Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟಿರೋ ಮಾತಿನಿಂದ ಹಿಂದೆ ಸರಿಯುವುದಿಲ್ಲ, ಯಾವುದೇ ಆತುರದ ನಿರ್ಣಯ ತೆಗೆದುಕೊಂಡು ಮುಷ್ಕರ ಮಾಡಬೇಡಿ: ಸಚಿವ ಲಕ್ಷ್ಮಣ ಸವದಿ

ಕೊಟ್ಟಿರೋ ಮಾತಿನಿಂದ ಹಿಂದೆ ಸರಿಯುವುದಿಲ್ಲ. ಯಾವುದೇ ಆತುರದ ನಿರ್ಣಯ ತೆಗೆದುಕೊಂಡು ಮುಷ್ಕರ ಮಾಡಬೇಡಿ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಕೊಟ್ಟಿರೋ ಮಾತಿನಿಂದ ಹಿಂದೆ ಸರಿಯುವುದಿಲ್ಲ, ಯಾವುದೇ ಆತುರದ ನಿರ್ಣಯ ತೆಗೆದುಕೊಂಡು ಮುಷ್ಕರ ಮಾಡಬೇಡಿ: ಸಚಿವ ಲಕ್ಷ್ಮಣ ಸವದಿ
ಆರ್ಥಿಕ ಇಲಾಖೆ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ
Follow us
sandhya thejappa
| Updated By: ganapathi bhat

Updated on: Mar 29, 2021 | 5:30 PM

ಬೆಂಗಳೂರು: ಮೂರು ತಿಂಗಳ ಹಿಂದೆ ಸಾರಿಗೆ ನೌಕರರು ಪ್ರತಿಭಟನೆ ಮಾಡಿ 10 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದರು. ಅದರಲ್ಲಿ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಆಗುವುದಿಲ್ಲ, ಉಳಿದ 9 ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದೆವು. ಅದೇ ರೀತಿ ಈಗಾಗಲೇ 9 ಬೇಡಿಕೆಗಳ ಈಡೇರಿಕೆ ಆಗಿವೆ. 9ನೇ ಬೇಡಿಕೆಯಲ್ಲಿ 6 ನೇ ವೇತನ ಆಯೋಗದಂತೆ, ಸಮಾನಾಂತರವಾಗಿ ವೇತನ ನೀಡಬೇಕು ಅಂತ ಹೇಳಿದ್ದಾರೆ. ಈ ಬಗ್ಗೆ ಇವತ್ತು ಆರ್ಥಿಕ ಇಲಾಖೆ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಇದರ ಸಾಧಕ ಬಾಧಕಗಳ ಕುರಿತು ಅಧಿಕಾರಿಗಳಿಗೆ ಸೂಚಿಸಿದ್ದೇವೆ  ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಸಾರಿಗೆ ಇಲಾಖೆಗೆ ಸಾಕಷ್ಟು ನಷ್ಟ ಆಗಿದೆ. ಮತ್ತೆ ಮುಷ್ಕರ ಮಾಡಿದ್ರೆ ಸಮಸ್ಯೆ ಆಗಲಿದೆ. ನಾವು ನೀಡಿರುವ ಭರವಸೆಯನ್ನು ನಿರಾಸೆಯಾಗದಂತೆ ಈಡೇರಿಸ್ತೇವೆ. ಈಗ ಬರುತ್ತಿರುವ ಆದಾಯ, ಇಂಧನ ಮತ್ತು ವೇತನಕ್ಕೆ ಸಾಕಾಗುತ್ತಿಲ್ಲ. ಆದರೂ ಕೊಟ್ಟಿರುವ ಮಾತಿನಿಂದ ಹಿಂದೆ ಸರಿಯೋದಿಲ್ಲ ಎಂದು ಮಾತನಾಡಿದ್ದಾರೆ.

ಮುಷ್ಕರ ಮಾಡಿದ್ರೆ ಜನ ಸಾಮಾನ್ಯರು, ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಲಿದೆ. ಯಾವುದೇ ಆತುರದ ನಿರ್ಣಯ ತೆಗೆದುಕೊಂಡು, ಮುಷ್ಕರ ಮಾಡಬೇಡಿ. ಒಂದು ವೇಳೆ ಪ್ರತಿಭಟನೆ ಮಾಡುವುದಾದರೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದಕ್ಕೆ ಸಿದ್ದರಿದ್ದೇವೆ. ಸಾರಿಗೆ ನೌಕರರು ಮುಷ್ಕರ ಮಾಡಿದ್ರೆ ಖಾಸಗಿ ವಾಹನಗಳನ್ನ ಸಂಚಾರಕ್ಕೆ ಬಳಸಿಕೊಳ್ಳುತ್ತೇವೆ. ಖಾಸಗಿ ಬಸ್​ಗಳಿಗೆ ಪರ್ಮಿಟ್ ಕೊಟ್ಟು, ಜನರಿಗೆ ತೊಂದರೆಯಾಗದಂತೆ ಎಚ್ಚರಿಕೆ ತೆಗೆದುಕೊಳ್ಳುತ್ತೇವೆ ಎಂದು ಮಾತನಾಡಿದ್ದಾರೆ.

ಕೊಟ್ಟಿರೋ ಮಾತಿನಿಂದ ಹಿಂದೆ ಸರಿಯುವುದಿಲ್ಲ. ಬೇಡಿಕೆ ಈಡೇರಿಸಿದಾಗ ನಾವು ಹಿಂಬಾಕಿ ನೀಡುತ್ತೇವೆ. ನೌಕರರಿಗೆ 2020ರಿಂದಲೇ ಹಿಂಬಾಕಿಯನ್ನು ನೀಡುತ್ತೇವೆ. ಯಾವುದೇ ಆತುರದ ನಿರ್ಣಯ ಬೇಡ, ಮುಷ್ಕರ ಬೇಡ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಗಡುವು ನೀಡಿದ ಕೋಡಿಹಳ್ಳಿ ಚಂದ್ರಶೇಖರ್

ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಕೆಗಾಗಿ ಸಮಿತಿ ರಚಿಸಿದ ಸರ್ಕಾರ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು