AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟಿರೋ ಮಾತಿನಿಂದ ಹಿಂದೆ ಸರಿಯುವುದಿಲ್ಲ, ಯಾವುದೇ ಆತುರದ ನಿರ್ಣಯ ತೆಗೆದುಕೊಂಡು ಮುಷ್ಕರ ಮಾಡಬೇಡಿ: ಸಚಿವ ಲಕ್ಷ್ಮಣ ಸವದಿ

ಕೊಟ್ಟಿರೋ ಮಾತಿನಿಂದ ಹಿಂದೆ ಸರಿಯುವುದಿಲ್ಲ. ಯಾವುದೇ ಆತುರದ ನಿರ್ಣಯ ತೆಗೆದುಕೊಂಡು ಮುಷ್ಕರ ಮಾಡಬೇಡಿ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಕೊಟ್ಟಿರೋ ಮಾತಿನಿಂದ ಹಿಂದೆ ಸರಿಯುವುದಿಲ್ಲ, ಯಾವುದೇ ಆತುರದ ನಿರ್ಣಯ ತೆಗೆದುಕೊಂಡು ಮುಷ್ಕರ ಮಾಡಬೇಡಿ: ಸಚಿವ ಲಕ್ಷ್ಮಣ ಸವದಿ
ಆರ್ಥಿಕ ಇಲಾಖೆ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ
sandhya thejappa
| Edited By: |

Updated on: Mar 29, 2021 | 5:30 PM

Share

ಬೆಂಗಳೂರು: ಮೂರು ತಿಂಗಳ ಹಿಂದೆ ಸಾರಿಗೆ ನೌಕರರು ಪ್ರತಿಭಟನೆ ಮಾಡಿ 10 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದರು. ಅದರಲ್ಲಿ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಆಗುವುದಿಲ್ಲ, ಉಳಿದ 9 ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದೆವು. ಅದೇ ರೀತಿ ಈಗಾಗಲೇ 9 ಬೇಡಿಕೆಗಳ ಈಡೇರಿಕೆ ಆಗಿವೆ. 9ನೇ ಬೇಡಿಕೆಯಲ್ಲಿ 6 ನೇ ವೇತನ ಆಯೋಗದಂತೆ, ಸಮಾನಾಂತರವಾಗಿ ವೇತನ ನೀಡಬೇಕು ಅಂತ ಹೇಳಿದ್ದಾರೆ. ಈ ಬಗ್ಗೆ ಇವತ್ತು ಆರ್ಥಿಕ ಇಲಾಖೆ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಇದರ ಸಾಧಕ ಬಾಧಕಗಳ ಕುರಿತು ಅಧಿಕಾರಿಗಳಿಗೆ ಸೂಚಿಸಿದ್ದೇವೆ  ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಸಾರಿಗೆ ಇಲಾಖೆಗೆ ಸಾಕಷ್ಟು ನಷ್ಟ ಆಗಿದೆ. ಮತ್ತೆ ಮುಷ್ಕರ ಮಾಡಿದ್ರೆ ಸಮಸ್ಯೆ ಆಗಲಿದೆ. ನಾವು ನೀಡಿರುವ ಭರವಸೆಯನ್ನು ನಿರಾಸೆಯಾಗದಂತೆ ಈಡೇರಿಸ್ತೇವೆ. ಈಗ ಬರುತ್ತಿರುವ ಆದಾಯ, ಇಂಧನ ಮತ್ತು ವೇತನಕ್ಕೆ ಸಾಕಾಗುತ್ತಿಲ್ಲ. ಆದರೂ ಕೊಟ್ಟಿರುವ ಮಾತಿನಿಂದ ಹಿಂದೆ ಸರಿಯೋದಿಲ್ಲ ಎಂದು ಮಾತನಾಡಿದ್ದಾರೆ.

ಮುಷ್ಕರ ಮಾಡಿದ್ರೆ ಜನ ಸಾಮಾನ್ಯರು, ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಲಿದೆ. ಯಾವುದೇ ಆತುರದ ನಿರ್ಣಯ ತೆಗೆದುಕೊಂಡು, ಮುಷ್ಕರ ಮಾಡಬೇಡಿ. ಒಂದು ವೇಳೆ ಪ್ರತಿಭಟನೆ ಮಾಡುವುದಾದರೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದಕ್ಕೆ ಸಿದ್ದರಿದ್ದೇವೆ. ಸಾರಿಗೆ ನೌಕರರು ಮುಷ್ಕರ ಮಾಡಿದ್ರೆ ಖಾಸಗಿ ವಾಹನಗಳನ್ನ ಸಂಚಾರಕ್ಕೆ ಬಳಸಿಕೊಳ್ಳುತ್ತೇವೆ. ಖಾಸಗಿ ಬಸ್​ಗಳಿಗೆ ಪರ್ಮಿಟ್ ಕೊಟ್ಟು, ಜನರಿಗೆ ತೊಂದರೆಯಾಗದಂತೆ ಎಚ್ಚರಿಕೆ ತೆಗೆದುಕೊಳ್ಳುತ್ತೇವೆ ಎಂದು ಮಾತನಾಡಿದ್ದಾರೆ.

ಕೊಟ್ಟಿರೋ ಮಾತಿನಿಂದ ಹಿಂದೆ ಸರಿಯುವುದಿಲ್ಲ. ಬೇಡಿಕೆ ಈಡೇರಿಸಿದಾಗ ನಾವು ಹಿಂಬಾಕಿ ನೀಡುತ್ತೇವೆ. ನೌಕರರಿಗೆ 2020ರಿಂದಲೇ ಹಿಂಬಾಕಿಯನ್ನು ನೀಡುತ್ತೇವೆ. ಯಾವುದೇ ಆತುರದ ನಿರ್ಣಯ ಬೇಡ, ಮುಷ್ಕರ ಬೇಡ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಗಡುವು ನೀಡಿದ ಕೋಡಿಹಳ್ಳಿ ಚಂದ್ರಶೇಖರ್

ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಕೆಗಾಗಿ ಸಮಿತಿ ರಚಿಸಿದ ಸರ್ಕಾರ

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?