AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರು ಸದನದಲ್ಲಿ ಮಾತಾಡೋಕೆ ನಿಂತರೆ ಸಿಎಂ ಯಡಿಯೂರಪ್ಪ ‌ಕೂಡ ಸುಮ್ಮನಾಗ್ತಾರೆ -ಶಾಸಕರನ್ನು ಕೊಂಡಾಡಿದ ಶ್ರೀರಾಮುಲು

ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಸದನದಲ್ಲಿ ಮಾತನಾಡುತ್ತ ನಿಂತರೆ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಸುಮ್ಮನಾಗ್ತಾರೆ ಎಂದು ಶ್ರೀರಾಮುಲು ಹೇಳಿದರು. ರೈತರ ವಿಚಾರ, ನೀರಾವರಿ ವಿಚಾರದಲ್ಲಿ ಇವರು ಮುಂದಿರುತ್ತಾರೆ ಎಂದು ಶಾಸಕ ಶಿವಲಿಂಗೇಗೌಡರನ್ನ ಸಚಿವ ಬಿ.ಶ್ರೀರಾಮುಲು ಹಾಡಿ ಹೊಗಳಿದರು.

ಇವರು ಸದನದಲ್ಲಿ ಮಾತಾಡೋಕೆ ನಿಂತರೆ ಸಿಎಂ ಯಡಿಯೂರಪ್ಪ ‌ಕೂಡ ಸುಮ್ಮನಾಗ್ತಾರೆ -ಶಾಸಕರನ್ನು ಕೊಂಡಾಡಿದ  ಶ್ರೀರಾಮುಲು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
KUSHAL V
| Edited By: |

Updated on: Mar 13, 2021 | 5:45 PM

Share

ಹಾಸನ: ರಾಜಕೀಯದಲ್ಲಿ ಆ ಜಾತಿ ಈ ಜಾತಿ ಎಂದು ಹೇಳುತ್ತೇವೆ. ಆದ್ರೆ ಮಕ್ಕಳಲ್ಲಿ ಸರ್ವಧರ್ಮತ್ವವನ್ನ ಶಿಕ್ಷಕರು ಬೆಳೆಸುತ್ತಾರೆ ಎಂದು ರಾಮನಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆ ಉದ್ಘಾಟನೆ ವೇಳೆ ಸಚಿವ ಶ್ರೀರಾಮುಲು ಮಾತನಾಡಿದರು. ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಮನಹಳ್ಳಿಯಲ್ಲಿ ಸಚಿವ ಶ್ರೀರಾಮುಲು ವಸತಿ ಶಾಲೆ ಉದ್ಘಾಟನೆ ಮಾಡಿದರು.

ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಸದನದಲ್ಲಿ ಮಾತನಾಡುತ್ತ ನಿಂತರೆ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಸುಮ್ಮನಾಗ್ತಾರೆ ಎಂದು ಶ್ರೀರಾಮುಲು ಹೇಳಿದರು. ರೈತರ ವಿಚಾರ, ನೀರಾವರಿ ವಿಚಾರದಲ್ಲಿ ಇವರು ಮುಂದಿರುತ್ತಾರೆ ಎಂದು ಶಾಸಕ ಶಿವಲಿಂಗೇಗೌಡರನ್ನ ಸಚಿವ ಬಿ.ಶ್ರೀರಾಮುಲು ಹಾಡಿ ಹೊಗಳಿದರು.

SHIVALINGEGOWDA 1

ಶಿವಲಿಂಗೇಗೌಡ

ಶಿವಲಿಂಗೇಗೌಡರು ಹಿಂದೆ ಕೈಕಟ್ಟಿ ನಿಂತುಕೊಂಡ್ರೇ ಅವರು ಸಾಕಷ್ಟು ವಿಷಯ ಮಾತಾನಾಡುತ್ತಾರೆ. ಕೆಲವರು ಸುಮ್ಮನೇ ಚಟಕ್ಕೆ ಏನೇನೊ ಮಾತನಾಡುತ್ತಾರೆ. ಆದ್ರೆ ಅವರ ಮಾತು ಯಾರಿಗೂ ಅರ್ಥ ಆಗೋದಿಲ್ಲ. ಆದರೆ, ಶಿವಲಿಂಗೇಗೌಡರು ಎಲ್ಲರಿಗೂ ಅರ್ಥ ಆಗೋ ರೀತಿಯಲ್ಲಿ ಅಧ್ಯಯನ ಮಾಡಿಕೊಂಡು ಬಂದು ಮಾತಾಡ್ತಾರೆ. ಅವರು ಎಷ್ಟೆಲ್ಲಾ ಓದಿಕೊಂಡು ಬಂದು ಮಾತಾಡ್ತಾರೆ ಎಂದು ನಮಗೆ ಅನ್ನಿಸುತ್ತೆ ಎಂದು ಶಾಸಕರ ಜನಪರ ಕಾಳಜಿಯನ್ನು ಸಚಿವ ಶ್ರೀರಾಮುಲು ಕೊಂಡಾಡಿದರು.

‘ಶ್ರೀರಾಮುಲುಗೆ ರಾಜ್ಯ ರಾಜಕೀಯದಲ್ಲಿ ಉನ್ನತ ಭವಿಷ್ಯ ಇದೆ’ ರಾಜಕಾರಣದಲ್ಲಿ ಸರಳತೆ ಇರಬೇಕು, ತಾಳ್ಮೆ ಇರಬೇಕು. ಶ್ರೀರಾಮುಲುಗೆ ಈ ಎಲ್ಲಾ ಗುಣಗಳಿವೆ. ಶ್ರೀರಾಮುಲುಗೆ ರಾಜ್ಯ ರಾಜಕೀಯದಲ್ಲಿ ಉನ್ನತ ಭವಿಷ್ಯವಿದೆ. ಇದನ್ನ ನಾನು ಸದನದಲ್ಲೂ ಹೇಳಿದ್ದೆ, ಈಗಲೂ ಹೇಳ್ತೀನಿ ಎಂದು ಸಚಿವ ಶ್ರೀರಾಮುಲುರನ್ನ ಶಾಸಕ ಶಿವಲಿಂಗೇಗೌಡ ಹಾಡಿ ಹೊಗಳಿದರು.

ಶ್ರೀರಾಮುಲು ಅರೋಗ್ಯ ಸಚಿವರಾಗಿದ್ದಾಗ ಒಳ್ಳೇ ಕೆಲಸ ಮಾಡಿದ್ದರು. ಈಗ ಅವರಿಗೆ ಹೇಳಿ ಮಾಡಿಸಿದಂಥ ಸಮಾಜ ಕಲ್ಯಾಣ ಇಲಾಖೆ ಸಿಕ್ಕಿದೆ. ಅವರು ಅಲ್ಲಿಯೂ ಒಳ್ಳೇ ಕೆಲಸ ಮಾಡುತ್ತಾರೆ ಎಂದು ವೇದಿಕೆಯಲ್ಲಿ ಮಾತನಾಡುವ ವೇಳೆ ಸಮಾಜ ಕಲ್ಯಾಣ ಸಚಿವರನ್ನ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕೊಂಡಾಡಿದರು.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕಾಂಗ್ರೆಸ್‌ ಮೇಲೆಯೇ ಆರೋಪ ಮಾಡ್ತಿದ್ದಾರೆ, ಮಾಡಲಿ ಬಿಡಿ: ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!