AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumkur News: ಕರ್ತವ್ಯ ಲೋಪದ ಕಾರಣಕ್ಕೆ ಒಂದು ಇಲಾಖೆಯಲ್ಲಿ ಸಸ್ಪೆಂಡ್, ಅದೇ ಅಧಿಕಾರಿ ಮತ್ತೊಂದು ಇಲಾಖೆಯ ಹುದ್ದೆಗೆ ನೇಮಕ

ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆಯಾ ಎಂಬ ಅನುಮಾನ ವ್ಯಕ್ತವಾಗಿದೆ. ಹೌದು ಅಕ್ರಮ ಎಸಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಮಾನತು ಮಾಡಿದ್ದ ಅಧಿಕಾರಿಗೆ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಇಲಾಖೆಯ ಹುದ್ದೆಗೆ ನೇಮಕ ಮಾಡಿಕೊಂಡಿದ್ದಾರೆ.

Tumkur News: ಕರ್ತವ್ಯ ಲೋಪದ ಕಾರಣಕ್ಕೆ ಒಂದು ಇಲಾಖೆಯಲ್ಲಿ ಸಸ್ಪೆಂಡ್, ಅದೇ ಅಧಿಕಾರಿ ಮತ್ತೊಂದು ಇಲಾಖೆಯ ಹುದ್ದೆಗೆ ನೇಮಕ
ಅಮಾನತು ಪತ್ರ (ಎಡಚಿತ್ರ) ನೇಮಕವಾದ ಅಧಿಸೂಚನೆ (ಬಲಚಿತ್ರ)
ಪ್ರಸನ್ನ ಗಾಂವ್ಕರ್​
| Edited By: |

Updated on:Jul 22, 2023 | 1:34 PM

Share

ತುಮಕೂರು ಜು.22: ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಸಚಿವರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆಯಾ ಎಂಬ ಅನುಮಾನ ವ್ಯಕ್ತವಾಗಿದೆ. ಹೌದು ಅಕ್ರಮ ಎಸಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಅಮಾನತು ಮಾಡಿದ್ದ ಅಧಿಕಾರಿಯು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರ ಲೋಕೋಪಯೋಗಿ ಇಲಾಖೆಗೆ ನೇಮಕವಾಗಿದ್ದಾರೆ. ಇದು ಸಚಿವರ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡಿಸಿದೆ.

ತುಮಕೂರು ವಿಭಾಗದ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕರ ಇಂಜಿನಿಯರ್ ಎಸ್.ಆರ್ ಹರೀಶ್ ಟೆಂಡರ್ ಕರೆಯುವಲ್ಲಿ ವಿಳಂಬ ಮಾಡಿದ್ದರು. ಇದರಿಂದ ಸರ್ಕಾರದ ಬೊಕ್ಕಸಕ್ಕೆ 2 ಕೋಟಿ 76 ಲಕ್ಷ ನಷ್ಟವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಯನ್ನು ಅಮಾನತು ಮಾಡಿ ಇಲಾಖಾ ತನಿಖೆಗೆ ವಹಿಸಿದ್ದರು. ಆದರೆ ಅಮಾನತು ಮಾಡಿ ಒಂದು ತಿಂಗಳು ಕಳೆಯುವದರೊಳಗೆ ಅಧಿಕಾರಿ ಎಸ್​.ಆರ್​ ಹರೀಶ್ ಅವರು ತುಮಕೂರು ವಿಭಾಗದಲ್ಲೇ ಲೋಕೋಪಯೋಗಿ ಕಾರ್ಯಪಾಲಕ‌ ಇಂಜಿನಿಯರ್ ​ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹುದ್ದೆಯನ್ನು ಸಚಿವ ಸತೀಶ್ ಜಾರಕಿಹೊಳಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: 361 ಪ್ರೌಢಶಾಲೆಗಳ ಮೇಲ್ದರ್ಜೆಗೆ ತಡೆ: ಕರ್ನಾಟಕ ಸರ್ಕಾರ

ಕರ್ತವ್ಯ ಲೋಪದ ಕಾರಣಕ್ಕೆ ಒಂದು ಇಲಾಖೆಯಲ್ಲಿ ಸಸ್ಪೆಂಡ್ ಮಾಡಲಾಗಿದ್ದ ಅಧಿಕಾರಿಗೆ ಮತ್ತೊಂದು ಇಲಾಖೆಯ ಹುದ್ದೆಗೆ ನೇಮಕ ಮಾಡಿದ್ದು ಸಚಿವರ ಕಾರ್ಯವೈಖರಿ ಬಗ್ಗೆ ಅನುಮಾನ ಶುರುವಾಗಿದೆ. ಮತ್ತು ಹೀಗಾದರೆ ಭ್ರಷ್ಟ ಅಧಿಕಾರಿಗಳಿಗೆ ಕಡಿವಾಣ ಹಾಕುವುದು ಹೇಗೆ ಎಂಬ ಪ್ರಶ್ನೆ ಜನರಲ್ಲಿ ಉದ್ಭವವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:27 pm, Sat, 22 July 23

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ