AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸುಧಾಕರ್ ಸಿಬ್ಬಂದಿ ಮಧ್ಯೆಯೇ ಡಿಶುಂ ಡಿಶುಂ; ಮನೆ ಮುಂದೆಯೇ ಸೀನ್ ಕ್ರಿಯೇಟ್

‘ನಾನು ಟೀ ಮಾರಾಟಗಾರನ ಮೇಲೆ ಹಲ್ಲೆ ನಡೆಸಿರುವುದನ್ನು ನೀನು ಸಚಿವರಿಗೆ ಹೇಳಿದ್ದೀಯಾ’ ಎಂದು ಕೂಗುತ್ತಾ ಸೋಮಶೇಖರ್ ಮೇಲೆ ತಿಮ್ಮಯ್ಯ ಕೈಎತ್ತಿದ್ದಾನೆ. ಈ ಘಟನೆ ಸಚಿವ ಸುಧಾಕರ್ ಮನೆ ಮುಂದಿನ ರಸ್ತೆಯಲ್ಲೇ ನಡೆದಿದೆ.

ಸಚಿವ ಸುಧಾಕರ್ ಸಿಬ್ಬಂದಿ ಮಧ್ಯೆಯೇ ಡಿಶುಂ ಡಿಶುಂ; ಮನೆ ಮುಂದೆಯೇ ಸೀನ್ ಕ್ರಿಯೇಟ್
ಸಿಬ್ಬಂದಿ ನಡುವೆ ಜಗಳ ನಡೆದಿದ್ದೇಕೆ?
guruganesh bhat
|

Updated on:Mar 19, 2021 | 1:26 PM

Share

ಬೆಂಗಳೂರು: ರಾಜಕಾರಣಿಗಳ ಜಗಳ, ಗಲಾಟೆ ಕೇಳಿಸಿಕೊಂಡು ಬೇಸರವಾಗಿದ್ದರೆ ಇಲ್ಲೊಂದು ವಿಭಿನ್ನ ಘಟನೆ ನಡೆದಿದೆ. ಸಚಿವ ಡಾ.ಕೆ.ಸುಧಾಕರ್ ಮನೆ ಮುಂದೆ ಗನ್ಮ್ಯಾನ್ – ಚಾಲಕ ಕಿತ್ತಾಟ ಮಾಡಿಕೊಂಡಿದ್ದಾರೆ. ಇಬ್ಬರೂ ಸಿಬ್ಬಂದಿಗಳು ರಸ್ತೆಯಲ್ಲಿ ಬಿದ್ದು ಹೊಡೆದಾಡಿಕೊಂಡಿದ್ದಾರೆ. ಅವರಿಬ್ಬರ ಜಗಳ ಬಿಡಿಸಲು ಪೊಲೀಸ್ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ. ಸಚಿವರ ಸಿಬ್ಬಂದಿಗಳ ಮಾರಾಮಾರಿ ಇದೀಗ ನಗೆಪಾಟಲಿಗೆ ಈಡಾಗುತ್ತಿದೆ. ಹೊಡೆದಾಟದ ವಿಡಿಯೋ ವೈರಲ್ ಆಗಿದೆ.

ಸುಧಾಕರ್ ಮನೆಯ ಖಾಸಗಿ ಚಾಲಕ ಸೋಮಶೇಖರ್ ಮತ್ತು ಗನ್‌ಮ್ಯಾನ್ ತಿಮ್ಮಯ್ಯ ಅವರುಗಳೇ ಪರಸ್ಪರ ಬೀದಿಯಲ್ಲಿ ಹೊಡೆದಾಟ ಮಾಡಿಕೊಂಡವರು. ನಿನ್ನೆ ಡಾ.ಕೆ.ಸುಧಾಕರ್ ಅವರು ಮನೆ ಬಳಿ ಬರುವ ವೇಳೆಗೆ ಅಂಗವಿಕಲ ವ್ಯಕ್ತಿಯೋರ್ವರು ಟೀ ಮಾರಾಟ ಮಾಡಲು ಬಂದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಸಚಿವ ಡಾ.ಕೆ.ಸುಧಾಕರ್ ಗನ್​ಮ್ಯಾನ್ ತಿಮ್ಮಯ್ಯ, ಟೀ ಮಾರುವ ವಿಶೇಷಚೇತನ ವ್ಯಕ್ತಿಗೆ ಹೊಡೆದಿದ್ದಾರೆ. ತಿಮ್ಮಯ್ಯ ವಿಶೇಷಚೇತನ ವ್ಯಕ್ತಿಯ ಮೇಲೆ ಕೈಮಾಡಿರುವುದು ಘಟನೆ ನೊಡಿದ ಎಲ್ಲರಿಗೂ ಬೇಸರ ತರಿಸಿದೆ.

Bng Dr K Sudhakar Gun Fight 3

ಸಿಬ್ಬಂದಿಗಳ ನಡುವೆ ಮಾರಾಮಾರಿ

Bng Dr K Sudhakar Gun Fight 2

ನಡುರಸ್ತೆಯಲ್ಲೇ ಹೊಡೆದಾಟ

ನಿನ್ನೆ ನಡೆದ ಘಟನೆಯೇ ನಿನ್ನೆ ಇಡೀ ರಾತ್ರಿ ತಿಮ್ಮಯ್ಯರ ಮನಸಿನಲ್ಲಿ ಕಾಡಿದೆ.  ಘಟನೆ ನೋಡಿದ್ದ ಖಾಸಗಿ ವಾಹನ ಚಾಲಕ ಸೋಮಶೇಖರ್ ಸಚಿವರಿಗೆ ದೂರು ಕೊಟ್ಟಿರಬಹುದಾ ಎಂಬ ಅನುಮಾನ ತಲೆದೋರಿದೆ.  ಇದೇ ಅನುಮಾನದಿಂದ ಇಂದು ಬೆಳಗ್ಗೆ ಸೋಮಶೇಖರ್ ಮೇಲೆ ಏರಿ ಹೋಗಿದ್ದಾರೆ. ‘ನಾನು ಟೀ ಮಾರಾಟಗಾರನ ಮೇಲೆ ಹಲ್ಲೆ ನಡೆಸಿರುವುದನ್ನು ನೀನು ಸಚಿವರಿಗೆ ಹೇಳಿದ್ದೀಯಾ’ ಎಂದು ಕೂಗುತ್ತಾ ಸೋಮಶೇಖರ್ ಮೇಲೆ ತಿಮ್ಮಯ್ಯ ಕೈಎತ್ತಿದ್ದಾನೆ. ಈ ಘಟನೆ ಸಚಿವ ಸುಧಾಕರ್ ಮನೆ ಮುಂದಿನ ರಸ್ತೆಯಲ್ಲೇ ನಡೆದಿದೆ. ಇದು ನಗೆಪಾಟಲಿಗೆ ಕಾರಣವಾಗಿದೆ.

ಡಾ.ಕೆ.ಸುಧಾಕರ್ ಅವರ ಮನೆ ಸಮೀಪವೇ ರಮೇಶ್ ಜಾರಕಿಹೊಳಿ ಅವರ ಮನೆಯಿದೆ. ಇಡೀ ದಿನ ಮಾಧ್ಯಮ ಸಿಬ್ಬಂದಿಗಳು ಅವರ ಮನೆ ಮುಂದೆ ಇರುವುದು ಇತ್ತೀಚಿಗೆ ವಾಡಿಕೆಯಾಗಿದೆ. ಅಲ್ಲದೇ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಆತಂಕದಿಂದ ಡಾ.ಕೆ.ಸುಧಾಕರ್ ಅವರ ಮನೆ ಬಳಿಯೂ ವಿವರ ಪಡೆಯಲು ಮಾಧ್ಯಮ ಪ್ರತಿನಿಧಿಗಳು ಇರುತ್ತಾರೆ. ಈ ಎಲ್ಲ ಅಂಶಗಳ ಅರಿವು ಓರ್ವ ಜನಪ್ರತಿನಿಧಿಯ ಸಿಬ್ಬಂದಿಗಳಿಗೆ ಖಂಡಿತ ಇರುತ್ತದೆ. ಆದರೂ ಹೀಗೆ ನಡುರಸ್ತೆಯಲ್ಲೇ ಸಾರ್ವಜನಿಕವಾಗಿ ಹೊಡೆದಾಟ ಮಾಡಿಕೊಂಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Published On - 1:07 pm, Fri, 19 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!