ಸಿಎಂ ಕುರ್ಚಿ ಗುದ್ದಾಟದ ಮಧ್ಯ ದಿಲ್ಲಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂಬಿ ಪಾಟೀಲ್

|

Updated on: Sep 10, 2024 | 8:39 PM

ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.

ನವದೆಹಲಿ, (ಸೆಪ್ಟೆಂಬರ್ 10): ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಗುದ್ದಾಟ ಜೋರಾಗಿದೆ. ನಾನು ಹಿರಿಯ ನಾಯಕನೆಂದೇನೆ, ನಾನು ಸಿಎಂ ಹುದ್ದೆ ಆಕಾಂಕ್ಷಿ ಎಂದು ಕುರ್ಚಿಗೆ ಟವೆಲ್​ ಹಾಕಿದ್ದ ಹಿರಿಯ ಸಚಿವ ಪಾಟೀಲ್​ ದೆಹಲಿಗೆ ಹಾರಿದ್ದು, ಇಂದು ದಿಲ್ಲಿಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.

Follow us on