AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟಿರೋ ಮಾತಿನಿಂದ ಹಿಂದೆ ಸರಿಯುವುದಿಲ್ಲ, ಯಾವುದೇ ಆತುರದ ನಿರ್ಣಯ ತೆಗೆದುಕೊಂಡು ಮುಷ್ಕರ ಮಾಡಬೇಡಿ: ಸಚಿವ ಲಕ್ಷ್ಮಣ ಸವದಿ

ಕೊಟ್ಟಿರೋ ಮಾತಿನಿಂದ ಹಿಂದೆ ಸರಿಯುವುದಿಲ್ಲ. ಯಾವುದೇ ಆತುರದ ನಿರ್ಣಯ ತೆಗೆದುಕೊಂಡು ಮುಷ್ಕರ ಮಾಡಬೇಡಿ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಕೊಟ್ಟಿರೋ ಮಾತಿನಿಂದ ಹಿಂದೆ ಸರಿಯುವುದಿಲ್ಲ, ಯಾವುದೇ ಆತುರದ ನಿರ್ಣಯ ತೆಗೆದುಕೊಂಡು ಮುಷ್ಕರ ಮಾಡಬೇಡಿ: ಸಚಿವ ಲಕ್ಷ್ಮಣ ಸವದಿ
ಆರ್ಥಿಕ ಇಲಾಖೆ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ
sandhya thejappa
| Updated By: ganapathi bhat|

Updated on: Mar 29, 2021 | 5:30 PM

Share

ಬೆಂಗಳೂರು: ಮೂರು ತಿಂಗಳ ಹಿಂದೆ ಸಾರಿಗೆ ನೌಕರರು ಪ್ರತಿಭಟನೆ ಮಾಡಿ 10 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದರು. ಅದರಲ್ಲಿ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಆಗುವುದಿಲ್ಲ, ಉಳಿದ 9 ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದೆವು. ಅದೇ ರೀತಿ ಈಗಾಗಲೇ 9 ಬೇಡಿಕೆಗಳ ಈಡೇರಿಕೆ ಆಗಿವೆ. 9ನೇ ಬೇಡಿಕೆಯಲ್ಲಿ 6 ನೇ ವೇತನ ಆಯೋಗದಂತೆ, ಸಮಾನಾಂತರವಾಗಿ ವೇತನ ನೀಡಬೇಕು ಅಂತ ಹೇಳಿದ್ದಾರೆ. ಈ ಬಗ್ಗೆ ಇವತ್ತು ಆರ್ಥಿಕ ಇಲಾಖೆ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಇದರ ಸಾಧಕ ಬಾಧಕಗಳ ಕುರಿತು ಅಧಿಕಾರಿಗಳಿಗೆ ಸೂಚಿಸಿದ್ದೇವೆ  ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಸಾರಿಗೆ ಇಲಾಖೆಗೆ ಸಾಕಷ್ಟು ನಷ್ಟ ಆಗಿದೆ. ಮತ್ತೆ ಮುಷ್ಕರ ಮಾಡಿದ್ರೆ ಸಮಸ್ಯೆ ಆಗಲಿದೆ. ನಾವು ನೀಡಿರುವ ಭರವಸೆಯನ್ನು ನಿರಾಸೆಯಾಗದಂತೆ ಈಡೇರಿಸ್ತೇವೆ. ಈಗ ಬರುತ್ತಿರುವ ಆದಾಯ, ಇಂಧನ ಮತ್ತು ವೇತನಕ್ಕೆ ಸಾಕಾಗುತ್ತಿಲ್ಲ. ಆದರೂ ಕೊಟ್ಟಿರುವ ಮಾತಿನಿಂದ ಹಿಂದೆ ಸರಿಯೋದಿಲ್ಲ ಎಂದು ಮಾತನಾಡಿದ್ದಾರೆ.

ಮುಷ್ಕರ ಮಾಡಿದ್ರೆ ಜನ ಸಾಮಾನ್ಯರು, ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಲಿದೆ. ಯಾವುದೇ ಆತುರದ ನಿರ್ಣಯ ತೆಗೆದುಕೊಂಡು, ಮುಷ್ಕರ ಮಾಡಬೇಡಿ. ಒಂದು ವೇಳೆ ಪ್ರತಿಭಟನೆ ಮಾಡುವುದಾದರೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದಕ್ಕೆ ಸಿದ್ದರಿದ್ದೇವೆ. ಸಾರಿಗೆ ನೌಕರರು ಮುಷ್ಕರ ಮಾಡಿದ್ರೆ ಖಾಸಗಿ ವಾಹನಗಳನ್ನ ಸಂಚಾರಕ್ಕೆ ಬಳಸಿಕೊಳ್ಳುತ್ತೇವೆ. ಖಾಸಗಿ ಬಸ್​ಗಳಿಗೆ ಪರ್ಮಿಟ್ ಕೊಟ್ಟು, ಜನರಿಗೆ ತೊಂದರೆಯಾಗದಂತೆ ಎಚ್ಚರಿಕೆ ತೆಗೆದುಕೊಳ್ಳುತ್ತೇವೆ ಎಂದು ಮಾತನಾಡಿದ್ದಾರೆ.

ಕೊಟ್ಟಿರೋ ಮಾತಿನಿಂದ ಹಿಂದೆ ಸರಿಯುವುದಿಲ್ಲ. ಬೇಡಿಕೆ ಈಡೇರಿಸಿದಾಗ ನಾವು ಹಿಂಬಾಕಿ ನೀಡುತ್ತೇವೆ. ನೌಕರರಿಗೆ 2020ರಿಂದಲೇ ಹಿಂಬಾಕಿಯನ್ನು ನೀಡುತ್ತೇವೆ. ಯಾವುದೇ ಆತುರದ ನಿರ್ಣಯ ಬೇಡ, ಮುಷ್ಕರ ಬೇಡ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಗಡುವು ನೀಡಿದ ಕೋಡಿಹಳ್ಳಿ ಚಂದ್ರಶೇಖರ್

ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಕೆಗಾಗಿ ಸಮಿತಿ ರಚಿಸಿದ ಸರ್ಕಾರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ