AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹದಾಯಿ ಸಭೆಯಲ್ಲಿ ನನಗೆ ಇಂಗ್ಲಿಷ್​ನಲ್ಲಿ ಪ್ರಶ್ನೆ ಕೇಳಿದ್ರು.. ಆಗ ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ ಎಂದು ಸ್ಪಷ್ಟವಾಗಿ ಹೇಳಿದೆ’

ನಾನು ಸರ್ಕಾರಿ ಶಾಲೆಯಲ್ಲಿ ಓದಿದವ, ನನಗೆ ಇಂಗ್ಲಿಷ್ ಬರಲ್ಲ. ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಜಿಲ್ಲೆಯ ಗೋಕಾಕ್ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸಚಿವ ರಮೇಶ್ ಜಾರಕಿಹೊಳಿ​ ಹೇಳಿದರು.

‘ಮಹದಾಯಿ ಸಭೆಯಲ್ಲಿ ನನಗೆ ಇಂಗ್ಲಿಷ್​ನಲ್ಲಿ ಪ್ರಶ್ನೆ ಕೇಳಿದ್ರು.. ಆಗ ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ ಎಂದು ಸ್ಪಷ್ಟವಾಗಿ ಹೇಳಿದೆ’
ರಮೇಶ್ ಜಾರಕಿಹೊಳಿ
KUSHAL V
|

Updated on: Feb 27, 2021 | 8:32 PM

Share

ಬೆಳಗಾವಿ: ಮಹದಾಯಿ ವಿವಾದ ವಿಚಾರವಾಗಿ ದೆಹಲಿಯಲ್ಲಿ ಸಭೆ ಇತ್ತು. 3 ದಿನಗಳ ಹಿಂದೆ ಸಭೆ ಇತ್ತು. ಸಭೆಯಲ್ಲಿ ನನಗೆ ಇಂಗ್ಲಿಷ್​ನಲ್ಲಿ ಪ್ರಶ್ನೆ ಕೇಳಲು ಮುಂದಾದರು. ನಾನು ಸರ್ಕಾರಿ ಶಾಲೆಯಲ್ಲಿ ಓದಿದವ, ನನಗೆ ಇಂಗ್ಲಿಷ್ ಬರಲ್ಲ. ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಜಿಲ್ಲೆಯ ಗೋಕಾಕ್ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸಚಿವ ರಮೇಶ್ ಜಾರಕಿಹೊಳಿ​ ಹೇಳಿದರು.

ನಮ್ಮ ಮನೆಯಲ್ಲಿ ಎಲ್ಲರೂ ಸರ್ಕಾರಿ ಶಾಲೆಯಲ್ಲಿ ಓದಿದವರು. ನಾವೆಲ್ಲರೂ ಸರ್ಕಾರಿ ಆಸ್ಪತ್ರೆಯಲ್ಲೇ ಹುಟ್ಟಿದ್ದೇವೆ. ನನ್ನ ಮೊಮ್ಮಗ ಕೂಡ ಸರ್ಕಾರಿ ಆಸ್ಪತ್ರೆಯಲ್ಲೇ ಜನಿಸಿದ್ದಾನೆ ಎಂದು ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು.

‘ಗೋಕಾಕ್ ಜನ ಮನವಿ ಮಾಡಿದರೆ ನನಗೆ ಅಪಮಾನ ಆಗುತ್ತೆ’ ಯಾವುದೇ ಕೆಲಸವಿರಲಿ ಜನರು ಮನವಿ ಮಾಡುವ ಅಗತ್ಯವಿಲ್ಲ. ಗೋಕಾಕ್​ ಜನರು ನನಗೆ ಮನವಿ ಮಾಡುವ ಜರೂರತ್ ಇಲ್ಲ. ಯಾವುದೇ ಕೆಲಸ ಇರಲಿ ಆದೇಶ ಮಾಡುವ ಹಕ್ಕು ಜನರಿಗಿದೆ ಎಂದು ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು.

ನಿಮ್ಮ ಆಶೀರ್ವಾದದಿಂದ ದೊಡ್ಡ ಪ್ರಮಾಣದಲ್ಲಿ ಬೆಳೀತಿದ್ದೇನೆ. ಗೋಕಾಕ್ ಜನ ಮನವಿ ಮಾಡಿದರೆ ನನಗೆ ಅಪಮಾನ ಆಗುತ್ತೆ. ಗೋಕಾಕ್​ನಲ್ಲಿ ಕನ್ನಡ ಸಾಹಿತ್ಯ ಭವನ, ಸಭಾಭವನ ನಿರ್ಮಿಸಲು ಕ್ರಮ ವಹಿಸುತ್ತೇನೆ ಎಂದು ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸಚಿವ ರಮೇಶ್​ ಹೇಳಿದರು.

ಬಿಜೆಪಿ ಹೈಕಮಾಂಡ್‌ ನನಗೆ ಟಿಕೆಟ್‌ ನೀಡಲಿ-ಮುತಾಲಿಕ್‌ ಅತ್ತ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ವಿಜಯಪುರ ನಗರದಲ್ಲಿ ಪ್ರಮೋದ್ ಮುತಾಲಿಕ್ ಮಾತನಾಡಿದ್ದಾರೆ. ಬೆಳಗಾವಿ ಕ್ಷೇತ್ರದ ಬೈಎಲೆಕ್ಷನ್‌ನಲ್ಲಿ ಸ್ಪರ್ಧೆಗೆ ಬಯಸಿದ್ದೇನೆ. ಬಿಜೆಪಿ ಹೈಕಮಾಂಡ್‌ ನನಗೆ ಟಿಕೆಟ್‌ ನೀಡಲಿ ಎಂದು ಮುತಾಲಿಕ್‌ ಹೇಳಿದರು. ನನಗೆ ಟಿಕೆಟ್‌ ನೀಡದಿದ್ರೂ ಬಿಜೆಪಿ ಗೆಲುವಿಗೆ ಶ್ರಮಿಸುತ್ತೇನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದರು.

ಇದನ್ನೂ ಓದಿ: ‘ಹಿಂದುತ್ವವನ್ನ ಟೀಕೆ‌ ಮಾಡೋರು ಹಿಂದೂ ವಿರೋಧಿಗಳಲ್ಲ; RSS​​ನವರು ಜನರ ಬ್ರೇನ್​ ವಾಷ್​ ಮಾಡುತ್ತಿದ್ದಾರೆ’

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ