ವೀರಪ್ಪನ್ ಹುಟ್ಟೂರಿನಲ್ಲಿ ಶಿಕ್ಷಣ ಸಚಿವರ ಶಾಲಾ ವಾಸ್ತವ್ಯ

ಚಾಮರಾಜನಗರ: ಶಿಕ್ಷಣ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎನ್. ಸುರೇಶ್ ಕುಮಾರ್ ಇಂದು ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ಗೋಪಿನಾಥಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೋಪಿನಾಥಂ ಕಾಡುಗಳ್ಳ ವೀರಪ್ಪನ್ ಹುಟ್ಟೂರು. ಕರ್ನಾಟಕ ಗಡಿಯಂಚಿನಲ್ಲಿ ಇರುವ ಈ ಗ್ರಾಮದಲ್ಲಿ ಇಂದು ಸಚಿವರು ವಾಸ್ತವ್ಯ ಹೂಡಲಿದ್ದಾರೆ. ಪ್ರಚಲಿತ ಶಿಕ್ಷಣದ ಸಮಸ್ಯೆ ಮತ್ತು ಪರಿಹಾರ ಕುರಿತು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಂವಾದ ನಡೆಸಲಿದ್ದಾರೆ. ಸೆ.19 ರಂದು ಮೊದಲ ಬಾರಿಗೆ ತುಮಕೂರು […]

ವೀರಪ್ಪನ್ ಹುಟ್ಟೂರಿನಲ್ಲಿ ಶಿಕ್ಷಣ ಸಚಿವರ ಶಾಲಾ ವಾಸ್ತವ್ಯ
ಸಾಧು ಶ್ರೀನಾಥ್​

Updated on: Nov 18, 2019 | 9:45 AM

ಚಾಮರಾಜನಗರ: ಶಿಕ್ಷಣ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎನ್. ಸುರೇಶ್ ಕುಮಾರ್ ಇಂದು ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ಗೋಪಿನಾಥಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೋಪಿನಾಥಂ ಕಾಡುಗಳ್ಳ ವೀರಪ್ಪನ್ ಹುಟ್ಟೂರು. ಕರ್ನಾಟಕ ಗಡಿಯಂಚಿನಲ್ಲಿ ಇರುವ ಈ ಗ್ರಾಮದಲ್ಲಿ ಇಂದು ಸಚಿವರು ವಾಸ್ತವ್ಯ ಹೂಡಲಿದ್ದಾರೆ. ಪ್ರಚಲಿತ ಶಿಕ್ಷಣದ ಸಮಸ್ಯೆ ಮತ್ತು ಪರಿಹಾರ ಕುರಿತು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಂವಾದ ನಡೆಸಲಿದ್ದಾರೆ.

ಸೆ.19 ರಂದು ಮೊದಲ ಬಾರಿಗೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಎನ್ ಅಚ್ಚಮ್ಮಹಳ್ಳಿ ಸ.ಪ್ರಾ.ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದ ಸಚಿವರು. ಎರಡನೇ ಬಾರಿಗೆ ಚಾಮರಾಜನಗರ ಜಿಲ್ಲೆಯ ಗೋಪುನಾಥಂ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸಚಿವರ ಆಗಮನಕ್ಕೆ ಶಾಲೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us