AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಒಂದು ತೀರ, ಡಿಕೆಶಿ ಮತ್ತೊಂದು ತೀರ ಎಂದು ಕಿಚಾಯಿಸಿದ ಕಂದಾಯ ಸಚಿವ!

ಬೆಂಗಳೂರು: ಭೂ ಸುಧಾರಣಾ ಕಾಯ್ದೆ ಬಗ್ಗೆ ವಿರೋಧ ಪಕ್ಷಗಳು ಆಡಳಿತ ಪಕ್ಷದ ಮೇಲೆ ಟೀಕಾ ಪ್ರಹಾರ ಮಾಡುತ್ತಿದ್ದು, ಇಂದು ಆಡಳಿತ ಪಕ್ಷದ ಕಂದಾಯ ಸಚಿವ ಆರ್ ಅಶೋಕ್ ಪ್ರತಿಪಕ್ಷಗಳಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ಗೆ ಸಾಲುಸಾಲು ಪ್ರಶ್ನೆಗಳನ್ನು ಮುಂದಿಟ್ಟಿರುವ ಸಚಿವ ಆರ್ ಅಶೋಕ್ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯ ಬಗ್ಗೆ ನಿಮ್ಮ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏಕೆ ಮಾತನಾಡುತ್ತಿಲ್ಲ. ಮೊದಲು ನಿಮ್ಮ ಪಕ್ಷದವರನ್ನು ಸರಿ ದಾರಿಗೆ ತನ್ನಿ ನಂತರ ಆಡಳಿತ ಪಕ್ಷದ ಬಗ್ಗೆ ಮಾತನಾಡಿ […]

ಸಿದ್ದರಾಮಯ್ಯ ಒಂದು ತೀರ, ಡಿಕೆಶಿ ಮತ್ತೊಂದು ತೀರ ಎಂದು ಕಿಚಾಯಿಸಿದ  ಕಂದಾಯ ಸಚಿವ!
ಸಾಧು ಶ್ರೀನಾಥ್​
| Updated By: |

Updated on:Jul 26, 2020 | 2:06 AM

Share

ಬೆಂಗಳೂರು: ಭೂ ಸುಧಾರಣಾ ಕಾಯ್ದೆ ಬಗ್ಗೆ ವಿರೋಧ ಪಕ್ಷಗಳು ಆಡಳಿತ ಪಕ್ಷದ ಮೇಲೆ ಟೀಕಾ ಪ್ರಹಾರ ಮಾಡುತ್ತಿದ್ದು, ಇಂದು ಆಡಳಿತ ಪಕ್ಷದ ಕಂದಾಯ ಸಚಿವ ಆರ್ ಅಶೋಕ್ ಪ್ರತಿಪಕ್ಷಗಳಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಪ್ರತಿಪಕ್ಷ ಕಾಂಗ್ರೆಸ್ ಗೆ ಸಾಲುಸಾಲು ಪ್ರಶ್ನೆಗಳನ್ನು ಮುಂದಿಟ್ಟಿರುವ ಸಚಿವ ಆರ್ ಅಶೋಕ್ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯ ಬಗ್ಗೆ ನಿಮ್ಮ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏಕೆ ಮಾತನಾಡುತ್ತಿಲ್ಲ. ಮೊದಲು ನಿಮ್ಮ ಪಕ್ಷದವರನ್ನು ಸರಿ ದಾರಿಗೆ ತನ್ನಿ ನಂತರ ಆಡಳಿತ ಪಕ್ಷದ ಬಗ್ಗೆ ಮಾತನಾಡಿ ಎಂದು ಗದರಿದ್ದಾರೆ.

ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿ ನಾನು ಮಂಚೂಣಿ, ನೀನು ಮುಂಚೂಣಿ ಎನ್ನುವ ವಾರ್ ನಡೆಯುತ್ತಿದೆ. ಒಂದೊಮ್ಮೆ ವಿರೋಧ ಪಕ್ಷದ ನಾಯಕರು ಮುಂಚೂಣಿಯಲ್ಲಿದ್ದಾರೆ. ಇನ್ನೊಮ್ಮೆ ಕೆಪಿಸಿಸಿ ಅಧ್ಯಕ್ಷ ಮುಂಚೂಣಿಗೆ ಬರುತ್ತಾರೆ. ಹೀಗಾಗಿ ನಿಮ್ಮಲ್ಲಿ ನಾಯಕರು ಯಾರೆಂಬುದೇ ಜನರಿಗೆ ಅರ್ಥವಾಗುತ್ತಿಲ್ಲ ಎಂದು ಅಶೋಕ್ ಕಿಚಾಯಿಸಿದರು.

ಬಿಜೆಪಿ ಪಕ್ಷದಲ್ಲಿ ಯಡಿಯೂರಪ್ಪನವರೇ ನಮ್ಮ ಪ್ರಶ್ನಾತೀತ ನಾಯಕರು. ಹೀಗಾಗಿ ಕಾಂಗ್ರೆಸ್ನವರು ಸಿದ್ದರಾಮಯ್ಯನವರೇ ನಮ್ಮ ನಾಯಕರೆಂದು ಹೇಳಲಿ ನೋಡೋಣವೆಂದು ಪ್ರಶ್ನಿಸಿದ್ದಾರೆ. ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯನವರೇ ಒಂದು ತೀರವಾದರೆ, ಡಿಕೆ ಶಿವಕುಮಾರ್ ಅವರೇ ಮತ್ತೊಂದು ತೀರವಾಗಿದ್ದಾರೆ. ಹೀಗಾಗಿ ಮೊದಲು ಅವರಿಬ್ಬರು ಒಂದು ತೀರ ವಾಗಲಿ. ಅನಂತರ, ಇದರ ಬಗ್ಗೆ ಮಾತನಾಡುವ ಎಂದು ಆರ್ ಅಶೋಕ್ ಸ್ವಲ್ಪ ಖಾರವಾಗಿಯೇ ಪ್ರತಿಪಕ್ಷಗಳಿಗೆ ಉತ್ತರಿಸಿದ್ದಾರೆ.

Published On - 5:07 pm, Sat, 25 July 20

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ