AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹದಾಯಿ ಸಭೆಯಲ್ಲಿ ನನಗೆ ಇಂಗ್ಲಿಷ್​ನಲ್ಲಿ ಪ್ರಶ್ನೆ ಕೇಳಿದ್ರು.. ಆಗ ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ ಎಂದು ಸ್ಪಷ್ಟವಾಗಿ ಹೇಳಿದೆ’

ನಾನು ಸರ್ಕಾರಿ ಶಾಲೆಯಲ್ಲಿ ಓದಿದವ, ನನಗೆ ಇಂಗ್ಲಿಷ್ ಬರಲ್ಲ. ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಜಿಲ್ಲೆಯ ಗೋಕಾಕ್ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸಚಿವ ರಮೇಶ್ ಜಾರಕಿಹೊಳಿ​ ಹೇಳಿದರು.

‘ಮಹದಾಯಿ ಸಭೆಯಲ್ಲಿ ನನಗೆ ಇಂಗ್ಲಿಷ್​ನಲ್ಲಿ ಪ್ರಶ್ನೆ ಕೇಳಿದ್ರು.. ಆಗ ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ ಎಂದು ಸ್ಪಷ್ಟವಾಗಿ ಹೇಳಿದೆ’
ರಮೇಶ್ ಜಾರಕಿಹೊಳಿ
KUSHAL V
|

Updated on: Feb 27, 2021 | 8:32 PM

Share

ಬೆಳಗಾವಿ: ಮಹದಾಯಿ ವಿವಾದ ವಿಚಾರವಾಗಿ ದೆಹಲಿಯಲ್ಲಿ ಸಭೆ ಇತ್ತು. 3 ದಿನಗಳ ಹಿಂದೆ ಸಭೆ ಇತ್ತು. ಸಭೆಯಲ್ಲಿ ನನಗೆ ಇಂಗ್ಲಿಷ್​ನಲ್ಲಿ ಪ್ರಶ್ನೆ ಕೇಳಲು ಮುಂದಾದರು. ನಾನು ಸರ್ಕಾರಿ ಶಾಲೆಯಲ್ಲಿ ಓದಿದವ, ನನಗೆ ಇಂಗ್ಲಿಷ್ ಬರಲ್ಲ. ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಜಿಲ್ಲೆಯ ಗೋಕಾಕ್ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸಚಿವ ರಮೇಶ್ ಜಾರಕಿಹೊಳಿ​ ಹೇಳಿದರು.

ನಮ್ಮ ಮನೆಯಲ್ಲಿ ಎಲ್ಲರೂ ಸರ್ಕಾರಿ ಶಾಲೆಯಲ್ಲಿ ಓದಿದವರು. ನಾವೆಲ್ಲರೂ ಸರ್ಕಾರಿ ಆಸ್ಪತ್ರೆಯಲ್ಲೇ ಹುಟ್ಟಿದ್ದೇವೆ. ನನ್ನ ಮೊಮ್ಮಗ ಕೂಡ ಸರ್ಕಾರಿ ಆಸ್ಪತ್ರೆಯಲ್ಲೇ ಜನಿಸಿದ್ದಾನೆ ಎಂದು ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು.

‘ಗೋಕಾಕ್ ಜನ ಮನವಿ ಮಾಡಿದರೆ ನನಗೆ ಅಪಮಾನ ಆಗುತ್ತೆ’ ಯಾವುದೇ ಕೆಲಸವಿರಲಿ ಜನರು ಮನವಿ ಮಾಡುವ ಅಗತ್ಯವಿಲ್ಲ. ಗೋಕಾಕ್​ ಜನರು ನನಗೆ ಮನವಿ ಮಾಡುವ ಜರೂರತ್ ಇಲ್ಲ. ಯಾವುದೇ ಕೆಲಸ ಇರಲಿ ಆದೇಶ ಮಾಡುವ ಹಕ್ಕು ಜನರಿಗಿದೆ ಎಂದು ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು.

ನಿಮ್ಮ ಆಶೀರ್ವಾದದಿಂದ ದೊಡ್ಡ ಪ್ರಮಾಣದಲ್ಲಿ ಬೆಳೀತಿದ್ದೇನೆ. ಗೋಕಾಕ್ ಜನ ಮನವಿ ಮಾಡಿದರೆ ನನಗೆ ಅಪಮಾನ ಆಗುತ್ತೆ. ಗೋಕಾಕ್​ನಲ್ಲಿ ಕನ್ನಡ ಸಾಹಿತ್ಯ ಭವನ, ಸಭಾಭವನ ನಿರ್ಮಿಸಲು ಕ್ರಮ ವಹಿಸುತ್ತೇನೆ ಎಂದು ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸಚಿವ ರಮೇಶ್​ ಹೇಳಿದರು.

ಬಿಜೆಪಿ ಹೈಕಮಾಂಡ್‌ ನನಗೆ ಟಿಕೆಟ್‌ ನೀಡಲಿ-ಮುತಾಲಿಕ್‌ ಅತ್ತ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ವಿಜಯಪುರ ನಗರದಲ್ಲಿ ಪ್ರಮೋದ್ ಮುತಾಲಿಕ್ ಮಾತನಾಡಿದ್ದಾರೆ. ಬೆಳಗಾವಿ ಕ್ಷೇತ್ರದ ಬೈಎಲೆಕ್ಷನ್‌ನಲ್ಲಿ ಸ್ಪರ್ಧೆಗೆ ಬಯಸಿದ್ದೇನೆ. ಬಿಜೆಪಿ ಹೈಕಮಾಂಡ್‌ ನನಗೆ ಟಿಕೆಟ್‌ ನೀಡಲಿ ಎಂದು ಮುತಾಲಿಕ್‌ ಹೇಳಿದರು. ನನಗೆ ಟಿಕೆಟ್‌ ನೀಡದಿದ್ರೂ ಬಿಜೆಪಿ ಗೆಲುವಿಗೆ ಶ್ರಮಿಸುತ್ತೇನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದರು.

ಇದನ್ನೂ ಓದಿ: ‘ಹಿಂದುತ್ವವನ್ನ ಟೀಕೆ‌ ಮಾಡೋರು ಹಿಂದೂ ವಿರೋಧಿಗಳಲ್ಲ; RSS​​ನವರು ಜನರ ಬ್ರೇನ್​ ವಾಷ್​ ಮಾಡುತ್ತಿದ್ದಾರೆ’

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!