AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಾಂತರ ಮಾಡುವವರು ದೇಶದ್ರೋಹಿಗಳು; ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು: ಆರ್ ಅಶೋಕ್

R Ashok: ಯಾವುದೋ ದೇಶದ ದುಡ್ಡನ್ನು ತಂದು ಹೀಗೆ ಮಾಡ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ ಒಂದು ಸೂಕ್ತ ಕಾನೂನು ತರಬೇಕು. ನಮ್ಮ ಸರ್ಕಾರ ಇರುವುದಕ್ಕೆ ಇದೆಲ್ಲವೂ ಹೊರಗೆ ಬರುತ್ತಿದೆ ಎಂದು ಅಶೋಕ್ ತಿಳಿಸಿದ್ದಾರೆ.

ಮತಾಂತರ ಮಾಡುವವರು ದೇಶದ್ರೋಹಿಗಳು; ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು: ಆರ್ ಅಶೋಕ್
ಆರ್ ಅಶೋಕ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 29, 2021 | 5:21 PM

Share

ಬೆಂಗಳೂರು: ಮತಾಂತರದ ಬಗ್ಗೆ ಈಗಾಗಲೇ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಮತಾಂತರ ಮಾಡುವವರು ದೇಶದ್ರೋಹಿಗಳು. ಅವರು ನೆಲ ಸಂಸ್ಕೃತಿ ಹಾಳುಮಾಡಲು ಮತಾಂತರ ಮಾಡುತ್ತಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್​ ಹೇಳಿದ್ದಾರೆ. ಯಾವುದೋ ದೇಶದ ದುಡ್ಡನ್ನು ತಂದು ಹೀಗೆ ಮಾಡ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ ಒಂದು ಸೂಕ್ತ ಕಾನೂನು ತರಬೇಕು. ನಮ್ಮ ಸರ್ಕಾರ ಇರುವುದಕ್ಕೆ ಇದೆಲ್ಲವೂ ಹೊರಗೆ ಬರುತ್ತಿದೆ ಎಂದು ಅಶೋಕ್ ತಿಳಿಸಿದ್ದಾರೆ.

ಕೊವಿಡ್​ನಿಂದ ಸತ್ತವರ ಸಂಖ್ಯೆ ಗೊಂದಲವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ಬಗ್ಗೆ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಅದು ಆರೋಪವಷ್ಟೇ. ಕೊರೊನಾಗೆ ಬಲಿಯಾದವರ ಬಗ್ಗೆ ಕುಟುಂಬಸ್ಥರಲ್ಲಿ ದಾಖಲೆ ಇದೆ. ವೈದ್ಯರು ನೀಡಿರುವ ಸರ್ಟಿಫಿಕೆಟ್​ ಕುಟುಂಬಸ್ಥರ ಬಳಿಯಿದೆ. ತಹಶೀಲ್ದಾರ್​, ಆರ್​ಐ ಕಡೆಯಿಂದ ಸತ್ತವರ ಬಗ್ಗೆ ರಿಪೋರ್ಟ್​ ಇದೆ. ಮೃತಪಟ್ಟವರಿಗೆ ಆಸ್ಪತ್ರೆಯಿಂದ ಪೇಷಂಟ್​ ನಂಬರ್​ ಇರುತ್ತೆ. ಪರಿಹಾರ ವಿತರಣೆಯಲ್ಲಿ ಬೋಗಸ್ ಆಗಲು ಅವಕಾಶವಿರಲ್ಲ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್​ ಸ್ಪಷ್ಟನೆ ನೀಡಿದ್ದಾರೆ.

ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ. ಬಿಪಿಎಲ್ ಕಾರ್ಡ್​ದಾರರಿಗೆ ಒಂದು ಲಕ್ಷ ರೂ. ಪರಿಹಾರ ಲಭಿಸಲಿದೆ. ಕೇಂದ್ರ ಸರ್ಕಾರ 50 ಸಾವಿರ ರೂ. ಪರಿಹಾರ ನೀಡುತ್ತೆ. ನಿನ್ನೆ ಸರ್ಕಾರದಿಂದ ಪರಿಶೀಲನಾ ಆದೇಶ ಹೊರಡಿಸಿದ್ದೀವಿ. ಕೊವಿಡ್ ಪಾಸಿಟಿವ್ ವರದಿ, ರೋಗಿಯ ಪಿ ನಂಬರ್, ಮರಣ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ಅರ್ಜಿದಾರರ ಬ್ಯಾಂಕ್ ಅಕೌಂಟ್ ನಂಬರ್ ಕೊಡಬೇಕು. ಇಷ್ಟು ದಾಖಲಾತಿ ನೀಡಿ ಡಿಸಿಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ. ದಾಖಲಾತಿ ಪರಿಶೀಲಿಸಿ ಅರ್ಜಿ ಸಲ್ಲಿಸಿದರೆ ಹಣ ನೀಡ್ತೇವೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್‌.ಅಶೋಕ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ನಾನು ಅಶೋಕ ಎಂದು ಮಂತ್ರಿ ಮಾಡಿಲ್ಲ; ಒಕ್ಕಲಿಗ ಸಮುದಾಯದಲ್ಲಿ ಹುಟ್ಟಿದ್ದಕ್ಕೆ ಮಂತ್ರಿ ಮಾಡಿದ್ದಾರೆ: ಆರ್ ಅಶೋಕ್

ಇದನ್ನೂ ಓದಿ: ಜೆಡಿಎಸ್​ನದ್ದು ಮಿಷನ್ 123, ಬಿಜೆಪಿಯವರದ್ದು ಮಿಷನ್ 150; ನಮ್ಮದು ಮಿಷನ್ 224: ಡಿಕೆ ಶಿವಕುಮಾರ್

Published On - 4:15 pm, Wed, 29 September 21

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ