ಟಿವಿ9 ವರದಿ ಬಳಿಕ ಎಚ್ಚೆತ್ತ ಸರ್ಕಾರ, ಟ್ವೀಟ್ ಮಾಡಿ ಸಚಿವ ಸುಧಾಕರ್ ಹೇಳಿದ್ದೇನು?

[lazy-load-videos-and-sticky-control id=”15u9SkjDFQA”] ಬೆಂಗಳೂರು: ಟಿವಿ9ನಲ್ಲಿ ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಬಯಲಾಗುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಟಿವಿ9 ವರದಿ ಪ್ರಸ್ತಾಪಿಸಿ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ಚಿಕಿತ್ಸೆ ಕೊಡದ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ. ಕೊರೊನಾ ಬಿಕ್ಕಟ್ಟು ಸಂದರ್ಭದಲ್ಲಿಯೂ ಬೆಂಗಳೂರಿನ ಕೆಲ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿಲ್ಲ. ನೆಗಡಿ, ಕೆಮ್ಮು, ಮೈ-ಕೈ ನೋವಿಗೂ ಚಿಕಿತ್ಸೆ ನೀಡುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ರೋಗಿಗಳ ಬಳಿ ಹಣ ಪೀಕುತ್ತಿವೆ. ಬಿಬಿಎಂಪಿ ಲೆಟರ್ ತರಲು ಉಡಾಫೆ ಉತ್ತರ ನೀಡುತ್ತಿವೆ. ಖಾಸಗಿ ಆಸ್ಪತ್ರೆ […]

ಟಿವಿ9 ವರದಿ ಬಳಿಕ ಎಚ್ಚೆತ್ತ ಸರ್ಕಾರ, ಟ್ವೀಟ್ ಮಾಡಿ ಸಚಿವ ಸುಧಾಕರ್ ಹೇಳಿದ್ದೇನು?
ಡಾ. ಕೆ.ಸುಧಾಕರ್
ಆಯೇಷಾ ಬಾನು Edited By:

Updated on: Jul 10, 2020 | 1:25 PM

[lazy-load-videos-and-sticky-control id=”15u9SkjDFQA”]

ಬೆಂಗಳೂರು: ಟಿವಿ9ನಲ್ಲಿ ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಬಯಲಾಗುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಟಿವಿ9 ವರದಿ ಪ್ರಸ್ತಾಪಿಸಿ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ಚಿಕಿತ್ಸೆ ಕೊಡದ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ.

ಕೊರೊನಾ ಬಿಕ್ಕಟ್ಟು ಸಂದರ್ಭದಲ್ಲಿಯೂ ಬೆಂಗಳೂರಿನ ಕೆಲ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿಲ್ಲ. ನೆಗಡಿ, ಕೆಮ್ಮು, ಮೈ-ಕೈ ನೋವಿಗೂ ಚಿಕಿತ್ಸೆ ನೀಡುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ರೋಗಿಗಳ ಬಳಿ ಹಣ ಪೀಕುತ್ತಿವೆ. ಬಿಬಿಎಂಪಿ ಲೆಟರ್ ತರಲು ಉಡಾಫೆ ಉತ್ತರ ನೀಡುತ್ತಿವೆ. ಖಾಸಗಿ ಆಸ್ಪತ್ರೆ ಸಿಬ್ಬಂದಿ ಮಾತಾಡಿರುವ ಬಗ್ಗೆ, ರೋಗಿಗಳು ಪರದಾಡಿರುವ ದೃಶ್ಯ ಸಹ ಟಿವಿ9ನಲ್ಲಿ ತೋರಿಸಿದ್ದಾರೆ.

ಸಚಿವರಾದ ನನ್ನ ಗಮನಕ್ಕೂ ಈ ವಿಚಾರ ಬಂದಿದೆ. ಇಂತಹ ಅವ್ಯವಸ್ಥೆಗೆ ಕಡಿವಾಣ ಹಾಕಲು ಸರ್ಕಾರ ಬದ್ಧ. ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಟಿವಿ9 ವರದಿ ಪ್ರಸ್ತಾಪಿಸಿ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

Published On - 11:00 am, Fri, 10 July 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us