AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಆಸ್ಪತ್ರೆಯ ಅವ್ಯವ್ಯಸ್ಥೆ ಬಗ್ಗೆ ಸಚಿವರ ಬೆಂಬಲಿಗನಿಂದಲೇ ಆರೋಗ್ಯ ಸಚಿವರಿಗೆ ಪತ್ರ

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್​ಗಳು ಬಳಕೆ ಮಾಡುತ್ತಿಲ್ಲ. ಹೀಗಾಗಿ ತಾಲೂಕು ಆಸ್ಪತ್ರೆಯ ವಿರುದ್ಧ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ಗೆ ಅವರ ಬೆಂಬಲಿಗ ಪತ್ರ ಬರೆದಿದ್ದಾರೆ. ಗೌರಿಬಿದನೂರು ತಾಲೂಕು ಆಸ್ಪತ್ರೆಯಲ್ಲಿರುವ ವೆಂಟಿಲೇಟರ್​ಗಳ ಬಳಕೆ ಮಾಡುತ್ತಿಲ್ಲ. ಇದರಿಂದ ಉಸಿರಾಟ ಸಮಸ್ಯೆ ಇರುವ ಕೊರೊನಾ ಸೋಂಕಿತರು ಪರದಾಟ ಪಡುತ್ತಿದ್ದಾರೆ.

ಚಿಕ್ಕಬಳ್ಳಾಪುರ ಆಸ್ಪತ್ರೆಯ ಅವ್ಯವ್ಯಸ್ಥೆ ಬಗ್ಗೆ ಸಚಿವರ ಬೆಂಬಲಿಗನಿಂದಲೇ ಆರೋಗ್ಯ ಸಚಿವರಿಗೆ ಪತ್ರ
ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ತಾಲೂಕು ಆಸ್ಪತ್ರೆ ಅವ್ಯವ್ಯಸ್ಥೆ ಬಗ್ಗೆ ಪತ್ರ
sandhya thejappa
|

Updated on: May 22, 2021 | 9:51 AM

Share

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ನೀಡುವ ಚಿಕಿತ್ಸೆ ಬಗ್ಗೆ ಒಂದಲ್ಲ ಒಂದು ಸಮಸ್ಯೆಗಳು ಹುಟ್ಟಿಕೊಳ್ಳುತ್ತಿವೆ. ರಾಜ್ಯದ ಕೆಲ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಸೋಂಕಿತರು ಸಾವನ್ನಪ್ಪುತ್ತಿದ್ದರೆ, ಇನ್ನು ಕೆಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಂಬಂಧಿಸಿದ ಉಪಕರಣಗಳು ಇಲ್ಲದೆ ಮೃತಪಡುತ್ತಿದ್ದಾರೆ. ಅಲ್ಲದೆ ಎಲ್ಲವೂ ಲಭ್ಯವಿದ್ದರೂ ಆಸ್ಪತ್ರೆ ಸಿಬ್ಬಂದಿಯ ಬೇಜಾವಾಬ್ದಾರಿಯಿಂದ ಬಳಕೆ ಮಾಡುತ್ತಿಲ್ಲ. ಈ ಬಗ್ಗೆ ಹಲವು ಆರೋಪಗಳು ಕೇಳಿಬಂದಿದೆ. ಸರ್ಕಾರ ಕೂಡಾ ಈ ಬಗ್ಗೆ ಗಮನ ಹರಿಸುತ್ತಲೇ ಇದೆ. ಆದರೆ ಆರೋಗ್ಯ ಸಚಿವ ತವರೂರಲ್ಲೇ ವೆಂಟಿಲೇಟರ್ ಸಮಸ್ಯೆ ಸದ್ಯ ದೊಡ್ಡ ಮಟ್ಟದಾಗಿ ಕಾಡುತ್ತಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್​ಗಳು ಬಳಕೆ ಮಾಡುತ್ತಿಲ್ಲ. ಹೀಗಾಗಿ ತಾಲೂಕು ಆಸ್ಪತ್ರೆಯ ವಿರುದ್ಧ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ಗೆ ಅವರ ಬೆಂಬಲಿಗ ಪತ್ರ ಬರೆದಿದ್ದಾರೆ. ಗೌರಿಬಿದನೂರು ತಾಲೂಕು ಆಸ್ಪತ್ರೆಯಲ್ಲಿರುವ ವೆಂಟಿಲೇಟರ್​ಗಳ ಬಳಕೆ ಮಾಡುತ್ತಿಲ್ಲ. ಇದರಿಂದ ಉಸಿರಾಟ ಸಮಸ್ಯೆ ಇರುವ ಕೊರೊನಾ ಸೋಂಕಿತರು ಪರದಾಟ ಪಡುತ್ತಿದ್ದಾರೆ. ಪಿ.ಎಂ.ಕೇರ್ ಫಂಡ್​ನಿಂದ ಖರೀದಿಸಿರುವ ವೆಂಟಿಲೇಟರ್​ಗಳು ವ್ಯರ್ಥವಾಗಿವೆ ಎಂದು ಸಚಿವರ ಬೆಂಬಲಿಗರಾದ ಬಿ.ಜಿ ವೇಣುಗೋಪಾಲ ರೆಡ್ಡಿ ಪತ್ರ ಬರೆದಿದ್ದಾರೆ.

10 ಆಕ್ಸಿಜನ್ ರೆಗ್ಯುಲೇಟರ್​ಗಳ ದೇಣಿಗೆ ತಾಲೂಕು ಆಸ್ಪತ್ರೆಗೆ ಗೌರಿಬಿದನೂರು ಪೊಲೀಸ್ ಠಾಣೆ ಇನ್ಸ್​​ಪೆಕ್ಟರ್ 10 ಆಕ್ಸಿಜನ್ ರೆಗ್ಯುಲೇಟರ್​ಗಳ ದೇಣಿಗೆ ನೀಡಿದ್ದಾರೆ. ದೇಣಿಗೆ ನೀಡಿದ್ದು ಇನ್ಸ್​​ಪೆಕ್ಟರ್​ ಶಶಿಧರ್ ಎಂದು ತಿಳಿದುಬಂದಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಮಾನವೀಯತೆ ಮೆರೆದ ಗೌರಿಬಿದನೂರು ಪೊಲೀಸ್ ಇನ್ಸ್​​ಪೆಕ್ಟರ್ ನೀಡಿರುವ 10 ಆಕ್ಸಿಜನ್ ರೆಗ್ಯುಲೇಟರ್​ಗಳ ದೇಣಿಗೆಯಿಂದ ಕೊರೊನಾ ಸೋಂಕಿತರಿಗೆ ಅನುಕೂಲವಾಗುತ್ತದೆ. ಆಸ್ಪತ್ರೆಯಲ್ಲಿ ಆಕ್ಸಿಜನ್ ರೆಗ್ಯುಲೇಟರ್​ಗಳ ಕೊರತೆ ಕಂಡುಬಂದಿತ್ತು. ಹೀಗಾಗಿ ಪೊಲೀಸ್ ಶಶಿಧರ್ ಸಹಾಯ ಮಾಡಿದ್ದಾರೆ. ಇವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊರೊನಾ ತಡೆಗೆ 4 ದಿನ ಲಾಕ್​ಡೌನ್​ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಚಿಕ್ಕಬಳ್ಳಾಪುರ ಜಿಲ್ಲೆ ಸಂಪೂರ್ಣ ಬಂದ್ ಮಾಡಲಾಗಿದೆ. ಜಿಲ್ಲೆಯಲ್ಲಿ 3ನೇ ದಿನ ಸಂಪೂರ್ಣ ಸ್ತಬ್ಧವಾಗಿದೆ. ಕೇವಲ ಹಾಲು ಮಾರಾಟಕ್ಕೆ ಮಾತ್ರ ಅವಕಾಶವಿದೆ. ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಜಿಲ್ಲೆಯಾದ್ಯಂತ ಪೊಲೀಸರು ನಿಗಾ ವಹಿಸುತ್ತಿದ್ದಾರೆ. ದಿನಸಿ ತರಕಾರಿ ಸಂತೆ ಮಾರುಕಟ್ಟೆಗಳು ಸೇರಿ ಸಂಪೂರ್ಣ ಬಂದ್ ಆಗಿದ್ದು, ಜನರು ಅನಗತ್ಯವಾಗಿ ಮನೆಯಿಂದ ಆಚೆ ಬರದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಇದನ್ನೂ ಓದಿ

ಮುಖ್ಯಮಂತ್ರಿಗಳೇ, ಆರೋಗ್ಯ ಸಚಿವರೇ ದಯವಿಟ್ಟು ನಮ್ಮ ತಂದೆಯನ್ನು ಉಳಿಸಿ; ಕಣ್ಣೀರಿಡುತ್ತಾ ವಿಡಿಯೋ ಮಾಡಿದ ಯುವಕ

ಕೊಹ್ಲಿ ನಿನಗೆ ಮಾದರಿಯಾಗಲಿ; ಕೊರೊನಾದಿಂದ ತಾಯಿಯನ್ನು ಕಳೆದುಕೊಂಡ ಪ್ರಿಯಾ ಪುನಿಯಾಗೆ ತಂದೆಯ ಸಾಂತ್ವನ

(minister supporter has written to Dr K Sudhakar about the situation in Chikballapur hospital)

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್