AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಅಧಿಕಾರಿಗಳ ಜೊತೆ ಶ್ರೀರಾಮುಲು ಸಭೆ: ಸಾರಿಗೆ ನೌಕರರ ಅಮಾನತು ವಾಪಸ್ ಪಡೆಯಲು ನಿರ್ಧಾರ?

4 ನಿಗಮಗಳ ಸಾರಿಗೆ ಅಧಿಕಾರಿಗಳ ಜೊತೆ ಸಭೆ ನಡೆದಿತ್ತು. ಅಮಾನತುಗೊಂಡಿರುವ ನೌಕರರನ್ನ ಮರಳಿ ಕೆಲಸಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ಸಾರಿಗೆ ಅಧಿಕಾರಿಗಳ ಜೊತೆ ಶ್ರೀರಾಮುಲು ಸಭೆ: ಸಾರಿಗೆ ನೌಕರರ ಅಮಾನತು ವಾಪಸ್ ಪಡೆಯಲು ನಿರ್ಧಾರ?
ಸಾರಿಗೆ ಅಧಿಕಾರಿಗಳ ಜೊತೆ ಶ್ರೀರಾಮುಲು ಸಭೆ
Follow us
TV9 Web
| Updated By: ganapathi bhat

Updated on:Sep 13, 2021 | 4:21 PM

ಬೆಂಗಳೂರು: ಸಾರಿಗೆ ನೌಕರರ ಅಮಾನತು ವಾಪಸ್ ಪಡೆಯಲು ನಿರ್ಧಾರ ಕೈಗೊಳ್ಳಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಮಾನತು ಬಹುತೇಕ ವಾಪಸ್ ಪಡೆಯಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ನಾಳೆ ಸಂಜೆಯೊಳಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನಾಳೆ (ಸೆಪ್ಟೆಂಬರ್ 14) ಈ ಸಂಬಂಧ ಸಾರಿಗೆ ಸಚಿವ ಬಿ. ಶ್ರೀರಾಮುಲು ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಇಂದು ಸಾರಿಗೆ ಅಧಿಕಾರಿಗಳ ಜೊತೆ ಸಚಿವ ಶ್ರೀರಾಮುಲು ಮಹತ್ವದ ಸಭೆ ನಡೆಸಿದ್ದರು. ವಿಧಾನಸೌಧದ ಕಚೇರಿಯಲ್ಲಿ ಇಂದು ಸಭೆ ನಡೆದಿತ್ತು. ನೌಕರರ ಅಮಾನತು ಬಗ್ಗೆ ಸಾರಿಗೆ ಸಚಿವ ಶ್ರೀರಾಮುಲು ಮಾಹಿತಿ ಪಡೆದಿದ್ದರು. 4 ನಿಗಮಗಳ ಸಾರಿಗೆ ಅಧಿಕಾರಿಗಳ ಜೊತೆ ಸಭೆ ನಡೆದಿತ್ತು. ಅಮಾನತುಗೊಂಡಿರುವ ನೌಕರರನ್ನ ಮರಳಿ ಕೆಲಸಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ಹಲವು ಕಾರಣಗಳಿಂದ ಕೆಲ ಸಾರಿಗೆ ನೌಕರನ್ನಾಮಾನತುಗೊಳಿಸಲಾಗಿತ್ತು. ಇತ್ತೀಚೆಗೆ ಕೊವಿಡ್ ಸಮಯದಲ್ಲಿ ಪ್ರತಿಭಟನೆ ನಡೆಸಿದ್ದ ಕೆಲ ನೌಕರರನ್ನ ಅಮಾನತುಗೊಳಿಸಲಾಗಿತ್ತು. ಅಮಾನತು ಹಿಂಪಡೆಯುವಂತೆ ಸಾಕಷ್ಟು ಮನವಿ ಬಂದಿತ್ತು. ಆ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆ ಸಚಿವ ಶ್ರೀರಾಮುಲು ಸಭೆ ನಡೆಸಿದ್ದರು. ಸಭೆಯಲ್ಲಿ ಎಷ್ಟು ನೌಕರರು ಅಮಾನತು ಆಗಿದ್ದಾರೆ, ಎಷ್ಟು ನೌಕರರ ವಜಾ ಆಗಿದೆ ಹಾಗೂ ಎಷ್ಟು ನೌಕರರ ಮೇಲೆ ಮೇಲೆ ಎಫ್​ಐಆರ್ ದಾಖಲಾಗಿದೆ ಎನ್ನುವ ಮಾಹಿತಿ ಪಡೆದಿದ್ದಾರೆ. ಬಹುತೇಕ ಅಮಾನತು ಹಾಗೂ ವಜಾಗೊಂಡ ನೌಕರರನ್ನ ವಾಪಸ್ ಕೆಲಸಕ್ಕೆ ಸೇರಿಸಿಕೊಳ್ಳವ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ. ನಾಳೆ ಸಂಜೆಯೊಳಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಾರಿಗೆ ನೌಕಕರ ವಜಾ ಆದೇಶ ಹಿಂಪಡೆಯಲು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ

ಇದನ್ನೂ ಓದಿ: ಓಮ್ನಿ ಆ್ಯಂಬುಲೆನ್ಸ್ ಬಳಕೆ ರೋಗಿಗಳಿಗೆ ಸುರಕ್ಷಿತವಲ್ಲ; ತನ್ನದೇ ಆದೇಶ ಉಲ್ಲಂಘಿಸಿದ ಸಾರಿಗೆ ಇಲಾಖೆ

Published On - 4:11 pm, Mon, 13 September 21

ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ