AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಕಾಲು ಕಳೆದುಕೊಂಡ ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ 25 ಲಕ್ಷ ರೂ ಪರಿಹಾರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಕರ್ತವ್ಯದಲ್ಲಿ ಮೃತಪಟ್ಟ 26 ಸಿಬ್ಬಂದಿಗಳ ಅವಲಂಬಿತರಿಗೆ ಒಟ್ಟು 26 ಕೋಟಿ ರೂ ಪರಿಹಾರದ ಚೆಕ್​ ಅನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದ್ದಾರೆ. ಇದರಲ್ಲಿ ಅಪಘಾತದಲ್ಲಿ ಗಾಯಗೊಂಡ ಓರ್ವ ಚಾಲಕನಿಗೆ 25 ಲಕ್ಷ ರೂ ಪರಿಹಾರ ಮತ್ತು 8 ತಿಂಗಳ ಐಒಡಿ ನೀಡಲಾಗಿದೆ.

ಅಪಘಾತದಲ್ಲಿ ಕಾಲು ಕಳೆದುಕೊಂಡ ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ 25 ಲಕ್ಷ ರೂ ಪರಿಹಾರ
ಸಿಬ್ಬಂದಿಗೆ ಚೆಕ್​ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ
ಗಂಗಾಧರ​ ಬ. ಸಾಬೋಜಿ
|

Updated on: Apr 27, 2025 | 10:42 AM

Share

ಬೆಂಗಳೂರು, ಏಪ್ರಿಲ್​ 27: ಅಪಘಾತದಿಂದ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಿಬ್ಬಂದಿಗಳ ಅವಲಂಬಿತರಿಗೆ ಸಾಂತ್ವನ ಹೇಳಿ, ನಿಗಮದ ವಿವಿಧ ಪರಿಹಾರ ಯೋಜನೆ ಅಡಿ ಸಿಬ್ಬಂದಿ ಹಾಗೂ ಸಿಬ್ಬಂದಿಗಳ ಅವಲಂಬಿತರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಪರಿಹಾರ ಮೊತ್ತದ ಚೆಕ್‌ ಅನ್ನು ವಿತರಣೆ ಮಾಡಿದ್ದಾರೆ. ಸಿಬ್ಬಂದಿಗಳ ಜೀವ ಅಮೂಲ್ಯವಾದದ್ದು, ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ. ಆದರೆ ಅವರ ಅವಲಂಬಿತರ ಮುಂದಿನ ಜೀವನವು ಆರ್ಥಿಕವಾಗಿ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಿರುವುದಾಗಿ ತಿಳಿಸಿದ್ದಾರೆ.

ಪರಿಹಾರದ ಮೊತ್ತವನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿ: ರಾಮಲಿಂಗಾರೆಡ್ಡಿ

ಚೆಕ್‌ ವಿತರಣೆ ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಸಿಬ್ಬಂದಿಗಳು ಹಗಳಿರಲು ಸಂಸ್ಥೆಗಾಗಿ ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿರುತ್ತದೆ. ಮೃತ ಸಿಬ್ಬಂದಿಗಳ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ಈಗಾಗಲೇ  ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸೈಲೆಂಟ್​ ಆಗಿ ಡೆಂಘಿ ಹೆಚ್ಚಳ: ಮೂರುವರೇ ತಿಂಗಳಲ್ಲಿ 435 ಮಂದಿಗೆ ಡೆಂಘಿ ದೃಢ

ಇದನ್ನೂ ಓದಿ
Image
ಮಂಗಳೂರಿನಲ್ಲಿ ತೇರು ಬಿದ್ದ ವಿಚಾರ: ಅವಘಡದ ಬಗ್ಗೆ ದೈವಗಳು ಆಕ್ರೋಶ
Image
ಬೆಂಗಳೂರಿನಲ್ಲಿ ಡೆಂಘಿ ಹೆಚ್ಚಳ:ಮೂರುವರೇ ತಿಂಗಳಲ್ಲಿ 435 ಮಂದಿಗೆ ಡೆಂಘಿ ದೃಢ
Image
ಇಂದಿನಿಂದ ಒಂದು ವಾರ ಕರ್ನಾಟಕದಾದ್ಯಂತ ಸುರಿಯಲಿದೆ ಭಾರಿ ಮಳೆ
Image
ಮೋದಿ, ಅಮಿತ್ ಶಾ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವನ ಬಂಧನ

ಇಂದು ವಿತರಿಸಲಾಗಿರುವ  ಪರಿಹಾರದ ಮೊತ್ತವನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು‌. ಮಕ್ಕಳ ವಿದ್ಯಾಭ್ಯಾಸ, ಮನೆ ನಿರ್ಮಾಣ ಮತ್ತು ಇತರೆ ಶುಭ ಕಾರ್ಯಗಳಿಗೆ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಬಡ್ಡಿ  ವ್ಯಾಮೋಹಕ್ಕೆ ಒಳಗಾಗಿ ಪರಿಹಾರ ಧನವನ್ನು ಯಾರಿಗೂ ನೀಡದಂತೆ ಕಿವಿ ಮಾತು ಕೂಡ ಹೇಳಿದರು. ಹಣವಿದ್ದರೆ ಎಲ್ಲರೂ ನೆಂಟರೆ, ಆದರೆ ಸೂಕ್ತವಾದ ರೀತಿಯಲ್ಲಿ ಹಣ ಬಳಕೆ ಮಾಡಿಕೊಳ್ಳಲು ಹೇಳಿದ್ದಾರೆ.

ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ದೃಷ್ಠಿಯಿಂದ “ಕೆಎಸ್​ಆರ್​ಟಿಸಿ ಆರೋಗ್ಯ” ಯೋಜನೆಯನ್ನು ಕೂಡ ಜಾರಿಗೆ ತಂದಿದ್ದು, ರಾಜ್ಯಾದಾದ್ಯಂತ 300 ಕ್ಕೂ ಅಧಿಕ ಆಸ್ಪತ್ರೆಗಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿದ್ದು, ಈವರೆಗೂ 56,000 ಕ್ಕೂ ಹೆಚ್ಚು ಸಿಬ್ಬಂದಿ, ಅವಲಂಬಿತರು ಚಿಕಿತ್ಸೆ ಪಡೆದಿದ್ದಾರೆ ಎಂದರು.

ನಿಗಮದ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತಕ್ಕೆ ಒಳಪಟ್ಟು, ಬಲಗಾಲಿನ ಮಂಡಿಯ ಕೆಳಗೆ ಕಾಲನ್ನು ಕಳೆದುಕೊಂಡ ಸುನಿಲ್ ಕುಮಾರ್ ಬಿ.ಡಿ., ಚಾಲಕ-ಕಂ-ನಿರ್ವಾಹಕ, ಬಿಲ್ಲೆ ಸಂಖ್ಯೆ. 1624, ಅರಕಲಗೂಡು ಘಟಕ, ಹಾಸನ ವಿಭಾಗ ಅವರಿಗೆ ಪರಿಹಾರವಾಗಿ ರೂ.25.00 ಲಕ್ಷಗಳನ್ನು ವಿತರಿಸಲಾಯಿತು.  ಇದಲ್ಲದೆ ಅವರಿಗೆ 2024ರ ಮಾರ್ಚ್ 25ರಿಂದ ಡಿಸೆಂಬರ್ 09ರವರೆಗೆ 08 ತಿಂಗಳು 14 ದಿನಗಳ ಅವಧಿಗೆ ಐಒಡಿ ನೀಡಲಾಗಿದೆ. ಸಂಸ್ಥೆಯ ವತಿಯಿಂದ ಪೂರ್ಣ ವೈದ್ಯಕೀಯ ವೆಚ್ಚ ರೂ.4,85,762-00 ಗಳನ್ನು ಭರಿಸಲಾಗಿದೆ ಹಾಗೂ ಸದರಿ ನೌಕರರಿಗೆ  ಲಘು ಹುದ್ದೆ ನೀಡಿ ತಾಂತ್ರಿಕ ಸಹಾಯಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಲಾಗಿದೆ.

ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ಒಂದು ಕೋಟಿ ರೂ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇದುವರೆಗೂ 24 ಜನ ನೌಕರರ ಕುಟುಂಬದವರಿಗೆ ತಲಾ ರೂ. 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. ಕರ್ತವ್ಯದಲ್ಲಿರುವಾಗ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ. 1 ಕೋಟಿ ಚೆಕ್ ನೀಡಲಾಗಿದೆ. ಈವರೆಗೂ 26 ಸಿಬ್ಬಂದಿಗಳ ಅವಲಂಬಿತರಿಗೆ ಒಟ್ಟಾರೆ ರೂ.26 ಕೋಟಿ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ

ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಪರಿಹಾರ ಮೊತ್ತವಾದ ರೂ. 3 ಲಕ್ಷ ವನ್ನು 2023 ನವೆಂಬರ್​ 01 ರಿಂದ ರೂ.10 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಇದುವರೆಗೆ 94 ಪ್ರಕರಣಗಳಲ್ಲಿ ತಲಾ ರೂ.10 ಲಕ್ಷಗಳ ಪರಿಹಾರ ಧನವನ್ನು ನೀಡಿದ್ದು, ನಂತರದಲ್ಲಿ ಕಾಯಿಲೆಗಳಿಂದ ಮರಣ ಹೊಂದಿದ 31 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ ರೂ.10.00 ಲಕ್ಷಗಳ ಪರಿಹಾರದ ಚೆಕ್ಅನ್ನು ವಿತರಿಸಲಾಗಿದೆ. ಈವರೆಗೂ 125 ಸಿಬ್ಬಂದಿಗಳ ಅವಲಂಬಿತರಿಗೆ ಒಟ್ಟು ರೂ. 12.50 ಕೋಟಿಗಳ ಪರಿಹಾರ ನೀಡಲಾಗಿದೆ ಎಂದರು.

ಇದನ್ನೂ ಓದಿ: ಸೀಟ್ ಬ್ಲಾಕಿಂಗ್ ತಡೆಗೆ KEA ಹೊಸ ನಿಯಮ: 3 ವರ್ಷ ಬ್ಯಾನ್​

ಕರಾರಸಾ ನಿಗಮ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ವಿ ಮಾತನಾಡಿ, ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು ಹೇಳಿರುವ ಕಿವಿ ಮಾತನ್ನು ಚಾಚೂ ತಪ್ಪದೆ ಪಾಲಿಸುವಂತೆ ತಿಳಿಸಿದರು. ಹಣವನ್ನು ಸದುಪಯೋಗಪಡಿಸಿಕೊಳ್ಳಿ ಯಾರನ್ನು ನಂಬಿ ದುಡ್ಡನ್ನು ಕಳೆದುಕೊಳ್ಳಬೇಡಿ. ಸಂಸ್ಥೆ ಸದಾ ತಮ್ಮೊಡನೆ ಇದೆ ಎಂದರು.

ಕರಾರಸಾ ನಿಗಮ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಎಂಡಿ ಅನ್ನುಕುಮಾರ್ ವಿ, ವ್ಯವಸ್ಥಾಪಕ ನಿರ್ದೇಶಕ ಆರ್ ರಾಮಚಂದ್ರನ್, ಬಿಎಂಟಿಸಿ ನಿರ್ದೇಶಕಿ ಡಾ. ನಂದಿನಿದೇವಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ