Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಲಿಂಗಾರೆಡ್ಡಿಗೆ ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ: ಚೇತರಿಕೆ ಅನುಭವ ಹಂಚಿಕೊಂಡ ಸಚಿವ

ರೋಬೋಟ್-ನೆರವಿನ ಶಸ್ತ್ರಚಿಕಿತ್ಸೆಯು ಶಸ್ತ್ರಚಿಕಿತ್ಸಾ ತಂತ್ರಜ್ಞಾನದಲ್ಲಿ ಒಂದು ಪ್ರಗತಿಯಾಗಿದೆ. ಕ್ಯಾನ್ಸರ್, ಮೂತ್ರಪಿಂಡ, ಮೊಣಕಾಲಿಗೆ ಸೇರಿದಂತೆ ಇತರೆ ಗಂಭೀರ ಕಾಯಿಲೆಗಳಿರುವ ರೋಗಿಗಳಿಗೆ ಈ ರೋಬೋಟ್ ಮೂಲಕ ಶಸ್ತ್ರಚಿಕಿತ್ಸೆ ನೀಡಲಾಗುತ್ತದೆ. ಅದರಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಮೊಣಕಾಲಿಗೂ ಸಹ ರೋಬೋಟ್ ಸರ್ಜರಿ ಮಾಡಲಾಗಿದೆ. ಇನ್ನು ಈ ಬಗ್ಗೆ ಸಚಿವರು ತಮ್ಮ ಶೀಘ್ರಚೇತರಿಕೆಯ ಅನುಭವ ಹಂಚಿಕೊಂಡಿದ್ದಾರೆ.

ರಾಮಲಿಂಗಾರೆಡ್ಡಿಗೆ ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ: ಚೇತರಿಕೆ ಅನುಭವ ಹಂಚಿಕೊಂಡ ಸಚಿವ
Ramalinga Reddy
Follow us
ರಮೇಶ್ ಬಿ. ಜವಳಗೇರಾ
|

Updated on: Feb 06, 2025 | 5:25 PM

ಬೆಂಗಳೂರು, (ಫೆಬ್ರವರಿ 06): ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ರೋಬೋಟ್ ನೆರವಿನಿಂದ ಮೊಣಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು ಈಗ ಚೇತರಿಸಿಕೊಂಡಿಕೊಂಡಿದ್ದಾರೆ. ಇನ್ನು ಸಚಿವರು ತಮ್ಮ ಶೀಘ್ರಚೇತರಿಕೆಯ ಅನುಭವ ಹಂಚಿಕೊಂಡಿದ್ದು, ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದಿದ್ದಾರೆ.

ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲುಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ, ಹಲವಾರು ಜನ ಹಲವು ರೀತಿಯ ಸಲಹೆ ನೀಡಿದರು. ಮಂಡಿನೋವಿಗೆ ತೈಲವನ್ನೂ ಸಹ ಹಚ್ಚಿಬಿಟ್ಟೆ, ಆದರೂ ಯಾವುದೇ ಪ್ರಯೋಜನ ಕಾಣಲಿಲ್ಲ. ನಂತರ ಸ್ನೇಹಿತರ ಸಲಹೆಯಂತೆ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಅವರನ್ನು ಭೇಟಿ ಮಾಡಿ, ತಪಾಸಣೆಗೆ ಒಳಗಾದಾಗ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯ ಸಲಹೆ ನೀಡಿದರು ಎಂದು ಹೇಳಿದರು.

ಪ್ರಾರಂಭದಲ್ಲಿ ಶಸ್ತ್ರಚಿಕಿತ್ಸೆ ಬಗ್ಗೆ ಹಿಂಜರಿಕೆ ಇತ್ತು. ಆದರೆ, ರೋಬೋಟ್‌ ನೆರವಿನಿಂದ ನಿಖರವಾಗಿ ಹಾಗೂ ಅತಿವೇಗವಾಗಿ ಚೇತರಿಕೆ ಕಾಣಬಹುದು ಎಂಬುದರ ಬಗ್ಗೆ ವೈದ್ಯರ ಭರವಸೆ ನೀಡಿದ ಬಳಿಕ ತೆರೆದ ಶಸ್ತ್ರಚಿಕಿತ್ಸೆ ಬದಲು ರೋಬೋಟ್‌ ನೆರವಿನ ಶಸ್ತ್ರಚಿಕಿತ್ಸೆ ಆಯ್ದುಕೊಂಡೆ. ಅಂತೆಯೇ ಶಸ್ತ್ರಚಿಕಿತ್ಸೆ ಬಳಿಕ ನನ್ನ ನಿರೀಕ್ಷೆಗೂ ಮೀರಿ ಶೀಘ್ರವಾಗಿ ಚೇತರಿಕೆ ಕಂಡಿದ್ದೇನೆ. ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾಗುವವರು ರೋಬೋಟ್‌ ನೆರವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂಬುದು ನನ್ನ ಅನಿಸಿಕೆ ಎಂದು ತಿಳಿಸಿದರು.

ಇಲ್ಲಿನ ವೈದ್ಯ ತಂಡವು ಸಹ ಸೂಕ್ತ ಮಾಹಿತಿಯೊಂದಿಗೆ, ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ಉತ್ತಮ ರೀತಿಯಲ್ಲಿ ನನ್ನ ಕ್ಷೇಮಸಮಾಚಾರ ನೋಡಿಕೊಂಡರು. ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಪ್ರತಿಯೊಬ್ಬರು ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌ ಕಾರ್ಯಕ್ರಮದ ಅಡಿ ಭಾಗಿಯಾಗಿರುವುದು ಸಾಕಷ್ಟು ಜನರಿಗೆ ಸ್ಪೂರ್ತಿದಾಯಕವಾಗಿದೆ. ಹಲವರು ಮೊಣಕಾಲು ನೋವಿನಿಂದ ಬಳಲುತ್ತಿದ್ದರೂ, ಶಸ್ತ್ರಚಿಕಿತ್ಸೆಯ ಬೀತಿಯಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ನೋವಿನಲ್ಲೇ ನರಳುತ್ತಿರುತ್ತಾರೆ, ನಮ್ಮಂತಹ ನೂರಾರು ಜನರ ಅನುಭವವು ಬೇರೆಯವರಿಗೆ ಸ್ಪೂರ್ತಿಯಾಗಲಿ ಎಂದರು.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷರಾದ ಡಾ.ವಿ.ವಿ. ಚಿನಿವಾಲರ್‌ ಮಾತನಾಡಿ, ನಾನೂ ಸಹ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟು, ಚೇತರಿಕೆ ಕಂಡಿದ್ದೇನೆ, ವೈದ್ಯಕೀಯ ಲೋಕದಲ್ಲಿ ರೋಬೋಟ್‌ನ ಆಗಮನ ರೋಗಿಗಳಿಗೆ ಹೆಚ್ಚು ಅನುಕೂಲವಾಗಿದೆ ಎಂದರು.

ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಮಾತನಾಡಿ, ಇಂದು ರೋಬೋಟ್‌ ನೆರವು ವೈದ್ಯಲೋಕದಲ್ಲಿ ಹೊಸ ಅದ್ಯಾಯ ಸೃಷ್ಟಿಸಿದೆ. ಅದರಲ್ಲೂ ಮೊಣಕಾಲು, ಸೊಂಟ ಇತರೆ ಕೀಲು ಬದಲಾವಣೆಗೆ ರೋಬೋಟ್‌ ಅತ್ಯಂತ ನಿಖರವಾಗಿ ಶಸ್ತ್ರಚಿಕಿತ್ಸೆಗೆ ಸಹಕಾರಿಯಾಗಿದೆ. ಹೀಗಾಗಿಯೇ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌ ಕಾರ್ಯಕ್ರಮ ಚಾಲನೆ ನೀಡಿದ್ದೇನೆ. ಫೋರ್ಟಿಸ್ ಸ್ಟ್ರೈಡ್ ಎನ್ನುವುದು ಕೀಲು ಆರೋಗ್ಯ ಸವಾಲುಗಳಿಂದ ಪ್ರಭಾವಿತ ವ್ಯಕ್ತಿಗಳನ್ನು ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾದ ಬೆಂಬಲ ಗುಂಪಾಗಿದೆ. ಇದು ಅನುಭವಗಳನ್ನು ಹಂಚಿಕೊಳ್ಳಲು, ತಜ್ಞರ ಒಳನೋಟಗಳನ್ನು ಪಡೆಯಲು ಮತ್ತು ಸುಧಾರಿತ ಚೇತರಿಕೆಗಾಗಿ ಅಮೂಲ್ಯವಾದ ಮಾರ್ಗದರ್ಶನವನ್ನು ಪಡೆಯುವ ವೇದಿಕೆಯಾಗಿದೆ ಎಂದು ವಿವರಿಸಿದರು.

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ