AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲಭೆ ಹತ್ತಿಕ್ಕಲು ಬುಲ್ಡೋಜರ್​ ಪ್ರಯೋಗ ಅನಿವಾರ್ಯವಾಗಬಹುದು, ಈ ಬಗ್ಗೆ ಚರ್ಚೆ ನಡೆಸುತ್ತೇವೆ: ಸಚಿವ ಆರ್​.ಅಶೋಕ್​

ದಂಗೆಕೋರರಿಗೆ ಮನೆಯೂ ಸಿಗಬಾರದು, ಹಾಗೇ ಶಿಕ್ಷೆ ಕೊಡಬೇಕು. ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿ ದಂಗೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಅದೇ ಬುಲ್ಡೋಜರ್​ ಪ್ರಯೋಗ ಜಾರಿಯ ಬಗ್ಗೆ ನಾವೂ ಯೋಚನೆ ಮಾಡುತ್ತಿದ್ದೇವೆ ಎಂದು ಆರ್​.ಅಶೋಕ್

ಗಲಭೆ ಹತ್ತಿಕ್ಕಲು ಬುಲ್ಡೋಜರ್​ ಪ್ರಯೋಗ ಅನಿವಾರ್ಯವಾಗಬಹುದು, ಈ ಬಗ್ಗೆ ಚರ್ಚೆ ನಡೆಸುತ್ತೇವೆ: ಸಚಿವ ಆರ್​.ಅಶೋಕ್​
ಆರ್​.ಅಶೋಕ್​
TV9 Web
| Edited By: |

Updated on:Apr 23, 2022 | 4:43 PM

Share

ಬೆಂಗಳೂರು: ಹುಬ್ಬಳ್ಳಿ ಗಲಭೆಕೋರರಿಗೆ ವಿದೇಶಿಯರ ಜತೆ ನಂಟಿರಬಹುದು ಎಂದು ಕಂದಾಯ ಸಚಿವ ಆರ್​. ಅಶೋಕ್​ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆ.ಜೆ.ಹಳ್ಳಿ, ಡಿಜೆ ಹಳ್ಳಿ ಗಲಭೆಯ ಸೃಷ್ಟಿಕರ್ತರು ಕಾಂಗ್ರೆಸ್​​ನವರು. ಅದರಲ್ಲಿ ಹೊಡೆದವರು, ಏಟುತಿಂದವರೆಲ್ಲ ಕಾಂಗ್ರೆಸ್ಸಿಗರೇ ಆಗಿದ್ದಾರೆ.  ಈಗ ಹುಬ್ಬಳ್ಳಿಯಲ್ಲಿ ಗಲಭೆ ಆಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊದಮೊದಲು ಕಾಂಗ್ರೆಸ್​ ಕಿಡಿಕಾರಿದ್ದೇ ಬಂತು. ಅಮಾಯಕ ಬಂಧನವಾಗುತ್ತಿದೆ ಎಂದು ರೋಷಾವೇಷ ತೋರಿಸಿದರು. ಆದರೆ ನಂತರ ಕಾಂಗ್ರೆಸ್​​ನವರೇ ಅರೆಸ್ಟ್ ಆಗಲು ತೊಡಗಿದ್ದಾರೆ. ಪಿಎಸ್​ಐ ಅಕ್ರಮ ನೇಮಕಾತಿಯೂ ಕೂಡ ಕಾಂಗ್ರೆಸ್​​ನ್ನೇ ಸುತ್ತಿಕೊಳ್ಳುತ್ತಿದೆ. ಹೀಗಾಗಿ ಈಗ ಆ ರೋಷವೆಲ್ಲ ಇಳಿದಿದೆ ಎಂದು ಟೀಕಿಸಿದರು. 

ಹಿಜಾಬ್​ ವಿಚಾರಕ್ಕೆ ವಿದೇಶಿಗರ ಪ್ರತಿಕ್ರಿಯೆ ಬಂತು. ವಿದೇಶಿ ಚಾನಲ್​ಗಳಲ್ಲೂ ಪ್ರಸಾರವಾಯ್ತು. ಹಾಗೇ, ಹುಬ್ಬಳ್ಳಿ ಗಲಭೆಗೂ ವಿದೇಶಿಗರ ನಂಟಿರಬಹುದು. ಪಾಕಿಸ್ತಾನಕ್ಕೆ ಜೈ ಎನ್ನುವವರು ಇದ್ದಾರೆ, ಐಎಸ್​ಐ ಜತೆ ಸಂಪರ್ಕ ಹೊಂದಿರುವವರೂ ಇದ್ದಾರೆ. ಹಾಗಾಗಿ ಎಲ್ಲ ರೀತಿಯಿಂದಲೂ ತನಿಖೆ ಅಗತ್ಯವಿದೆ. ದಂಗೆಕೋರರಿಗೆ ಮನೆಯೂ ಸಿಗಬಾರದು, ಹಾಗೇ ಶಿಕ್ಷೆ ಕೊಡಬೇಕು. ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿ ದಂಗೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಅದೇ ಬುಲ್ಡೋಜರ್​ ಪ್ರಯೋಗ ಜಾರಿಯ ಬಗ್ಗೆ ನಾವೂ ಯೋಚನೆ ಮಾಡುತ್ತಿದ್ದೇವೆ. ಈ ಸಿಎಂ ಜತೆ ಚರ್ಚಿಸಲಾಗುವುದು ಎಂದೂ ಹೇಳಿದರು.   ಇಂದು ಬೆಳಗ್ಗೆ ಸಿಟಿ ರವಿ ಕೂಡ ಹುಬ್ಬಳ್ಳಿ ಗಲಭೆ ಬಗ್ಗೆ ಪ್ರತಿಕ್ರಿಯೆ ನೀಡಿ, ಅದನ್ನು ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಾಟೆಗೆ ಹೋಲಿಸಿದ್ದರು. ಜಿನ್ನಾ ಮನಸ್ಥಿತಿಯವರು ನಡೆಸುವ ಗಲಭೆಗಳಿಗೆ ಸಾವರ್ಕರ್​ ಮನಸ್ಥಿತಿಯಿಂದ ಉತ್ತರ ನೀಡಬೇಕು. ಗಾಂಧಿ ಮನಸ್ಥಿತಿಯಿಂದ ಹೋರಾಡಿದರೆ ಏನೂ ಪ್ರಯೋಜನ ಆಗುವುದಿಲ್ಲ ಎಂದು ಹೇಳಿದ್ದರು.

ಹಾಗೇ, ಏಪ್ರಿಲ್​ 8ರಂದು ನಗರದ ಆರು ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಕರೆ ಮಾಡಿದವರಿಗೆ ಪಾಕಿಸ್ತಾನ, ಸಿರಿಯಾ ನಂಟಿದೆ ಎಂಬ ಸ್ಫೋಟಕ ಮಾಹಿತಿ ಇಂದು ಹೊರಬಿದ್ದಿದೆ. ಬೆದರಿಕೆಗೆ ಸಂಬಂಧಪಟ್ಟ ಇ-ಮೇಲ್​ ಪಾಕಿಸ್ತಾನ, ಸಿರಿಯಾದಿಂದ ಬಂದಿದ್ದು ಎಂಬ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಗೃಹ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ: ವಿಧಾನಸೌಧ, ವಿಕಾಸಸೌಧದಲ್ಲಿ ಇಫ್ತಾರ್ ಕೂಟ ನಡೆಸದಂತೆ ರಾಷ್ಟ್ರ ರಕ್ಷಣಾ ಪಡೆ ಕಾರ್ಯಕರ್ತರಿಂದ ಪ್ರತಿಭಟನೆ

Published On - 4:42 pm, Sat, 23 April 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ