AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ದೇಣಿಗೆ ಕುರಿತಾದ ಭಾಗವತ್ ಮಾತಿಗೆ ಪ್ರಿಯಾಂಕ್ ಖರ್ಗೆ ಟ್ವೀಟ್: 11 ಪ್ರಶ್ನೆ ಮುಂದಿಟ್ಟ ಸಚಿವ

ಆರ್​ಎಸ್​​ಎಸ್​​ ನೋಂದಣಿ, ಹಣಕಾಸಿನ ಮೂಲಗಳ ಬಗ್ಗೆ ಸಚಿವ ಪ್ರಿಯಾಂಕ್​​ ಖರ್ಗೆ ಇತ್ತೀಚೆಗೆ ಆಕ್ಷೇಪಣೆ ಎತ್ತಿದ್ದರು. ಇದೀಗ ಮತ್ತೊಮ್ಮೆ ಧ್ವನಿ ಎತ್ತಿರುವ ಅವರು, ಆರ್​ಎಸ್​​ಎಸ್​​ಗೆ ದೇಣಿಗೆ ಕೊಡುವ ಸ್ವಯಂಸೇವಕರು ಯಾರು, ಪ್ರಚಾರಕರಿಗೆ ಯಾರು ವೇತನ ನೀಡುತ್ತಾರೆ? ಎಂದು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ.

RSS ದೇಣಿಗೆ ಕುರಿತಾದ ಭಾಗವತ್ ಮಾತಿಗೆ ಪ್ರಿಯಾಂಕ್ ಖರ್ಗೆ ಟ್ವೀಟ್: 11 ಪ್ರಶ್ನೆ ಮುಂದಿಟ್ಟ ಸಚಿವ
ಮೋಹನ್​ ಭಾಗವತ್​, ಪ್ರಿಯಾಂಕ್​ ಖರ್ಗೆ
ಪ್ರಸನ್ನ ಗಾಂವ್ಕರ್​
| Edited By: |

Updated on:Nov 09, 2025 | 7:28 PM

Share

ಬೆಂಗಳೂರು, ನವೆಂಬರ್​ 09: ನಗದರಲ್ಲಿ ನಿನ್ನೆ ಮತ್ತು ಇಂದು ಆರ್​​ಎಸ್​​ಎಸ್​ (RSS) ಶತಮಾನೋತ್ಸವದ ಅಂಗವಾಗಿ ನಡೆದ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಗಿಯಾಗಿ ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಇಷ್ಟೇ ಅಲ್ಲ RSSನ ಹಣಕಾಸಿನ ಮೂಲ ಕೇಳಿದವರಿಗೆ, ಗುರುದಕ್ಷಿಣೆಯ ಕುರಿತು ಸ್ಪಷ್ಟನೆ ನೀಡಿದ್ದಾರೆ. ಈ ಮಧ್ಯೆ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) 11 ಪ್ರಶ್ನೆಗಳನ್ನು ಮೋಹನ್​ ಭಾಗವತ್​​ ಮುಂದಿಟ್ಟಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಸಚಿವ ಪ್ರಿಯಾಂಕ್‌ ಖರ್ಗೆ, ಆರ್‌ಎಸ್‌ಎಸ್ ತನ್ನ ಸ್ವಯಂಸೇವಕರು ನೀಡುವ ದೇಣಿಗೆ ಮೂಲಕ ಕಾರ್ಯನಿರ್ವಹಿಸುತ್ತದೆ ಎಂದು ಮೋಹನ್​ ಭಾಗವತ್ ಹೇಳಿದ್ದಾರೆ. ಆದಾಗ್ಯೂ, ಈ ಬಗ್ಗೆ ಹಲವಾರು ಕಾನೂನುಬದ್ಧ ಪ್ರಶ್ನೆಗಳು ಉದ್ಭವಿಸುತ್ತವೆ ಎಂದಿದ್ದಾರೆ.

ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್​​

ಸಚಿವ ಪ್ರಿಯಾಂಕ್‌ ಖರ್ಗೆ ಕೇಳಿದ 11 ಪ್ರಶ್ನೆಗಳು

  • ಈ ಸ್ವಯಂಸೇವಕರು ಯಾರು, ಹೇಗೆ ಗುರುತಿಸಲಾಗುತ್ತದೆ?
  • ನೀಡಲಾದ ದೇಣಿಗೆಗಳ ಪ್ರಮಾಣ ಮತ್ತು ಸ್ವರೂಪ ಏನು?
  • ಈ ಕೊಡುಗೆಗಳನ್ನು ಯಾವ ಕಾರ್ಯವಿಧಾನಗಳು ಅಥವಾ ಯಾವ ಮಾರ್ಗಗಳ ಮೂಲಕ ಕೊಡುಗೆ ಸ್ವೀಕರಿಸಲಾಗುತ್ತೆ?
  • ಆರ್‌ಎಸ್‌ಎಸ್ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದರೆ ತನ್ನದೇ ಆದ ನೋಂದಾಯಿತ ಗುರುತಿನಡಿಯಲ್ಲಿ ಸಂಸ್ಥೆಗೆ ನೇರವಾಗಿ ದೇಣಿಗೆಗಳನ್ನು ಯಾಕೆ ನೀಡಲಾಗುವುದಿಲ್ಲ?
  • ನೋಂದಾಯಿತ ಘಟಕವಾಗದೆ ಆರ್‌ಎಸ್‌ಎಸ್ ಸಂಘಟನೆ ತನ್ನ ಹಣಕಾಸು, ಸಾಂಸ್ಥಿಕ ರಚನೆ ಹೇಗೆ ಉಳಿಸಿಕೊಳ್ಳುತ್ತೆ?
  • ಪೂರ್ಣ ಸಮಯದ ಪ್ರಚಾರಕರಿಗೆ ಯಾರು ವೇತನ ನೀಡ್ತಾರೆ ಸಂಸ್ಥೆಯ ದಿನನಿತ್ಯದ ಕಾರ್ಯಾಚರಣೆಯ ವೆಚ್ಚ ಪೂರೈಸುತ್ತಾರೆ?

ಇದನ್ನೂ ಓದಿ: ಬಲಿಷ್ಠ ಭಾರತ ಕಟ್ಟುವುದೇ ಗುರಿ: 142 ಕೋಟಿ ಜನ ಮನಸ್ಸು ಮಾಡಿದ್ರೆ ನಾಳೆಯೇ ಹಿಂದೂ ರಾಷ್ಟ್ರವಾಗಬಹುದು; ಭಾಗವತ್

  • ದೊಡ್ಡ ಪ್ರಮಾಣದ ಕಾರ್ಯಕ್ರಮಗಳು, ಅಭಿಯಾನಗಳು, ಪ್ರಚಾರ ಚಟುವಟಿಕೆಗಳಿಗೆ ಹೇಗೆ ಹಣಕಾಸು ಒದಗಿಸಲಾಗುತ್ತೆ?
  • ಸ್ವಯಂಸೇವಕರು ‘ಸ್ಥಳೀಯ ಕಚೇರಿಗಳಿಂದ’ ಸಮವಸ್ತ್ರ ಅಥವಾ ವಸ್ತುಗಳನ್ನ ಖರೀದಿಸಿದಾಗ, ಈ ಹಣ ಎಲ್ಲಿ ಲೆಕ್ಕಹಾಕಲಾಗುತ್ತೆ?
  • ಸ್ಥಳೀಯ ಕಚೇರಿಗಳು ಮತ್ತು ಇತರ ಮೂಲಸೌಕರ್ಯಗಳನ್ನು ನಿರ್ವಹಿಸುವ ವೆಚ್ಚವನ್ನು ಯಾರು ಭರಿಸುತ್ತಾರೆ?
  • ರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾದ ಪ್ರಭಾವ ಮತ್ತು ಉಪಸ್ಥಿತಿಯ ಹೊರತಾಗಿಯೂ ನೋಂದಣಿಯಾಗಿಲ್ಲ ಯಾಕೆ?
  • ಭಾರತದಲ್ಲಿರುವ ಪ್ರತಿಯೊಂದು ಧಾರ್ಮಿಕ ಅಥವಾ ದತ್ತಿ ಸಂಸ್ಥೆಯು ಆರ್ಥಿಕ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕಾದಾಗ ಆರ್‌ಎಸ್‌ಎಸ್‌ಗೆ ಇದೇ ರೀತಿಯ ಹೊಣೆಗಾರಿಕೆ ಕಾರ್ಯವಿಧಾನಗಳ ಅನುಪಸ್ಥಿತಿ ಸಮರ್ಥಿಸುವುದು ಏನು?

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:17 pm, Sun, 9 November 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್