್ಯವನ್ನು ಪರಿಷ್ಕರಣೆ ಮಾಡಿದ್ದೇವೆ ಎಂದು ಮಧು ಬಂಗಾರಪ್ಪ ಹೇಳಿದರು.

ಮಾಧ್ಯಮಗಳಲ್ಲಿ ಬರುವ ಟೀಕೆ ಟಿಪ್ಪಣಿಗಳು ಏನೇ ಇರಲಿ, ನಾವು ಮಾಡುತ್ತಿರುವ ಕೆಲಸದ ಮೇಲೆ ನಮಗೆ ನಂಬಿಕೆ ಇದೆ. ಜನರ ವಿಶ್ವಾಸದಿಂದ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದೇವೆ. ಜನರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಆಡಳಿತ ನೀಡಲಿದ್ದೇವೆ, ನೀಡುತ್ತಿದ್ದೇವೆ ಎಂದು ಅವರು ಹೇಳಿದರು.

ಶಿಕ್ಷಣ ಇಲಾಖೆಯಲ್ಲಿ ಸಮಸ್ಯೆಗಳು, ಸವಾಲುಗಳು ಇವೆ. ಆದರೆ, ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ ಎಂಬ ವಿಶ್ವಾಸವಿದೆ. ಜನರಿಗೆ ನನ್ನ ಕೆಲಸದ ಬಗ್ಗೆ ಮೆಚ್ಚುಗೆಯಾಗುವಂತೆ ಕಾರ್ಯನಿರ್ವಹಿಸುತ್ತಿದ್ದೇನೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Ramalinga Reddy: ಇನ್ಮುಂದೆ ಸಾರಿಗೆ ಸಿಬ್ಬಂದಿಗೂ ಪಿಂಚಣಿ; ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಘೋಷಣೆ

ಏನೇ ನೀತಿ ರೂಪಿಸಿದ್ದರೂ ಅದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಾಡಬೇಕು. ನಾನು ಅಧಿಕಾರ ಸ್ವೀಕರಿಸಿದ ಮೊದಲೇ ಮಾಡಿದ ಕೆಲಸ ಪಠ್ಯ ಪರಿಷ್ಕರಣೆಗೆ ಸಹಿ ಮಾಡಿದೆ. ನಾನು ಕಾಂಗ್ರೆಸ್​​ ಚುನಾವಣಾ ಪ್ರಣಾಳಿಕೆ ಸಮಿತಿಯಲ್ಲಿದ್ದೆ. ನಾವು ಜನರಿಗೆ ಕೊಟ್ಟ ಭರವಸೆಯೇ ಅದಾಗಿತ್ತು. ನಾವೇನು ಬದಲಾವಣೆ ಮಾಡಿದೆವು? ಅದು ಮಕ್ಕಳ ವಿರುದ್ಧವಾಗಿರಲಿಲ್ಲ. ಮಕ್ಕಳ ಪರವಾದ ನಿರ್ಧಾರ ನಾವು ಕೈಗೊಂಡೆವು. ಹಿಂದಿನ ಸರ್ಕಾರ ಮಾಡಿರುವ ತಪ್ಪನ್ನು ಸರಿ ಮಾಡುವ ಕೆಲಸ ನಾವು ಮಾಡಿದೆವು ಎಂದು ಅವರು ಹೇಳಿದರು.

ಮೂರು ಪರೀಕ್ಷಾ ವಿಧಾನಗಳನ್ನು ನಾವು ಘೋಷಣೆ ಮಾಡಿದೆವು. ಅದರ ವಿರುದ್ಧ ಬಂದ ಅಭಿಪ್ರಾಯಗಳು ಕೆಲವೇ ಕೆಲವು ಇದ್ದವು. ಅದು ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಅಷ್ಟೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ