Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಾಂತರ ಮಾಡುವವರು ದೇಶದ್ರೋಹಿಗಳು; ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು: ಆರ್ ಅಶೋಕ್

R Ashok: ಯಾವುದೋ ದೇಶದ ದುಡ್ಡನ್ನು ತಂದು ಹೀಗೆ ಮಾಡ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ ಒಂದು ಸೂಕ್ತ ಕಾನೂನು ತರಬೇಕು. ನಮ್ಮ ಸರ್ಕಾರ ಇರುವುದಕ್ಕೆ ಇದೆಲ್ಲವೂ ಹೊರಗೆ ಬರುತ್ತಿದೆ ಎಂದು ಅಶೋಕ್ ತಿಳಿಸಿದ್ದಾರೆ.

ಮತಾಂತರ ಮಾಡುವವರು ದೇಶದ್ರೋಹಿಗಳು; ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು: ಆರ್ ಅಶೋಕ್
ಆರ್ ಅಶೋಕ್ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Sep 29, 2021 | 5:21 PM

ಬೆಂಗಳೂರು: ಮತಾಂತರದ ಬಗ್ಗೆ ಈಗಾಗಲೇ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಮತಾಂತರ ಮಾಡುವವರು ದೇಶದ್ರೋಹಿಗಳು. ಅವರು ನೆಲ ಸಂಸ್ಕೃತಿ ಹಾಳುಮಾಡಲು ಮತಾಂತರ ಮಾಡುತ್ತಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್​ ಹೇಳಿದ್ದಾರೆ. ಯಾವುದೋ ದೇಶದ ದುಡ್ಡನ್ನು ತಂದು ಹೀಗೆ ಮಾಡ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ ಒಂದು ಸೂಕ್ತ ಕಾನೂನು ತರಬೇಕು. ನಮ್ಮ ಸರ್ಕಾರ ಇರುವುದಕ್ಕೆ ಇದೆಲ್ಲವೂ ಹೊರಗೆ ಬರುತ್ತಿದೆ ಎಂದು ಅಶೋಕ್ ತಿಳಿಸಿದ್ದಾರೆ.

ಕೊವಿಡ್​ನಿಂದ ಸತ್ತವರ ಸಂಖ್ಯೆ ಗೊಂದಲವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ಬಗ್ಗೆ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಅದು ಆರೋಪವಷ್ಟೇ. ಕೊರೊನಾಗೆ ಬಲಿಯಾದವರ ಬಗ್ಗೆ ಕುಟುಂಬಸ್ಥರಲ್ಲಿ ದಾಖಲೆ ಇದೆ. ವೈದ್ಯರು ನೀಡಿರುವ ಸರ್ಟಿಫಿಕೆಟ್​ ಕುಟುಂಬಸ್ಥರ ಬಳಿಯಿದೆ. ತಹಶೀಲ್ದಾರ್​, ಆರ್​ಐ ಕಡೆಯಿಂದ ಸತ್ತವರ ಬಗ್ಗೆ ರಿಪೋರ್ಟ್​ ಇದೆ. ಮೃತಪಟ್ಟವರಿಗೆ ಆಸ್ಪತ್ರೆಯಿಂದ ಪೇಷಂಟ್​ ನಂಬರ್​ ಇರುತ್ತೆ. ಪರಿಹಾರ ವಿತರಣೆಯಲ್ಲಿ ಬೋಗಸ್ ಆಗಲು ಅವಕಾಶವಿರಲ್ಲ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್​ ಸ್ಪಷ್ಟನೆ ನೀಡಿದ್ದಾರೆ.

ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ. ಬಿಪಿಎಲ್ ಕಾರ್ಡ್​ದಾರರಿಗೆ ಒಂದು ಲಕ್ಷ ರೂ. ಪರಿಹಾರ ಲಭಿಸಲಿದೆ. ಕೇಂದ್ರ ಸರ್ಕಾರ 50 ಸಾವಿರ ರೂ. ಪರಿಹಾರ ನೀಡುತ್ತೆ. ನಿನ್ನೆ ಸರ್ಕಾರದಿಂದ ಪರಿಶೀಲನಾ ಆದೇಶ ಹೊರಡಿಸಿದ್ದೀವಿ. ಕೊವಿಡ್ ಪಾಸಿಟಿವ್ ವರದಿ, ರೋಗಿಯ ಪಿ ನಂಬರ್, ಮರಣ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ಅರ್ಜಿದಾರರ ಬ್ಯಾಂಕ್ ಅಕೌಂಟ್ ನಂಬರ್ ಕೊಡಬೇಕು. ಇಷ್ಟು ದಾಖಲಾತಿ ನೀಡಿ ಡಿಸಿಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ. ದಾಖಲಾತಿ ಪರಿಶೀಲಿಸಿ ಅರ್ಜಿ ಸಲ್ಲಿಸಿದರೆ ಹಣ ನೀಡ್ತೇವೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್‌.ಅಶೋಕ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ನಾನು ಅಶೋಕ ಎಂದು ಮಂತ್ರಿ ಮಾಡಿಲ್ಲ; ಒಕ್ಕಲಿಗ ಸಮುದಾಯದಲ್ಲಿ ಹುಟ್ಟಿದ್ದಕ್ಕೆ ಮಂತ್ರಿ ಮಾಡಿದ್ದಾರೆ: ಆರ್ ಅಶೋಕ್

ಇದನ್ನೂ ಓದಿ: ಜೆಡಿಎಸ್​ನದ್ದು ಮಿಷನ್ 123, ಬಿಜೆಪಿಯವರದ್ದು ಮಿಷನ್ 150; ನಮ್ಮದು ಮಿಷನ್ 224: ಡಿಕೆ ಶಿವಕುಮಾರ್

Published On - 4:15 pm, Wed, 29 September 21

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ