AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಅಧಿಕಾರಿಗಳ ಜೊತೆ ಶ್ರೀರಾಮುಲು ಸಭೆ: ಸಾರಿಗೆ ನೌಕರರ ಅಮಾನತು ವಾಪಸ್ ಪಡೆಯಲು ನಿರ್ಧಾರ?

4 ನಿಗಮಗಳ ಸಾರಿಗೆ ಅಧಿಕಾರಿಗಳ ಜೊತೆ ಸಭೆ ನಡೆದಿತ್ತು. ಅಮಾನತುಗೊಂಡಿರುವ ನೌಕರರನ್ನ ಮರಳಿ ಕೆಲಸಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ಸಾರಿಗೆ ಅಧಿಕಾರಿಗಳ ಜೊತೆ ಶ್ರೀರಾಮುಲು ಸಭೆ: ಸಾರಿಗೆ ನೌಕರರ ಅಮಾನತು ವಾಪಸ್ ಪಡೆಯಲು ನಿರ್ಧಾರ?
ಸಾರಿಗೆ ಅಧಿಕಾರಿಗಳ ಜೊತೆ ಶ್ರೀರಾಮುಲು ಸಭೆ
TV9 Web
| Edited By: |

Updated on:Sep 13, 2021 | 4:21 PM

Share

ಬೆಂಗಳೂರು: ಸಾರಿಗೆ ನೌಕರರ ಅಮಾನತು ವಾಪಸ್ ಪಡೆಯಲು ನಿರ್ಧಾರ ಕೈಗೊಳ್ಳಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಮಾನತು ಬಹುತೇಕ ವಾಪಸ್ ಪಡೆಯಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ನಾಳೆ ಸಂಜೆಯೊಳಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನಾಳೆ (ಸೆಪ್ಟೆಂಬರ್ 14) ಈ ಸಂಬಂಧ ಸಾರಿಗೆ ಸಚಿವ ಬಿ. ಶ್ರೀರಾಮುಲು ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಇಂದು ಸಾರಿಗೆ ಅಧಿಕಾರಿಗಳ ಜೊತೆ ಸಚಿವ ಶ್ರೀರಾಮುಲು ಮಹತ್ವದ ಸಭೆ ನಡೆಸಿದ್ದರು. ವಿಧಾನಸೌಧದ ಕಚೇರಿಯಲ್ಲಿ ಇಂದು ಸಭೆ ನಡೆದಿತ್ತು. ನೌಕರರ ಅಮಾನತು ಬಗ್ಗೆ ಸಾರಿಗೆ ಸಚಿವ ಶ್ರೀರಾಮುಲು ಮಾಹಿತಿ ಪಡೆದಿದ್ದರು. 4 ನಿಗಮಗಳ ಸಾರಿಗೆ ಅಧಿಕಾರಿಗಳ ಜೊತೆ ಸಭೆ ನಡೆದಿತ್ತು. ಅಮಾನತುಗೊಂಡಿರುವ ನೌಕರರನ್ನ ಮರಳಿ ಕೆಲಸಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ಹಲವು ಕಾರಣಗಳಿಂದ ಕೆಲ ಸಾರಿಗೆ ನೌಕರನ್ನಾಮಾನತುಗೊಳಿಸಲಾಗಿತ್ತು. ಇತ್ತೀಚೆಗೆ ಕೊವಿಡ್ ಸಮಯದಲ್ಲಿ ಪ್ರತಿಭಟನೆ ನಡೆಸಿದ್ದ ಕೆಲ ನೌಕರರನ್ನ ಅಮಾನತುಗೊಳಿಸಲಾಗಿತ್ತು. ಅಮಾನತು ಹಿಂಪಡೆಯುವಂತೆ ಸಾಕಷ್ಟು ಮನವಿ ಬಂದಿತ್ತು. ಆ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆ ಸಚಿವ ಶ್ರೀರಾಮುಲು ಸಭೆ ನಡೆಸಿದ್ದರು. ಸಭೆಯಲ್ಲಿ ಎಷ್ಟು ನೌಕರರು ಅಮಾನತು ಆಗಿದ್ದಾರೆ, ಎಷ್ಟು ನೌಕರರ ವಜಾ ಆಗಿದೆ ಹಾಗೂ ಎಷ್ಟು ನೌಕರರ ಮೇಲೆ ಮೇಲೆ ಎಫ್​ಐಆರ್ ದಾಖಲಾಗಿದೆ ಎನ್ನುವ ಮಾಹಿತಿ ಪಡೆದಿದ್ದಾರೆ. ಬಹುತೇಕ ಅಮಾನತು ಹಾಗೂ ವಜಾಗೊಂಡ ನೌಕರರನ್ನ ವಾಪಸ್ ಕೆಲಸಕ್ಕೆ ಸೇರಿಸಿಕೊಳ್ಳವ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ. ನಾಳೆ ಸಂಜೆಯೊಳಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಾರಿಗೆ ನೌಕಕರ ವಜಾ ಆದೇಶ ಹಿಂಪಡೆಯಲು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ

ಇದನ್ನೂ ಓದಿ: ಓಮ್ನಿ ಆ್ಯಂಬುಲೆನ್ಸ್ ಬಳಕೆ ರೋಗಿಗಳಿಗೆ ಸುರಕ್ಷಿತವಲ್ಲ; ತನ್ನದೇ ಆದೇಶ ಉಲ್ಲಂಘಿಸಿದ ಸಾರಿಗೆ ಇಲಾಖೆ

Published On - 4:11 pm, Mon, 13 September 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ